ದೇಶ

ಪಶ್ಚಿಮ ಬಂಗಾಳ: ರಾಮನವಮಿ ಆಯ್ತು ಈಗ ಹನುಮ ಜಯಂತಿ ಮೆರವಣಿಗೆಯಲ್ಲಿ ಪೊಲೀಸ್ ಲಾಠಿ ಚಾರ್ಜ್

Srinivas Rao BV
ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ. 
ರಾಮನವಮಿ ಆಚರಣೆಯ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಇಂಥಹದ್ದೇ ಅಹಿತಕರ ಘಟನೆ ನಡೆದಿತ್ತು. ಈಗ ಸಂಬಂಧಿಸಿದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೇ ಹನುಮ ಜಯಂತಿ ಆಚರಣೆ ನಡೆಸಲಾಗಿದೆ ಎಂಬ ಕಾರಣಕ್ಕೆ ಬಿರ್ಭಮ್ ನಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. 
ಹನುಮ ಜಯಂತಿ ಅಂಗವಾಗಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಆದರೆ ಮೆರವಣಿಗೆ ನಡೆಸುತ್ತಿದ್ದ ಸಂಘಟನೆ ಪೂರ್ವಾನುಮತಿ ಪಡೆಯದೇ ಇರುವುದನ್ನು ನಿರಾಕರಿಸಿದೆ. " ಹನುಮ ಜಯಂತಿ ಅಂಗವಾಗಿ ಮೆರವಣಿಗೆ ನಡೆಸುವುದಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದೆವು. ಆದರೆ ಅನುಮತಿ ನೀಡುವುದಕ್ಕೆ ಅಧಿಕಾರಿಗಳು ನಿರಾಕರಿಸಿದರು ಎಂದು ಪ್ರತ್ಯಾರೋಪ ಮಾಡಿದ್ದಾರೆ. 
ಕಳೆದ ವಾರ ರಾಮನವಮಿ ಆಚರಣೆಗೆ ಅಡ್ಡಿ ಉಂಟಾದಾಗ ಮಧ್ಯಪ್ರವೇಶಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಸ್ಥಳೀಯರು ರಾಮನವಮಿ ಆಚರಣೆ ಮಾಡುವುದಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು. 
SCROLL FOR NEXT