ಹಳಿತಪ್ಪಿದ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು: ಇಬ್ಬರಿಗೆ ಗಾಯ 
ದೇಶ

ಹಳಿತಪ್ಪಿದ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು; ಇಬ್ಬರಿಗೆ ಗಾಯ

ಉತ್ತರಪ್ರದೇಶ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ...

ನವದೆಹಲಿ: ಉತ್ತರಪ್ರದೇಶ ಮೀರತ್-ಲಖನೌ ರಾಜ್ಯ ರಾಣಿ ಎಕ್ಸ್'ಪ್ರೆಸ್ ರೈಲು ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆಯೊಂದು ಶನಿವಾರ ಬೆಳಿಗ್ಗೆ ನಡೆದಿದೆ.
ರಾಣಿ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಇಂದು ಬೆಳಿಗ್ಗೆ 8 ಗಂಟೆ ಸುಮಾರಿಗೆ ರಾಂಪುರ ಜಿಲ್ಲೆ ಬಳಿ ಹಳಿತಪ್ಪಿದ್ದು, ಘಟನೆಯಲ್ಲಿ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆಂದು ವರದಿಗಳು ತಿಳಿಸಿವೆ. ಸುದ್ದಿ ತಿಳಿಯುತ್ತಿದ್ದಂತೆ ಸ್ಥಳಕ್ಕಾಗಮಿಸಿರುವ ಅಧಿಕಾರಿಗಳು ರಕ್ಷಣಾ ಕಾರ್ಯಾಚರಣೆ ನಡೆಸುತ್ತಿದ್ದಾರೆ. 
ಘಟನೆ ಸಂಬಂಧ ಕೇಂದ್ರ ರೈಲ್ವೇ ಸಚಿವ ಸುರೇಶ್ ಪ್ರಭು ಅವರು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದು, ಪ್ರಕರಣ ಸಂಬಂಧ ವೈಯಕ್ತಿಕವಾಗಿ ಪರಿಸ್ಥಿತಿಯನ್ನು ಪರಿಶೀಲಿಸುತ್ತಿದ್ದೇನೆ. ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸುತ್ತಿದ್ದಾರೆ. ಗಾಯಾಳುಗಳು ಶೀಘ್ರಗತಿಯಲ್ಲಿ ಗುಣಮುಖರಾಗಲಿ ಎಂದು ಆಶಿಸುತ್ತೇನೆಂದು ಹೇಳಿದ್ದಾರೆ. 
ರೈಲು ಅಪಘಾತದಲ್ಲಿ ಇಬ್ಬರು ಪ್ರಯಾಣಿಕರಿಗೆ ಗಾಯವಾಗಿದೆ. ಯಾವುದೇ ಸಾವುಗಳು ಸಂಭವಿಸಿಲ್ಲ. ಪ್ರಕರಣವನ್ನು ತನಿಖೆಗೆ ಆದೇಶಲಾಗಿದ್ದು, ತಪ್ಪಿತಸ್ಧರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಗಾಯಾಳುಗಳಿಗೆ ರೂ. 50 ಸಾವಿರ ಪರಿಹಾರವನ್ನು ನೀಡಲಾಗುವುದು ಎಂದು ಸುರೇಶ್ ಪ್ರಭು ಅವರು ತಿಳಿಸಿದ್ದಾರೆ. 

ಉತ್ತರ ರೈಲ್ವೆ ವಕ್ತಾರ ಉತ್ತರ ರೈಲ್ವೆ ವಕ್ತಾರ ನೀರಜ್ ಶರ್ಮಾ ಮಾತನಾಡಿ, 8 ಬೋಗಿಗಳ ಪೈಕಿ 2 ಬೋಗಿಗಳು ನಾಶವಾಗಿದೆ. ಪ್ರಯಾಣಿಕರ ಸಂಬಂಧಿಕರಿಗಾಗಿ ಈಗಾಗಲೇ ಸಹಾಯವಾಣಿಗಳನ್ನು ತೆರೆಯಲಾಗಿದೆ. ರೈಲು ಹಳಿ ತಪ್ಪಿದ ವಿಚಾರ ತಿಳಿಯುತ್ತಿದ್ದಂತೆಯೇ ಮೊರಾದಾಬಾದ್ ಡಿಆರ್'ಎಂ ಪ್ರಮೋದ್ ಕುಮಾರ್ ಸೇರಿದಂತೆ ರೈಲ್ವೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿದ್ದರು. ವೈದ್ಯಕೀಯ ತಂಡ ಕೂಡ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ಚಿಕಿತ್ಸೆ ನೀಡಿದ್ದರು ಎಂದು ಹೇಳಿದ್ದಾರೆ. 

ಘಟನೆಯನ್ನು ಸೇರಿದಂತೆ ಉತ್ತರಪ್ರದೇಶ ರಾಜ್ಯದಲ್ಲಿ 1 ತಿಂಗಳಲ್ಲಿ ಎರಡು ರೈಲುಗಳು ಹಳಿತಪ್ಪಿದಂತಾಗಿದೆ. ಮಾರ್ಚ್ 31 ರಂದು ಮಹಾರೋಶ್ಲಾ ಎಕ್ಸ್ ಪ್ರೆಸ್ ರೈಲಿನ 8 ಬೋಗಿಗಳು ಹಳಿ ತಪ್ಪಿ 25 ಜನರು ಸಾವನ್ನಪ್ಪಿದ್ದರು. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?