ಕೇಜ್ರಿವಾಲ್ 
ದೇಶ

ಕೇಜ್ರಿವಾಲ್ ವಿರುದ್ಧ ವಾರೆಂಟ್ ಜಾರಿ ಮಾಡಿದ ಅಸ್ಸಾಂ ಕೋರ್ಟ್

ಅಸ್ಸಾಂ ನ ನ್ಯಾಯಾಲಯವೊಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾಮೀನು ಪಡೆಯಬಹುದಾದ ವಾರೆಂಟ್ ಜಾರಿ ಮಾಡಿದೆ.

ಗುವಾಹಟಿ: ಅಸ್ಸಾಂ ನ ನ್ಯಾಯಾಲಯವೊಂದು ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ವಿರುದ್ಧ ಜಾಮೀನು ಪಡೆಯಬಹುದಾದ ವಾರೆಂಟ್ ಜಾರಿ ಮಾಡಿದೆ. 
ಮಾನನಷ್ಟ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಖುದ್ದು ಹಾಜರಾಗಲು ವಿಫಲರಾಗಿದ್ದಕ್ಕೆ ಕೇಜ್ರಿವಾಲ್ ವಿರುದ್ಧ ಕೋರ್ಟ್ ವಾರೆಂಟ್ ಜಾರಿ ಮಾಡಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಬಗ್ಗೆ ಮಾನನಷ್ಟ ಹೇಳಿಕೆ ನೀಡಿದ್ದ ಹಿನ್ನೆಲೆಯಲ್ಲಿ ಬಿಜೆಪಿ ನಾಯಕ ಸುರ್ಜೋ ರಂಗ್‍ಫರ್ ಎಂಬುವವರು ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 
ಪ್ರಧಾನಿ ನರೇಂದ್ರ ಮೋದಿ ಅವರ ಪದವಿಗಳೆಲ್ಲಾ ನಕಲಿ ಎಂದು ಕೇಜ್ರಿವಾಲ್ ಟ್ವೀಟ್ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಪ್ರಧಾನಿ ಮೋದಿ ಅವರ ಶೈಕ್ಷಣಿಕ ಅರ್ಹತೆ ಬಗ್ಗೆ ಮಾನನಷ್ಟ ಹೇಳಿಕೆ ನೀಡಿದ ಆರೋಪದ ಮೇಲೆ ಸುರ್ಜೋ ರಂಗ್‍ಫರ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. 
ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ್ದ ಅಸ್ಸಾಂ ನ ಕೋರ್ಟ್ ಜ.30 ರಂದು ಕೋರ್ಟ್ ಎದುರು ಹಾಜರಾಗುವಂತೆ ನೋಟಿಸ್ ಜಾರಿ ಮಾಡಿತ್ತು. ಆದರೆ ಕೋರ್ಟ್ ಗೆ ಹಾಜರಾಗದ ಕಾರಣ ಈಗ ಅವರ ವಿರುದ್ಧ ವಾರೆಂಟ್ ಜಾರಿ ಮಾಡಿ ಮೇ.8 ಕ್ಕೆ ವಿಚಾರಣೆಯನ್ನು ಮುಂದೂಡಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ