ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ಪ್ರಜಾಪ್ರಭುತ್ವ ರಹಿತ ಪಾಕಿಸ್ತಾನವನ್ನು ವಿಭಜಿಸಲು ಇದು ಸಕಾಲ: ಸುಬ್ರಮಣಿಯನ್ ಸ್ವಾಮಿ

ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡದ ನೆರೆ ರಾಷ್ಟ್ರ ಪಾಕಿಸ್ತಾನ ತಾಲಿಬಾನ್ ಹಾಗೂ ಭಯೋತ್ಪಾದನೆಯನ್ನು ನಡೆಸುತ್ತಿದ್ದು, ಪಾಕಿಸ್ತಾನವನ್ನು ವಿಭಜಿಸಲು ಇದು ಸರಿಯಾದ ಸಮಯವಾಗಿದೆ ಎಂದು...

ನವದೆಹಲಿ: ಪ್ರಜಾಪ್ರಭುತ್ವದ ಮೇಲೆ ನಂಬಿಕೆಯಿಡದ ನೆರೆ ರಾಷ್ಟ್ರ ಪಾಕಿಸ್ತಾನ ತಾಲಿಬಾನ್ ಹಾಗೂ ಭಯೋತ್ಪಾದನೆಯನ್ನು ನಡೆಸುತ್ತಿದ್ದು, ಪಾಕಿಸ್ತಾನವನ್ನು ವಿಭಜಿಸಲು ಇದು ಸರಿಯಾದ ಸಮಯವಾಗಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬುಧವಾರ ಹೇಳಿದ್ದಾರೆ. 
ಕುಲ್'ಭೂಷಣ್ ಜಾದವ್ ಅವರಿಗೆ ಪಾಕಿಸ್ತಾನ ಗಲ್ಲುಶಿಕ್ಷೆ ವಿಧಿಸಿರುವ ಹಿನ್ನಲೆಯಲ್ಲಿ ಪ್ರತಿಕ್ರಿಯೆ ನೀಡಿರುವ ಅವರು, ಇತ್ತೀಚಿನ ದಿನಗಳಲ್ಲಿ ಪಾಕಿಸ್ತಾನ ಪ್ರಧಾನಮಂತ್ರಿ ನವಾಜ್ ಷರೀಫ್ ಅವರು ತಮ್ಮ ದೇಶದಲ್ಲಿ ನಗೆಪಾಟಲಿಗೆ ಈಡಾಗುತ್ತಿದ್ದಾರೆ. ಜನತೆ ನಾಗರೀಕರಾಗುತ್ತಾರೆಂದು ತಿಳಿದು ನಾವು ಪಾಕಿಸ್ತಾನ ರಚನೆಯಾಗಲಿ ಎಂದು 1947ರಲ್ಲಿ ಅವಕಾಶ ನೀಡಿದ್ದೆವು. ಆದರೆ, ಅವರು ನಾಗರೀಕರಾಗದೆ ಇರುವುದು ದುರಾದೃಷ್ಟಕರ ಸಂಗತಿ. ಪಾಕಿಸ್ತಾನದಲ್ಲಿ ಪ್ರಜಾಪ್ರಭುತ್ವವೆಂಬುದೇ ಇಲ್ಲ ಎಂದು ಹೇಳಿದ್ದಾರೆ. 
ಪಾಕಿಸ್ತಾನ ರಾಷ್ಟ್ರ ತಾಲಿಬಾನ್ ಹಾಗೂ ಭಯೋತ್ಪಾದನೆಯನ್ನು ನಡೆಸುತ್ತಿದೆ. ಬಲೂಚಿಸ್ತಾನವನ್ನು ಸ್ವತಂತ್ರ್ಯ ರಾಷ್ಟ್ರವಾಗಿಸಬೇಕೆಂಬ ಕೂಗು ಕೇಳಿ ಬರುತ್ತಿದೆ. ಪಾಕಿಸ್ತಾನವನ್ನು ವಿಭಜಿಸಲು ಇದು ಸರಿಯಾದ ಸಮಯವಾಗಿದೆ. ಪಾಕಿಸ್ತಾನ ಇಬ್ಬಾಗವಾಗುವಂತೆ ಮಾಡಿದ್ದೆವು. ಈಗ ಪಾಕಿಸ್ತಾನವನ್ನು ನಾಲ್ಕು ಭಾಗವಾಗುವಂತೆ ಮಾಡಬೇಕಿದೆ. ಈ ಕೆಲಸವನ್ನು ಬಲೂಚಿಸ್ತಾನದ ಮೂಲಕವೇ ಪ್ರಾರಂಭಿಸೋಣ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT