ಕೊಯ್ನಾ ಜಲಾಶಯ 
ದೇಶ

ಬರ ಪೀಡಿತ ಕರ್ನಾಟಕಕ್ಕೆ 2.5 ಟಿಎಂಸಿ ನೀರು ಬಿಡುಗಡೆ ಮಾಡಿದ "ಮಹಾ"!

ತೀವ್ರ ಬರಗಾಲದಿಂದ ನರಳುತ್ತಿರುವ ಉತ್ತರ ಕರ್ನಾಟಕದ ಭಾಗಕ್ಕೆ ನೀರು ಬಿಡುವ ಮೂಲಕ ಮಹಾರಾಷ್ಟ್ರ ಸರ್ಕಾರ ಮಾನವೀಯತೆ ಮೆರೆದಿದೆ.

ಮುಂಬೈ: ತೀವ್ರ ಬರಗಾಲದಿಂದ ನರಳುತ್ತಿರುವ ಉತ್ತರ ಕರ್ನಾಟಕದ ಭಾಗಕ್ಕೆ ನೀರು ಬಿಡುವ ಮೂಲಕ ಮಹಾರಾಷ್ಟ್ರ ಸರ್ಕಾರ ಮಾನವೀಯತೆ ಮೆರೆದಿದೆ.

ಬಿರು ಬೇಸಿಗೆಯ ಬರಗಾಲದಲ್ಲೂ ಮಹಾರಾಷ್ಟ್ರಸರ್ಕಾರ ತನ್ನ ಕೊಯ್ನಾ ಜಲಾಶಯದಿಂದ ಕರ್ನಾಟಕಕ್ಕೆ 2.5 ಟಿಎಂಸಿ ನೀರು ಹರಿಸಿದ್ದು, ಮಂಗಳವಾರ ಮಧ್ಯರಾತ್ರಿ ಜಲಾಶಯದಿಂದ ಕರ್ನಾಟಕಕ್ಕೆ ನೀರು ಹರಿಸಲಾಗಿದೆ. ಭೀಕರ ಬರಗಾಲ ಮತ್ತು ಮಳೆ ಅಭಾವದಿಂದ ಬಳಲುತ್ತಿರುವ ಕರ್ನಾಟಕ ಸರ್ಕಾರ ನೀರು ಬಿಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಅಲ್ಲದೆ ರಾಜ್ಯದ ಬಿಜೆಪಿ ಮುಖಂಡರು ಹಾಗೂ ಸಿಎಂ ಸಿದ್ದರಾಮಯ್ಯ ಅವರು ಬರಗಾಲ ಪೀಡಿತ ಪ್ರದೇಶಕ್ಕೆ ನೀರು ಬಿಡುವಂತೆ ಮನವಿ ಮಾಡಿದ್ದರು.

ಅಂತೆಯೇ ರಾಜ್ಯ ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ಅವರು ಆಲಮಟ್ಟಿ ಜಲಾಶಯದಿಂದ ಸೊಲ್ಲಾಪುರ ಭಾಗಕ್ಕೆ ನೀರು ಕೊಡಲಾಗುವುದು, ಕೋಯ್ನಾದಿಂದ ಉತ್ತರ ಕರ್ನಾಟಕ ಭಾಗಕ್ಕೆ ನೀರು ಕೊಡುವಂತೆ ಮಹಾರಾಷ್ಟ್ರ ಸರ್ಕಾರಕ್ಕೆ ತಿಳಿಸಿದ್ದರು. ಈ ಹಿನ್ನಲೆಯಲ್ಲಿ ಮಹಾರಾಷ್ಟ್ರ ಸರ್ಕಾರ ಕರ್ನಾಟಕಕ್ಕೆ ಮಂಗಳವಾರ ರಾತ್ರಿ 2.5 ಟಿಎಂಸಿ ನೀರನ್ನು ಹರಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

ಭಾರತದ ಮೇಲೆ ಸುಂಕಾಸ್ತ್ರ ಜಾರಿ: ಮತ್ತೆ ಇಂಡೋ-ಪಾಕ್ ಯುದ್ಧ ನಿಲ್ಲಿಸಿದ್ದು ನಾನೇ ಎಂದು ಪುನರುಚ್ಛರಿಸಿದ ಡೊನಾಲ್ಡ್ ಟ್ರಂಪ್

SCROLL FOR NEXT