ಪಶ್ಚಿಮ ಬಂಗಾಳ 
ದೇಶ

ಪಶ್ಚಿಮ ಬಂಗಾಳ: ರಾಮನವಮಿ ಆಯ್ತು ಈಗ ಹನುಮ ಜಯಂತಿ ಮೆರವಣಿಗೆಯಲ್ಲಿ ಪೊಲೀಸ್ ಲಾಠಿ ಚಾರ್ಜ್

ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ. 
ರಾಮನವಮಿ ಆಚರಣೆಯ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಇಂಥಹದ್ದೇ ಅಹಿತಕರ ಘಟನೆ ನಡೆದಿತ್ತು. ಈಗ ಸಂಬಂಧಿಸಿದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೇ ಹನುಮ ಜಯಂತಿ ಆಚರಣೆ ನಡೆಸಲಾಗಿದೆ ಎಂಬ ಕಾರಣಕ್ಕೆ ಬಿರ್ಭಮ್ ನಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. 
ಹನುಮ ಜಯಂತಿ ಅಂಗವಾಗಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಆದರೆ ಮೆರವಣಿಗೆ ನಡೆಸುತ್ತಿದ್ದ ಸಂಘಟನೆ ಪೂರ್ವಾನುಮತಿ ಪಡೆಯದೇ ಇರುವುದನ್ನು ನಿರಾಕರಿಸಿದೆ. " ಹನುಮ ಜಯಂತಿ ಅಂಗವಾಗಿ ಮೆರವಣಿಗೆ ನಡೆಸುವುದಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದೆವು. ಆದರೆ ಅನುಮತಿ ನೀಡುವುದಕ್ಕೆ ಅಧಿಕಾರಿಗಳು ನಿರಾಕರಿಸಿದರು ಎಂದು ಪ್ರತ್ಯಾರೋಪ ಮಾಡಿದ್ದಾರೆ. 
ಕಳೆದ ವಾರ ರಾಮನವಮಿ ಆಚರಣೆಗೆ ಅಡ್ಡಿ ಉಂಟಾದಾಗ ಮಧ್ಯಪ್ರವೇಶಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಸ್ಥಳೀಯರು ರಾಮನವಮಿ ಆಚರಣೆ ಮಾಡುವುದಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಪ್ರಶ್ನೆಪತ್ರಿಕೆ ಸೋರಿಕೆ,'ಚಂದಾ ಚೋರಿ' ವಿರುದ್ಧ ರಾಷ್ಟ್ರವ್ಯಾಪಿ ಪ್ರತಿಭಟನೆಗೆ ಕಾಂಗ್ರೆಸ್ ನಿರ್ಧಾರ; 'ವಂದೇ ಮಾತರಂ'ನ ಎರಡು ಪ್ಯಾರಾ ಮಾತ್ರ ಹಾಡಲು ನಿರ್ಣಯ!

illegal gold mine: ಮಧ್ಯ ಆಫ್ರಿಕಾದಲ್ಲಿ ಭಯಾನಕ ದುರಂತ, ಚಿನ್ನದ ಗಣಿಯಲ್ಲಿ ಕುಸಿತ,100 ಮಂದಿ ದುರ್ಮರಣ! Video

ಮೂಡಾ ಅಕ್ರಮಕ್ಕೆ ಬ್ರೇಕ್: ₹2000 ಕೋಟಿ ಮೌಲ್ಯದ 1,100 ಸೈಟುಗಳ ಹಂಚಿಕೆ ರದ್ದು ಮಾಡಿದ ಯತೀಂದ್ರ ಸಿದ್ದರಾಮಯ್ಯ

ರೋಚಕ ಪಂದ್ಯದಲ್ಲಿ ಭಾರತ 5-3 ಗೋಲುಗಳಿಂದ ಪಾಕಿಸ್ತಾನವನ್ನು ಸೋಲಿಸಿ ವಿಶ್ವಕಪ್‌ನಿಂದ ಹೊರದೂಡಿದೆ!

ಬಾಲಿವುಡ್ ನಟ ಗೋವಿಂದಾ ದಾಂಪತ್ಯ ಕಿತ್ತಾಟದಲ್ಲಿ ಸ್ಫೋಟಕ ತಿರುವು: ವಿಚ್ಛೇದನ ಅರ್ಜಿ ಹಿಂಪಡೆದ ಪತ್ನಿ ಸುನೀತಾ ಅಹುಜಾ!