ಸಾಂದರ್ಭಿಕ ಚಿತ್ರ 
ದೇಶ

ಸುಂದರವಾಗಿಲ್ಲ ಎಂಬ ಕಾರಣಕ್ಕೆ ಪತಿಯನ್ನೇ ಹತ್ಯೆ ಮಾಡಿದ ನವ ವಧು

ಹೊಸದಾಗಿ ಮದುವೆಯಾಗಿದ್ದ ಮಹಿಳೆಯೊಬ್ಬರು ತನ್ನ ಪತಿ ಸುಂದರವಾಗಿಲ್ಲ ಎಂಬ ಕಾರಣಕ್ಕೆ ಆತನ ತಲೆ ಮೇಲೆ ರುಬ್ಬುಗಲ್ಲು...

ಕುಡಲೂರು: ಹೊಸದಾಗಿ ಮದುವೆಯಾಗಿದ್ದ ಮಹಿಳೆಯೊಬ್ಬರು ತನ್ನ ಪತಿ ಸುಂದರವಾಗಿಲ್ಲ ಎಂಬ ಕಾರಣಕ್ಕೆ ಆತನ ತಲೆ ಮೇಲೆ ರುಬ್ಬುಗಲ್ಲು ಎತ್ತಿಹಾಕಿ ಹತ್ಯೆ ಮಾಡಿದ ಘಟನೆ ತಮಿಳುನಾಡಿನ ಕುಡಲೂರು ಜಿಲ್ಲೆಯಲ್ಲಿ ನಡೆದಿದೆ.
ಒಂದು ವಾರದ ಹಿಂದಷ್ಟೆ ಮದುವೆಯಾಗಿದ್ದ 22 ವರ್ಷದ ಮಹಿಳೆ ನಿನ್ನೆ ರಾತ್ರಿ ತನ್ನ ಪತಿಯೊಂದಿಗೆ ಜಗಳ ಮಾಡಿದ್ದು, ಈ ವೇಳೆ ಪತಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಕೊಲೆ ಮಾಡಿರುವುದಾಗಿ ಪೊಲೀಸರು ಮಂಗಳವಾರ ತಿಳಿಸಿದ್ದಾರೆ.
ಮಹಿಳೆ ಸ್ನೇಹಿತರು ಮತ್ತು ಸಂಬಂಧಿಗಳು ನಿನ್ನ ಪತಿ ಸುಂದರವಾಗಿಲ್ಲ. ಆತ ನಿನಗೆ ಸರಿಯಾದ ಜೋಡಿ ಅಲ್ಲ ಎಂದು ಹೇಳಿದ್ದರಿಂದ ತೀವ್ರ ಬೇಸರಗೊಂಡಿದ್ದ ನವ ವಧು, ಪತಿಯನ್ನು ಹತ್ಯೆ ಮಾಡಿದ್ದಾಳೆ. ಬಳಿಕ ಪೊಲೀಸ್ ಠಾಣೆಗೆ ತೆರಳಿ ತನ್ನ ಪತಿಯನ್ನು ಯಾರೋ ಕೊಲೆ ಮಾಡಿದ್ದಾರೆ ಎಂದು ದೂರು ನೀಡಿದ್ದಳು. 
ತನಿಖೆ ನಡೆಸಿದ ಪೊಲೀಸರು ಪತಿಯನ್ನು ಕೊಂದ ಕೊಲೆಗಾತಿಯನ್ನು ಇಂದು ಬಂಧಿಸಿ ಕೋರ್ಟ್ ಗೆ ಹಾಜರುಪಡಿಸಿದ್ದಾರೆ. ವಿಚಾರಣೆ ನಡೆಸಿದ ಕೋರ್ಟ್ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT