ರಾಷ್ಟ್ರಪತಿ ಪ್ರಣಬ್ ಮುಖರ್ಜಿ
ನವದೆಹಲಿ:ವಿದ್ಯುನ್ಮಾನ ಮತ ಯಂತ್ರಗಳ ವಿವಾದದಲ್ಲಿ ಮಧ್ಯ ಪ್ರವೇಶಕ್ಕೆ ವಿರೋಧ ಪಕ್ಷ ಕಾಂಗ್ರೆಸ್ ರಾಷ್ಟ್ರಪತಿ ಪ್ರಣಬ್ ಮುಖರ್ಜಿಯವರ ಮೊರೆ ಹೋಗಲು ನಿರ್ಧರಿಸಿದೆ.
ವಿದ್ಯುನ್ಮಾನ ಮತಯಂತ್ರಗಳನ್ನು ವಿರೂಪಗೊಳಿಸಲಾಗಿದೆ ಎಂದು ಪ್ರತಿಪಕ್ಷ ಕಾಂಗ್ರೆಸ್ ಇತ್ತೀಚೆಗೆ ನಡೆದ 5 ರಾಜ್ಯಗಳ ವಿಧಾನಸಭಾ ಚುನಾವಣೆಗಳ ನಂತರ ಆರೋಪಿಸಿದ್ದಕ್ಕೆ ಚುನಾವಣಾ ಆಯೋಗ ಆರೋಪವನ್ನು ತಳ್ಳಿಹಾಕಿ ತೀವ್ರ ಆಕ್ಷೇಪ ವ್ಯಕ್ತಪಡಿಸಿತ್ತು. ಇದೀಗ ವಿವಾದವನ್ನು ಬಗೆಹರಿಸುವಂತೆ ಕಾಂಗ್ರೆಸ್ ರಾಷ್ಟ್ರಪತಿಯವರ ಮೊರೆ ಹೋಗಲು ನಿರ್ಧರಿಸಿದೆ.
ವಿದ್ಯುನ್ಮಾನ ಮತ ಯಂತ್ರಗಳ ಬದಲಿಗೆ ಬ್ಯಾಲೆಟ್ ಪೇಪರ್ ಗಳನ್ನು ಬಳಸವಂತೆ ಅದು ಸಲಹೆ ನೀಡಿದೆ. ತಮಗೆ ಭಾರತೀಯ ಚುನಾವಣಾ ಆಯೋಗದ ಮೇಲೆ ನಂಬಿಕೆಯಿದೆ ಹೊರತು ವಿದ್ಯುನ್ಮಾನ ಮತಯಂತ್ರಗಳ ಮೇಲೆ ಅಲ್ಲ ಎಂದು ಅದು ಹೇಳಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos