ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಜಾಪ್ರಭುತ್ವ ರಹಿತ ಪಾಕಿಸ್ತಾನವನ್ನು ವಿಭಜಿಸಲು ಇದು ಸಕಾಲ: ಸುಬ್ರಮಣಿಯನ್ ಸ್ವಾಮಿ

ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡದ ನೆರೆ ರಾಷ್ಟ್ರ ಪಾಕಿಸ್ತಾನ ತಾಲಿಬಾನ್ ಹಾಗೂ ಭಯೋತ್ಪಾದನೆಯನ್ನು ನಡೆಸುತ್ತಿದ್ದು, ಪಾಕಿಸ್ತಾನವನ್ನು ವಿಭಜಿಸಲು ಇದು ಸರಿಯಾದ ಸಮಯವಾಗಿದೆ ಎಂದು...

ನವದೆಹಲಿ: ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡದ ನೆರೆ ರಾಷ್ಟ್ರ ಪಾಕಿಸ್ತಾನ ತಾಲಿಬಾನ್ ಹಾಗೂ ಭಯೋತ್ಪಾದನೆಯನ್ನು ನಡೆಸುತ್ತಿದ್ದು, ಪಾಕಿಸ್ತಾನವನ್ನು ವಿಭಜಿಸಲು ಇದು ಸರಿಯಾದ ಸಮಯವಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬುಧವಾರ ಹೇಳಿದ್ದಾರೆ. 
ಕುಲ್'ಭೂಷಣ್ ಜಾದವ್ ಅವರಿಗೆ ಪಾಕಿಸ್ತಾನ ಗಲ್ಲುಶಿಕ್ಷೆ ವಿಧಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ತಮ್ಮ ದೇಶದಲ್ಲಿ ನಗೆಪಾಟಲಿಗೆ ಈಡಾಗುತ್ತಿದ್ದಾರೆ. ಜನತೆ ನಾಗರೀಕರಾಗುತ್ತಾರೆಂದು ತಿಳಿದು ನಾವು ಪಾಕಿಸ್ತಾನ ರಚನೆಯಾಗಲಿ ಎಂದು 1947ರಲ್ಲಿ ಅವಕಾಶ ನೀಡಿದ್ದೆವು. ಆದರೆ, ಅವರು ನಾಗರೀಕರಾಗದೆ ಇರುವುದು ದುರಾದೃಷ್ಟಕರ ಸಂಗತಿ. ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವವೆಂಬುದೇ ಇಲ್ಲ ಎಂದು ಹೇಳಿದ್ದಾರೆ. 
ಪಾಕಿಸ್ತಾನ ರಾಷ್ಟ್ರ ತಾಲಿಬಾನ್ ಹಾಗೂ ಭಯೋತ್ಪಾದನೆಯನ್ನು ನಡೆಸುತ್ತಿದೆ. ಬಲೂಚಿಸ್ತಾನವನ್ನು ಸ್ವತಂತ್ರ್ಯ ರಾಷ್ಟ್ರವಾಗಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಪಾಕಿಸ್ತಾನವನ್ನು ವಿಭಜಿಸಲು ಇದು ಸರಿಯಾದ ಸಮಯವಾಗಿದೆ. ಪಾಕಿಸ್ತಾನ ಇಬ್ಬಾಗವಾಗುವಂತೆ ಮಾಡಿದ್ದೆವು. ಈಗ ಪಾಕಿಸ್ತಾನವನ್ನು ನಾಲ್ಕು ಭಾಗವಾಗುವಂತೆ ಮಾಡಬೇಕಿದೆ. ಈ ಕೆಲಸವನ್ನು ಬಲೂಚಿಸ್ತಾನದ ಮೂಲಕವೇ ಪ್ರಾರಂಭಿಸೋಣ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

West-Asia war: ಅಮೆರಿಕಾ-ಇರಾನ್ ಸಂಘರ್ಷ ಮತ್ತಷ್ಟು ತೀವ್ರ; ಹಾರ್ಮುಜ್ ಜಲಸಂಧಿ ಮೇಲೆ ನೌಕಾ ದಿಗ್ಬಂಧನ, ಜಾಗತಿಕ ಮಾರುಕಟ್ಟೆಗಳಲ್ಲಿ ಹೆಚ್ಚಿದ ಆತಂಕ

ಕಾಂಗ್ರೆಸ್‌ನಲ್ಲಿ ಕುರ್ಚಿ ಕಸರತ್ತು: ದೆಹಲಿಗೆ 'ಕೈ' ಶಾಸಕರ ಪ್ರಯಾಣ, ಸಚಿವ ಸ್ಥಾನಕ್ಕಾಗಿ ಲಾಬಿ..!

'ಅಲ್ಪಸಂಖ್ಯಾತರ ಚಾಂಪಿಯನ್‌ ಎನಿಸಿಕೊಂಡವರ ಡಬಲ್‌ ಗೇಮ್‌: ದಾವಣಗೆರೆಯಲ್ಲಿ ನಮ್ಮ ಅಭ್ಯರ್ಥಿಯನ್ನೇ ಸೋಲಿಸಲು ಯತ್ನ'

ಗ್ರಾಮೀಣ ಪ್ರದೇಶಗಳಿಗೆ ಅಗ್ಗದ ದರದಲ್ಲಿ ಔಷಧಿ: ಇಂಡಿಯಾ ಪೋಸ್ಟ್‌ ಮೂಲಕ ಜನೌಷಧಿ ಸೇವೆ ವಿಸ್ತರಿಸಲು ಕೇಂದ್ರ ಸರ್ಕಾರ ಚಿಂತನೆ..!

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

SCROLL FOR NEXT