ದೇಶ

ಷರತ್ತುಗಳೊಂದಿಗೆ ಸಹೋದರನನ್ನು ಬಿಎಸ್ ಪಿ ಉಪಾಧ್ಯಕ್ಷರನ್ನಾಗಿ ನೇಮಿಸಿದ ಮಾಯಾವತಿ

Shilpa D
ಲಕ್ನೋ: ಬಹುಜನ ಸಮಾಜವಾದಿ ಪಕ್ಷದ ಉಪಾಧ್ಯಕ್ಷರನ್ನಾಗಿ ತಮ್ಮ ಸಹೋದರ ಆನಂದ್ ಕುಮಾರ್ ಅವರನ್ನು ಮಾಯಾವತಿ ನೇಮಕ ಮಾಡಿದ್ದಾರೆ.
ಯಾವುದೇ ಕಾರಣಕ್ಕೂ ಶಾಸಕ, ಸಂಸದ ಮತ್ತು ಮುಖ್ಯಮಂತ್ರಿಯಾಗಬಾರದೆಂಬ ಷರತ್ತಿನ ಮೇಲೆ ಆನಂದ್ ಕುಮಾರ್ ಅವರನ್ನು ಬಿಎಸ್ ಪಿ ಉಪಾಧ್ಯಕ್ಷರನ್ನಾಗಿ ನೇಮಿಸಿದ್ದಾರೆ.
ನಾನು ಇವಿಎಂ ಯಂತ್ರಗಳ ಬಗ್ಗೆ ಆರೋಪ ಮಾಡಿದ ಹಿನ್ನೆಲೆಯಲ್ಲಿ ನನ್ನನ್ನು ಟಾರ್ಗೆಟ್ ಮಾಡಲಾಗಿದೆ. ಹೀಗಾಗಿ ನನ್ನ ವಿರುದ್ದ 21 ಸಕ್ಕರೆ ಕಾರ್ಖಾನೆಗಳ ಮಾರಾಟ ಮಾಡಿದ ಆರೋಪ ಮಾಡಲಾಗುತ್ತಿದೆ ಎಂದು ಹೇಳಿದ್ದಾರೆ.
ಮಾಯಾವತಿ ಮುಖ್ಯಮಂತ್ರಿಯಾಗಿದ್ದ ವೇಳೆ 21 ಸರ್ಕಾರಿ ಸಕ್ಕರೆ ಕಾರ್ಖಾನೆ ಮಾರಾಟ ಮಾಡಿದ್ದರ ಸಂಬಂಧ ಸಿಎಂ ಯೋಗಿ ಆದಿತ್ಯನಾಥ್ ತನಿಖೆಗೆ ಆದೇಶಿಸಿದ್ದಾರೆ. 
SCROLL FOR NEXT