ಸಂಗ್ರಹ ಚಿತ್ರ 
ದೇಶ

ಅಲ್ಪ ಸಂಖ್ಯಾತರ ಮೀಸಲಾತಿ ಶೇ.4ರಿಂದ 12ಕ್ಕೆ ಏರಿಕೆ ಮಾಡಿದ ತೆಲಂಗಾಣ ಸರ್ಕಾರ!

ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 12ಕ್ಕೆ ಏರಿಕೆ ಮಾಡುವ ವಿವಾದಿತ ಮೀಸಲಾತಿ ಮಸೂದೆಗೆ ತೆಲಂಗಾಣ ಸರ್ಕಾರ ವಿಧಾನಸಭೆಯ ಅನುಮೋದನೆ ಪಡೆದಿದೆ.

ಹೈದರಾಬಾದ್: ಮುಸ್ಲಿಮರ ಮೀಸಲಾತಿ ಪ್ರಮಾಣವನ್ನು ಶೇ.4 ರಿಂದ 12ಕ್ಕೆ ಏರಿಕೆ ಮಾಡುವ ವಿವಾದಿತ ಮೀಸಲಾತಿ ಮಸೂದೆಗೆ ತೆಲಂಗಾಣ ಸರ್ಕಾರ ವಿಧಾನಸಭೆಯ ಅನುಮೋದನೆ ಪಡೆದಿದೆ.

ತೆಲಂಗಾಣದಲ್ಲಿ ಭಾರಿ ವಿವಾದಕ್ಕೆ ಕಾರಣವಾಗಿರುವ ಹಿಂದುಳಿದ ವರ್ಗದ ಮುಸ್ಲಿಮರ ಮತ್ತು ಹಿಂದುಳಿದ ಬುಡಕಟ್ಟು ಜನಾಂಗಗಳ ಮೀಸಲಾತಿಯನ್ನು ಶೇ.4ರಿಂದ 12ಕ್ಕೆ ಏರಿಕೆ ಮಾಡುವ ಮಸೂದೆಯನ್ನು ತೆಲಂಗಾಣ ಸರ್ಕಾರ  ಜಾರಿಗೊಳಿಸಿದ್ದು, ಬಿಜೆಪಿ ಸದಸ್ಯರ ವ್ಯಾಪಕ ವಿರೋಧ ಹಾಗೂ ಭಾರಿ ಕೋಲಾಹಲದ ನಡುವೆಯೇ ವಿವಾದಾತ್ಮಕ ಮಸೂದೆಗೆ ಅನುಮೋದನೆ ಪಡೆದಿದೆ.

ಸಿಎಂ ಕೆ ಚಂದ್ರ ಶೇಖರ ರಾವ್ ಅವರ ಈ ನಿರ್ಧಾರ ಇದೀಗ ವಿವಾದಕ್ಕೆ ಕಾರಣವಾಗಿದ್ದು, ಸರ್ಕಾರದ ಕ್ರಮವನ್ನು ಬಲವಾಗಿ ಖಂಡಿಸಿರುವ ಬಿಜೆಪಿ ಪಕ್ಷದ ಸದಸ್ಯರು ಸದನದ ಒಳಗೆ ಹಾಗೂ ಹೊರಗೆ ವ್ಯಾಪಕ ಪ್ರತಿಭಟನೆ  ನಡೆಸಿದ್ದಾರೆ. ಮಸೂದೆ ಮಂಡನೆಯಾಗುತ್ತಿದ್ದಂತೆಯೇ ಬಿಜೆಪಿ ಸದಸ್ಯರು ಸದನದಲ್ಲಿ ಕೋಲಾಹಲವೆಬ್ಬಿಸಿದ ಕಾರಣ ಬಿಜೆಪಿ ಐದು ಶಾಸಕರನ್ನು ಸದನದಿಂದ ಬಲವಂತವಾಗಿ ಹೊರಹಾಕಲಾಯಿತು. ಇದಾಗ್ಯೂ ಬಿಜೆಪಿ ಶಾಸಕರು  ಸದನದಲ್ಲಿ ತಮ್ಮ ಪ್ರತಿಭಟನೆ ಮುಂದುವರೆಸಿದರು. ಪ್ರತಿಭಟನೆಯ ನಡುವೆಯೇ ಮಸೂದೆಗೆ ಅನುಮೋದನೆ ನೀಡಲಾಗಿದೆ ಎಂದು ತಿಳಿದುಬಂದಿದೆ.

ಹಿಂದುಳಿದ ಬುಡಕಟ್ಟು ಜನಾಂಗ ಮತ್ತು ಹಿಂದುಳಿದ ಮುಸ್ಲಿಂ ವರ್ಗಗಳಿಗೆ ಔದ್ಯೋಗಿಕ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಮೀಸಲಾತಿ ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ತೆಲಂಗಾಣ ಸರ್ಕಾರ ಹೇಳಿಕೊಂಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

SCROLL FOR NEXT