ದೇಶ

ಭರವಸೆ ಈಡೇರಿಸಲಾಗದ ಬಿಜೆಪಿ ಕೋಮುವಾದ ಹರಡುತ್ತಿದೆ: ದಿಗ್ವಿಜಯ್ ಸಿಂಗ್

Shilpa D
ನವದೆಹಲಿ: ಚುನಾವಣೆ ವೇಳೆ ನೀಡಿದ್ದ ಭರವಸೆಗಳನ್ನು ಈಡೇರಿಸದೇ ದೇಶದ ಜನರ ಆಕ್ರೋಶಕ್ಕೆ ಗುರಿಯಾಗಿರುವ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ದೇಶದಲ್ಲಿ ಕೋಮುವಾದ ಹರಡಿಸುತ್ತಿದೆ ಎಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿಗ್ವಿಜಯ್ ಸಿಂಗ್ ಆರೋಪಿಸಿದ್ದಾರೆ.
ದೇಶದಲ್ಲಿನ ಆರ್ಥಿಕ ಪರಿಸ್ಥಿತಿ ಸುಧಾರಿಸಿಲ್ಲ, ಯಾವುದೇ ಬಂಡವಾಳ ಬರುತ್ತಿಲಿಲ, ಉತ್ಪಾದನಾ ಕ್ಷೇತ್ರದ ಬೆಳವಣಿಗೆ ಸ್ಥಗಿತವಾಗಿದೆ, ಸಣ್ಣ ಪ್ರಮಾಣದ ಕೈಗಾರಿಕೆಗಳು ಮುಚ್ಚಿ ಹೋಗುತ್ತಿವೆ. ಕೆಲಸ ಮಾಡಿ ಹಣ ಸಂಪಾದಿಸುತ್ತಿದ್ದವರಿಗೆ ಈಗ ಮಾಡಲು ನೌಕರಿ ಇಲ್ಲದಂತಾಗಿದೆ. ಕಪ್ಪು ಹಣವನ್ನು ಭಾರತಕ್ಕೆ ತರಲು ಮೋದಿಗೆ ಸಾಧ್ಯವಾಗಿಲ್ಲ ಎಂದು ಸಿಂಗ್ ವಾಗ್ದಾಳಿ ನಡೆಸಿದ್ದಾರೆ.
ಜನ ಕೇಂದ್ರ ಸರ್ಕಾರದ ವಿರುದ್ಧ ಸಿಡಿದೆದಿದ್ದಾರೆ. ಯಾವುದೇ ಅಜೆಂಡಾವಿಲ್ಲದೇ ಕೋಮುವಾದವನ್ನು ಮುಂದಿಟ್ಟುಕೊಂಡಿರುವ ಬಿಜೆಪಿ ಪಾಕಿಸ್ತಾನದ ಜೊತೆ ಯುದ್ದ ಸಾರುವ ಚಿಂತನೆ ಮಾಡುತ್ತಿದೆ ಎಂದು ಅವರು ದೂರಿದ್ದಾರೆ.
SCROLL FOR NEXT