ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ 
ದೇಶ

ಮಮತಾ ತಲೆಗೆ ಕಡಿದವರಿಗೆ ರೂ.11 ಲಕ್ಷ ಬಹುಮಾನ: ಬಿಜೆವೈಎಂ ನಾಯಕ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತಲೆ ಕಡಿದವರಿಗೆ ರೂ.11 ಲಕ್ಷ ಬಹುಮಾನವನ್ನು ನೀಡುತ್ತೇನೆಂದು ಭಾರತೀಯ ಜನತಾ ಯುವ ಮೋರ್ಚಾ ಸಂಘಟನೆಯ ನಾಯಕೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ...

ಆಲಿಗಢ: ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರ ತಲೆ ಕಡಿದವರಿಗೆ ರೂ.11 ಲಕ್ಷ ಬಹುಮಾನವನ್ನು ನೀಡುತ್ತೇನೆಂದು ಭಾರತೀಯ ಜನತಾ ಯುವ ಮೋರ್ಚಾ ಸಂಘಟನೆಯ ನಾಯಕೊಬ್ಬರು ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. 
ಹನುಮಾನ್ ಜಯಂತಿ ಪ್ರಯುಕ್ತ ಬಿರ್ಭುಮ್ ಜಿಲ್ಲೆಯಲ್ಲಿ 'ಜೈ ಶ್ರೀ ರಾಮ್' ಘೋಷಣೆಯ ರ್ಯಾಲಿಯನ್ನು ಆಯೋಜಿಸಲಾಗಿತ್ತು. ರ್ಯಾಲಿಯನ್ನು ಚದುರಿಸುವ ಸಲುವಾಗಿ ಪೊಲೀಸರು ಲಾಠಿಚಾರ್ಜ್ ನಡೆಸಿದ್ದರು. ಇದಕ್ಕೆ ಮಮತಾ ಬ್ಯಾನರ್ಜಿಯವರ ವಿರುದ್ಧ ತೀವ್ರವಾಗಿ ಕಿಡಿಕಾರಿರುವ ಬಿಜೆವೈಎಂ ನಾಯಕ ಯೋಗೇಶ್ ವರ್ಶ್ನೆ ಅವರು, ಮಮತಾ ಬ್ಯಾನರ್ಜಿಯವರ ತಲೆ ಕಡಿದವರಿಗೆ ರೂ.11 ಲಕ್ಷ ಬಹುಮಾನ ನೀಡುವುದಾಗಿ ಘೋಷಣೆ ಮಾಡಿದ್ದಾರೆ. 
ಮಮತಾ ಬ್ಯಾನರ್ಜಿಯವರು ಸರಸ್ವತಿ ಪೂಜೆ ಮಾಡಲು ಎಂದಿಗೂ ಬಿಟ್ಟಿಲ್ಲ. ರಾಮ ನವಮಿ, ಹನುಮ ಜಯಂತಿ ವೇಳೆ ಜನರ ಮೇಲೆ ಲಾಠಿ ಚಾರ್ಜ್ ಮಾಡಿಸಿದ್ದಾರೆ. ಇಫ್ತಾರ್ ಪಾರ್ಟಿಗಳನ್ನು ಆಯೋಜಿಸಿ ಯಾವಾಗಲೂ ಮುಸ್ಲಿಮರಿಗೆ ಬೆಂಬಲ ನೀಡುತ್ತಾರೆ. ಹೀಗಾಗಿ ಮಮತಾ ಬ್ಯಾನರ್ಜಿಯವರ ತಲೆಯನ್ನು ಯಾರು ಕಡಿಯುತ್ತಾರೋ ಅವರಿಗೆ ರೂ.11 ಲಕ್ಷ ಇನಾಮು ನೀಡುತ್ತೇನೆಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT