ಯೋಗಿ ಆದಿತ್ಯ ನಾಥ್ 
ದೇಶ

ಎರಡು ವಿವಾದಾತ್ಮಕ ನಿರ್ಧಾರಗಳಿಂದಾಗಿ ಯೋಗಿ ಆದಿತ್ಯನಾಥ್ ಹೆಚ್ಚು ಜನಪ್ರಿಯ: ಸಮೀಕ್ಷೆ

ಕಳೆದ ತಿಂಗಳು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿಯ ಯೋಗಿ ಆದಿತ್ಯನಾಥ್ ತೆಗೆದು ಕೊಂಡ ಎರಡು ಮುಖ್ಯ ವಿವಾದಾತ್ಮಕ ...

ನವದೆಹಲಿ: ಕಳೆದ ತಿಂಗಳು ಉತ್ತರ ಪ್ರದೇಶ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಿಜೆಪಿಯ ಯೋಗಿ ಆದಿತ್ಯನಾಥ್ ತೆಗೆದು ಕೊಂಡ ಎರಡು ಮುಖ್ಯ ವಿವಾದಾತ್ಮಕ ನಿರ್ಧಾರಗಳಿಂದ ಹೆಚ್ಚಿನ ಜನಪ್ರಿಯತೆ ಗಳಿಸಿದ್ದರು ಎಂದು ಸಮೀಕ್ಷೆಯೊಂದು ತಿಳಿಸಿದೆ.
ಅಕ್ರಮ ಕಸಾಯಿಖಾನೆಗಳನ್ನು ಮುಚ್ಚಿಸಿ ಮತ್ತು ಬೀದಿ ಕಾಮಣ್ಣರ ಆ್ಯಂಟಿ ರೊಮಿಯೊ) ನಿಗ್ರಹ ಪಡೆ ಸ್ಥಾಪಿಸಿದ್ದರಿಂದ  ಉತ್ತರ ಪ್ರದೇಶ ಮುಖ್ಯಮಂತ್ರಿ ಆದಿತ್ಯನಾಥ ಯೋಗಿ ಅವರ ಪ್ರಸಿದ್ಧಿ ಹೆಚ್ಚಿದೆ ಎಂದು ಸಮೀಕ್ಷೆ ತಿಳಿಸಿದೆ.
ಸಾರ್ವಜನಿಕ ವಲಯದಲ್ಲಿ ಈ ನಿರ್ಧಾರಗಳಿಗೆ ಪ್ರಶಂಸೆ ವ್ಯಕ್ತವಾಗಿದೆ ಎಂದು ಸಮೀಕ್ಷೆ ಹೇಳಿದೆ. ರಾಜ್ಯದ 20 ಜಿಲ್ಲೆಗಳಲ್ಲಿ 2,000 ಜನರನ್ನು ಸಮೀಕ್ಷೆಗೆ ಒಳಪಡಿಸಲಾಗಿತ್ತು.
ಗಾಂವೊ ಕನೆಕ್ಷನ್‌ ಎನ್ನುವ ಗ್ರಾಮೀಣ ಮಾಧ್ಯಮ ಸಂಸ್ಥೆ ನಡೆಸಿದ ಈ ಸಮೀಕ್ಷೆಯಲ್ಲಿ, ಅಕ್ರಮ ಕಸಾಯಿಖಾನೆಗಳ ವಿರುದ್ಧದ ಕ್ರಮಕ್ಕೆ ಶೇ 38.1, ಆ್ಯಂಟಿ ರೊಮಿಯೊ ನಿಗ್ರಹ ದಳಕ್ಕೆ ಶೇ 25.4 ಮತ ದೊರಕಿದೆ.
ಪೊಲೀಸರು ತಮ್ಮ ಅಧಿಕಾರ  ಮೀರಿ ವರ್ತಿಸುತ್ತಿದ್ದಾರೆ, ಆಯ್ಕೆಯ ಸ್ವಾತಂತ್ರ್ಯದ ಮೇಲೆ ಪ್ರತಿಕೂಲ ಪರಿಣಾಮ ಉಂಟಾಗುತ್ತಿದೆ ಎನ್ನವ ಆರೋಪಗಳ ನಡುವೆಯೂ ಬೀದಿ ಕಾಮಣ್ಣರ ನಿಗ್ರಹ ಪಡೆಯನ್ನು ಶೇ 37 ಮಹಿಳೆಯರು ಬೆಂಬಲಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT