ಅಖಿಲೇಶ್ ದಾಸ್ ಗುಪ್ತಾ 
ದೇಶ

ಕಾಂಗ್ರೆಸ್ ಮುಖಂಡ ಅಖಿಲೇಶ್ ದಾಸ್ ಗುಪ್ತ ವಿಧಿವಶ, ಪ್ರಧಾನಿ ಮೋದಿ ಸಂತಾಪ

ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಅಖಿಲೇಶ್ ದಾಸ್ ಗುಪ್ತಾ ಅವರು ವಿಧಿವಶರಾಗಿದ್ದಾರೆ...

ಲಖನೌ: ಮಾಜಿ ಕೇಂದ್ರ ಸಚಿವ, ಕಾಂಗ್ರೆಸ್ ಹಿರಿಯ ಮುಖಂಡ ಅಖಿಲೇಶ್ ದಾಸ್ ಗುಪ್ತಾ ಅವರು ವಿಧಿವಶರಾಗಿದ್ದಾರೆ. 
ತೀವ್ರ ಹೃದಯಾಘಾತಕ್ಕೀಡಾಗಿದ್ದ ಅಖಿಲೇಶ್ ಅವರನ್ನು ಕೂಡಲೇ ಲರಿ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ವಿಧಿವಶರಾಗಿದ್ದಾರೆ ಎಂದು ಕಾಂಗ್ರೆಸ್ ಮೂಲಗಳು ತಿಳಿಸಿವೆ. 
ಅಖಿಲೇಶ್ ದಾಸ್ ಗುಪ್ತಾ ಅವರು ಉತ್ತರಪ್ರದೇಶ ಮಾಜಿ ಮುಖ್ಯಮಂತ್ರಿ ಬನರ್ಸಿ ದಾಸ್ ಗುಪ್ತಾ ಅವರ ಮಗನಾಗಿದ್ದು ಪತ್ನಿ, ಪುತ್ರಿ ಮತ್ತು ಪುತ್ರನನ್ನು ಅಗಲಿದ್ದಾರೆ. 
ಬ್ಯಾಡ್ಮಿಂಟನ್ ಅಸೋಸಿಯೇಷನ್ ಆಫ್ ಇಂಡಿಯಾ(ಬಿಎಐ)ನ ಅಧ್ಯಕ್ಷರಾಗಿದ್ದ ವಿಕೆ ವರ್ಮಾ ಅವರನ್ನು ಭ್ರಷ್ಟಾಚಾರದ ಆರೋಪದ ಮೇಲೆ 2010ರಲ್ಲಿ ಬಂಧನವಾದ ನಂತರ ಅಖಿಲೇಶ್ ದಾಸ್ ಗುಪ್ತಾ ಅವರು 2012ರಲ್ಲಿ ಬಿಎಐನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದರು. 
ಅಖಿಲೇಶ್ ದಾಸ್ ಗುಪ್ತ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ
ಮಾಜಿ ಕೇಂದ್ರ ಸಚಿವ ಅಖಿಲೇಶ್ ದಾಸ್ ಗುಪ್ತಾ ಅವರು ತೀವ್ರ ಹೃದಯಾಘಾತದಿಂದಾಗಿ ನಿಧನರಾಗಿದ್ದು ಪ್ರಧಾನಿ ನರೇಂದ್ರ ಮೋದಿ ಅವರು ಸಂತಾಪ ಸೂಚಿಸಿದ್ದಾರೆ. ಟ್ವೀಟ್ ಮಾಡಿರುವ ಪ್ರಧಾನಿ ಮೋದಿ ಅವರು, ಅಖಿಲೇಶ್ ದಾಸ್ ಗುಪ್ತಾ ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುವೆ. ಅವರ ಸಾವಿನ ನೋವನ್ನು ತಡೆದುಕೊಳ್ಳುವ ಶಕ್ತಿಯನ್ನು ಕುಟಂಬಕ್ಕೆ ನೀಡಲಿದೆ ಎಂದು ದೇವರಲ್ಲಿ ಪ್ರಾರ್ಥಿಸುವಂತೆ ಬರೆದಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ