ಪಶ್ಚಿಮ ಬಂಗಾಳ 
ದೇಶ

ಪಶ್ಚಿಮ ಬಂಗಾಳ: ರಾಮನವಮಿ ಆಯ್ತು ಈಗ ಹನುಮ ಜಯಂತಿ ಮೆರವಣಿಗೆಯಲ್ಲಿ ಪೊಲೀಸ್ ಲಾಠಿ ಚಾರ್ಜ್

ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ.

ಕೋಲ್ಕತಾ: ಪಶ್ಚಿಮ ಬಂಗಾಳದ ಬಿರ್ಭಮ್ ನಲ್ಲಿ ಹನುಮ ಜಯಂತಿ ಆಚರಣೆ ವೇಳೆ ಲಾಠಿ ಚಾರ್ಜ್ ನಡೆದಿದೆ. 
ರಾಮನವಮಿ ಆಚರಣೆಯ ಸಂದರ್ಭದಲ್ಲಿಯೂ ಪಶ್ಚಿಮ ಬಂಗಾಳದಲ್ಲಿ ಇಂಥಹದ್ದೇ ಅಹಿತಕರ ಘಟನೆ ನಡೆದಿತ್ತು. ಈಗ ಸಂಬಂಧಿಸಿದ ಅಧಿಕಾರಿಗಳಿಂದ ಪೂರ್ವಾನುಮತಿ ಪಡೆಯದೇ ಹನುಮ ಜಯಂತಿ ಆಚರಣೆ ನಡೆಸಲಾಗಿದೆ ಎಂಬ ಕಾರಣಕ್ಕೆ ಬಿರ್ಭಮ್ ನಲ್ಲಿ ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. 
ಹನುಮ ಜಯಂತಿ ಅಂಗವಾಗಿ ಕೇಸರಿ ಧ್ವಜ ಹಿಡಿದು ಮೆರವಣಿಗೆಯಲ್ಲಿ ಭಾಗವಹಿಸಿದ್ದ ಯುವಕರ ಮೇಲೆ ಪೊಲೀಸರು ಲಾಠಿ ಪ್ರಹಾರ ಮಾಡಿರುವುದು ದೃಶ್ಯಾವಳಿಗಳಲ್ಲಿ ದಾಖಲಾಗಿದೆ. ಆದರೆ ಮೆರವಣಿಗೆ ನಡೆಸುತ್ತಿದ್ದ ಸಂಘಟನೆ ಪೂರ್ವಾನುಮತಿ ಪಡೆಯದೇ ಇರುವುದನ್ನು ನಿರಾಕರಿಸಿದೆ. " ಹನುಮ ಜಯಂತಿ ಅಂಗವಾಗಿ ಮೆರವಣಿಗೆ ನಡೆಸುವುದಕ್ಕೆ ಜಿಲ್ಲಾಡಳಿತ ಹಾಗೂ ಪೊಲೀಸ್ ಅಧಿಕಾರಿಗಳನ್ನು ಸಂಪರ್ಕಿಸಿದ್ದೆವು. ಆದರೆ ಅನುಮತಿ ನೀಡುವುದಕ್ಕೆ ಅಧಿಕಾರಿಗಳು ನಿರಾಕರಿಸಿದರು ಎಂದು ಪ್ರತ್ಯಾರೋಪ ಮಾಡಿದ್ದಾರೆ. 
ಕಳೆದ ವಾರ ರಾಮನವಮಿ ಆಚರಣೆಗೆ ಅಡ್ಡಿ ಉಂಟಾದಾಗ ಮಧ್ಯಪ್ರವೇಶಿಸಿದ್ದ ಕೋಲ್ಕತ್ತಾ ಹೈಕೋರ್ಟ್ ಸ್ಥಳೀಯರು ರಾಮನವಮಿ ಆಚರಣೆ ಮಾಡುವುದಕ್ಕೆ ಅನುಮತಿ ನೀಡುವಂತೆ ಸೂಚಿಸಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ನೊಬೆಲ್ ಶಾಂತಿ ಪ್ರಶಸ್ತಿ ಘೋಷಣೆಯಾಗುತ್ತಿದ್ದಂತೆಯೇ Maria Corina Machado ವಿವಾದಕ್ಕೆ ಗುರಿ; ಭುಗಿಲೆದ್ದ ಅಶಾಂತಿ!

Aligarh Businessman Murder: ಹಿಂದೂ ಮಹಾಸಭಾ ನಾಯಕಿ ಪೂಜಾ ಶಕುನ್ ಪಾಂಡೆ ಬಂಧನ! ಉದ್ಯಮಿಗೆ ಲೈಂಗಿಕ ಕಿರುಕುಳ ನೀಡಿದ್ರಾ?

'China isn't afraid': ಅಮೆರಿಕದ ಶೇ.100 ರಷ್ಟು ಸುಂಕದ ಬಗ್ಗೆ ಚೀನಿಯರ ಪ್ರತಿಕ್ರಿಯೆ!

ಲಾಲ್ ಬಾಗ್ ಅಭಿವೃದ್ಧಿಗೆ 10 ಕೋಟಿ ರೂ; ಸುರಂಗ ರಸ್ತೆ ಯೋಜನೆಯಿಂದ ಸಸ್ಯೋದ್ಯಾನದ ಮೇಲೆ ಯಾವುದೇ ಎಫೆಕ್ಟ್ ಆಗಲ್ಲ: ಡಿ.ಕೆ ಶಿವಕುಮಾರ್; Video

SCROLL FOR NEXT