ಹಳಿತಪ್ಪಿದ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು: ಇಬ್ಬರಿಗೆ ಗಾಯ 
ದೇಶ

ಹಳಿತಪ್ಪಿದ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು; ಇಬ್ಬರಿಗೆ ಗಾಯ

ಉತ್ತರಪ್ರದೇಶ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ...

ನವದೆಹಲಿ: ಉತ್ತರಪ್ರದೇಶ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ.
ರಾಣಿ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. 
ಘಟನೆ ಸಂಬಂಧ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಸಂಬಂಧ ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇನೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ. 
ರೈಲು ಅಪಘಾತದಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ. ಯಾವುದೇ ಸಾವುಗಳು ಸಂಭವಿಸಿಲ್ಲ. ಪ್ರಕರಣವನ್ನು ತನಿಖೆಗೆ ಆದೇಶಲಾಗಿದ್ದು, ತಪ್ಪಿತಸ್ಧರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಗಾಯಾಳುಗಳಿಗೆ ರೂ. 50 ಸಾವಿರ ಪರಿಹಾರವನ್ನು ನೀಡಲಾಗುವುದು ಎಂದು ಸುರೇಶ್ ಪ್ರಭು ಅವರು ತಿಳಿಸಿದ್ದಾರೆ. 

ಉತ್ತರ ರೈಲ್ವೆ ವಕ್ತಾರ ಉತ್ತರ ರೈಲ್ವೆ ವಕ್ತಾರ ನೀರಜ್ ಶರ್ಮಾ ಮಾತನಾಡಿ, 8 ಬೋಗಿಗಳ ಪೈಕಿ 2 ಬೋಗಿಗಳು ನಾಶವಾಗಿದೆ. ಪ್ರಯಾಣಿಕರ ಸಂಬಂಧಿಕರಿಗಾಗಿ ಈಗಾಗಲೇ ಸಹಾಯವಾಣಿಗಳನ್ನು ತೆರೆಯಲಾಗಿದೆ. ರೈಲು ಹಳಿ ತಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ಮೊರಾದಾಬಾದ್ ಡಿಆರ್'ಎಂ ಪ್ರಮೋದ್ ಕುಮಾರ್ ಸೇರಿದಂತೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ವೈದ್ಯಕೀಯ ತಂಡ ಕೂಡ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದರು ಎಂದು ಹೇಳಿದ್ದಾರೆ. 

ಘಟನೆಯನ್ನು ಸೇರಿದಂತೆ ಉತ್ತರಪ್ರದೇಶ ರಾಜ್ಯದಲ್ಲಿ 1 ತಿಂಗಳಲ್ಲಿ ಎರಡು ರೈಲುಗಳು ಹಳಿತಪ್ಪಿದಂತಾಗಿದೆ. ಮಾರ್ಚ್ 31 ರಂದು ಮಹಾರೋಶ್ಲಾ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ 25 ಜನರು ಸಾವನ್ನಪ್ಪಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT