ಸಾಂದರ್ಭಿಕ ಚಿತ್ರ 
ದೇಶ

ಹೈಜಾಕ್ ಬೆದರಿಕೆ: ಮುಂಬೈ, ಚೆನ್ನೈ, ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಬಿಗಿ ಭದ್ರತೆ

ವಿಮಾನ ಹೈಜಾಕ್ ಬೆದರಿಕೆ ಕರೆ ಬಂದ ಹಿನ್ನಲೆಯಲ್ಲಿ ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳಲ್ಲಿ ಭದ್ರತೆಯನ್ನು ಹೆಚ್ಚಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ...

ಚೆನ್ನೈ:  ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ನಿಂದ ಹೊರಡುವ ವಿಮಾನಗಳಲ್ಲಿ ಯಾವುದಾದರೊಂದನ್ನು  ಹೈಜಾಕ್ ಮಾಡಲಾಗುವುದು ಎಂದು ಬೆದರಿಕೆ ಕರೆ ಬಂದ ಹಿನ್ನೆಲೆಯಲ್ಲಿ ಮುಂಬೈ, ಚೆನ್ನೈ ಮತ್ತು ಹೈದರಾಬಾದ್ ವಿಮಾನ ನಿಲ್ದಾಣಗಳ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪ್ರಯಾಣಿಕರು ಕೊನೆ ಕ್ಷಣದಲ್ಲಿ ನಿಲ್ದಾಣದೊಳಗೆ ಪ್ರವೇಶಿಸದಂತೆ ಮತ್ತು ತಪಾಸಣೆಗೆ ಸಂಪೂರ್ಣ ಸಹಕರಿಸುವಂತೆ ಅಧಿಕಾರಿಗಳು ಪ್ರಯಾಣಿಕರಲ್ಲಿ ಮನವಿ ಮಾಡಿದ್ದಾರೆ.
ಚೆನ್ನೈನ ಅರಿಗ್ನಾರ್ ಅಣ್ಮಾ ವಿಮಾನ ನಿಲ್ದಾಣದ ಭದ್ರತಾ ಮಟ್ಟವನ್ನು ಏಳುಪಟ್ಟು ಜಾಸ್ತಿ ಮಾಡಲಾಗಿದೆ.
ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಜವಾನರು ವಿಮಾನ ನಿಲ್ದಾಣದ ಆವರಣದಲ್ಲಿ ಗುಂಡು ತುಂಬಿದ ಕೋವಿಗಳು, ಶಸ್ತ್ರಾಸ್ತ್ರಗಳ ಸಹಿತ ಗಸ್ತು ತಿರುಗುತ್ತಿದ್ದಾರೆ. ಭಯೋತ್ಪಾದಕ ಸಂಘಟನೆ ವಿಮಾನವನ್ನು ಹೈಜಾಕ್ ಮಾಡುವ ಸಾಧ್ಯತೆಯಿದೆ ಎಂದು ಮೂಲಗಳಿಂದ ಮಾಹಿತಿ ಸಿಕ್ಕಿದೆ.
ಚೆನ್ನೈಯ ಕಾಮರಾಜ್ ದೇಶಿ ಟರ್ಮಿನಲ್ ಮತ್ತು ಅಂತಾರಾಷ್ಟ್ರೀಯ ಟರ್ಮಿನಲ್ ಗಳ ಬಳಿ ಪ್ರಯಾಣಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಪ್ರಯಾಣಿಕರ ಲಗ್ಗೇಜುಗಳನ್ನು ಮತ್ತು ಹ್ಯಾಂಡ್ ಬ್ಯಾಗ್ ಗಳನ್ನು ಸೂಕ್ಷ್ಮವಾಗಿ ತಪಾಸಣೆ ನಡೆಸುವಂತೆ ಆದೇಶಿಸಲಾಗಿದೆ.
ಬೆದರಿಕೆ ಕರೆ ಹಿನ್ನೆಲೆಯಲ್ಲಿ ನಿನ್ನೆ ವಿಮಾನ ಭದ್ರತಾ ಸಮನ್ವಯ ಸಮಿತಿ ಸಭೆ ನಡೆಸಲಾಗಿತ್ತು.  

ಮುಂಬೈ, ಹೈದರಾಬಾದ್ ಮತ್ತು ಚೆನ್ನೈ ವಿಮಾನ ನಿಲ್ದಾಣಗಳಿಂದ ಏಕಕಾಲಕ್ಕೆ ವಿಮಾನ ಹೈಜಾಕ್ ಮಾಡುವ ಬಗ್ಗೆ 6 ಹುಡುಗರ ತಂಡ ಚರ್ಚಿಸುತ್ತಿದ್ದರು ಎಂದು ಮಹಿಳೆಯೊಬ್ಬರಿಂದ ಇಮೇಲ್ ಬಂದಿದೆ. ಒಟ್ಟು 23 ಮಂದಿಯ ತಂಡ ವಿಮಾನವನ್ನು ಭಾನುವಾರ ಅಂದರೆ ಇಂದು ಅಪಹರಣ ಮಾಡಲಿದೆ ಎಂದು ತೀರ್ಮಾನಿಸಿದ್ದಾರೆ ಎಂಬುದಾಗಿ ಇಮೇಲ್ ನಲ್ಲಿ ಇದೆ. 

ವಿಮಾನ ನಿಲ್ದಾಣಗಳಲ್ಲಿ ಭದ್ರತೆ ಹೆಚ್ಚಿಸಲಾಗಿದೆ ಎಂದು ಕೇಂದ್ರ ಕೈಗಾರಿಕಾ ಭದ್ರತಾ ಪಡೆಯ ಮಹಾ ನಿರ್ದೇಶಕ ಒ.ಪಿ.ಸಿಂಗ್ ದೃಢಪಡಿಸಿದ್ದಾರೆ. ಹಲವು ಭದ್ರತಾ  ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಮಾನ ನಿಲ್ಧಾಣದ ನಿಯಂತ್ರಣ ಮತ್ತು ಗಸ್ತು ನೋಡಿಕೊಳ್ಳಲಾಗುತ್ತಿದೆ.

ಹಲವು ಭದ್ರತಾ ಯೋಧರನ್ನು ವಿಮಾನ ನಿಲ್ದಾಣಗಳಲ್ಲಿ ಈಗ ನಿಯೋಜಿಸಲಾಗಿದೆ.
ವಿಮಾನ ನಿಲ್ದಾಣ ಭದ್ರತಾ ಸಿಬ್ಬಂದಿ ಜೊತೆ ನಗರ ಪೊಲೀಸ್ ಪಡೆ ಕೂಡ ಕಾರ್ಯಪ್ರವೃತ್ತವಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT