ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ 
ದೇಶ

ಕುಮಾರ್ ವಿಶ್ವಾಸ್ ಮೇಲೆ ನನಗೆ ಕೋಪವಿಲ್ಲ: ಅರವಿಂದ್ ಕೇಜ್ರಿವಾಲ್ ಸ್ಪಷ್ಟನೆ

ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಮ ಹಾಗೂ ನನ್ನ ಯಾವುದೇ ಯಾವುದೇ ವೈಮನಸ್ಸಿಲ್ಲ, ಕುಮಾರ್ ವಿಶ್ವಾಸ್ ಮನೆಯ ಕುಟುಂಬ ಸದಸ್ಯರಿದ್ದಂತೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ...

ನವದೆಹಲಿ: ಆಮ್ ಆದ್ಮಿ ಪಕ್ಷದ ಮುಖಂಡ ಕುಮಾರ್ ವಿಶ್ವಾಮ ಹಾಗೂ ನನ್ನ ಯಾವುದೇ ಯಾವುದೇ ವೈಮನಸ್ಸಿಲ್ಲ, ಕುಮಾರ್ ವಿಶ್ವಾಸ್ ಮನೆಯ ಕುಟುಂಬ ಸದಸ್ಯರಿದ್ದಂತೆ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಭಾನುವಾರ ಸ್ಪಷ್ಟನೆ ನೀಡಿದ್ದಾರೆ. 
ಇತ್ತೀಚೆಗೆಷ್ಟೇ ಅರವಿಂದ್ ಕೇಜ್ರಿವಾಲ್ ಟಿವಿಯೊಂದಕ್ಕೆ ನೀಡಿದ್ದ ಸಂದರ್ಶನದ ವಿಡಿಯೋವೊಂದನ್ನು ಕುಮಾರ್ ವಿಶ್ವಾಸ್ ಅವರು ಟ್ವೀಟ್ ಮಾಡಿದ್ದರು. ವಿಡಿಯೋದಿಂದ ಕೇಜ್ರಿವಾಲ್ ಅವರ ಬಗ್ಗೆ ಟೀಕೆಗಳು ಎದುರಾಗಿದ್ದವು. ಹೀಗಾಗಿ ಕೇಜ್ರಿವಾಲ್ ಹಾಗೂ ಕುಮಾರ್ ವಿಶ್ವಾಸ್ ಮಧ್ಯೆ ಬಿರುಕು ಉಂಟಾಗಿದೆ ಎಂಬ ಮಾತುಗಳು ಕೇಳಿಬಂದಿದ್ದವು. 
ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಕೇಜ್ರಿವಾಲ್ ಅವರು, ಕುಮಾರ್ ವಿಶ್ವಾಸ್ ಅವರ ಮೇಲೆ ನನಗೆ ಕೋಪವಿಲ್ಲ. ಕುಮಾರ್ ಅವರು ಪಕ್ಷದ ಸದಸ್ಯನಷ್ಟೇ ಅಲ್ಲ, ಅವರು ನನ್ನ ಮನೆಯ ಸದಸ್ಯನಿದ್ದಂತೆ. ಮಾಧ್ಯಮಗಳು ನಮ್ಮಿಬ್ಬರ ವಿಷಯವಾಗಿ ಇದೇ ರೀತಿ ಚರ್ಚೆ ಮಾಡಿದರೆ, ಇದನ್ನು ನಂಬಿ ಮುಂದೆ ನೀವುಗಳು ನನ್ನ ಪತ್ನಿಯೇ ನನ್ನನ್ನು ಟಾರ್ಗೆಟ್ ಮಾಡುತ್ತಿದ್ದಾಳೆಂದು ಬೇಕಾದರೂ ಹೇಳುವಿರಿ ಎಂದು ಹಾಸ್ಯ ಮಾಡಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT