ಏರ್ ಇಂಡಿಯಾ 
ದೇಶ

ದುರ್ವರ್ತನೆ ತೋರಿ, ವಿಮಾನ ವಿಳಂಬಕ್ಕೆ ಕಾರಣವಾಗುವ ಪ್ರಯಾಣಿಕರಿಗೆ 15 ಲಕ್ಷ ರೂ. ದಂಡ!

ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಪ್ರಕರಣದ ನಂತರ ವಿಮಾನದಲ್ಲಿ ಅಶಿಸ್ತಿನಿಂದ ನಡೆದುಕೊಳ್ಳುವ ಪ್ರಯಾಣಿಕರ ಆಟಾಟೋಪವನ್ನು ನಿಯಂತ್ರಿಸುವುದಕ್ಕೆ ಏರ್ ಇಂಡಿಯಾ ಹಾಗೂ ಭಾರತ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ರೂಪಿಸುತ್ತಿವೆ.

ನವದೆಹಲಿ: ಶಿವಸೇನೆ ಸಂಸದ ರವೀಂದ್ರ ಗಾಯಕ್ವಾಡ್ ಪ್ರಕರಣದ ನಂತರ ವಿಮಾನದಲ್ಲಿ ಅಶಿಸ್ತಿನಿಂದ ನಡೆದುಕೊಳ್ಳುವ ಪ್ರಯಾಣಿಕರ ಆಟಾಟೋಪವನ್ನು ನಿಯಂತ್ರಿಸುವುದಕ್ಕೆ ಏರ್ ಇಂಡಿಯಾ ಹಾಗೂ ಭಾರತ ಸರ್ಕಾರ ಮತ್ತಷ್ಟು ಕಠಿಣ ನಿಯಮಗಳನ್ನು ರೂಪಿಸುತ್ತಿವೆ. 
ದುರ್ವರ್ತನೆ ತೋರಿ, ವಿಮಾನ ವಿಳಂಬ ಮಾಡುವ ಪ್ರಯಾಣಿಕರಿಗೆ 15 ಲಕ್ಷ ರೂ ದಂಡ ವಿಧಿಸುವ ಬಗ್ಗೆ ಏರ್ ಇಂಡಿಯಾ ಚಿಂತನೆ ನಡೆಸಿದ್ದು ನಿಯಮಗಳನ್ನು ಉಲ್ಲಂಘಿಸುವ ಪ್ರಯಾಣಿಕರನ್ನು ಎದುರಿಸಲು ವಿಮಾನ ನಿಲ್ದಾಣದ ಮ್ಯಾನೇಜರ್ ಗಳಿಗೆ ಹೆಚ್ಚಿನ ಅಧಿಕಾರ ನೀಡುವುದು ಹೊಸ ನಿಯಮಗಳ ಪೈಕಿ ಪ್ರಮುಖವಾದ ಅಂಶವಾಗಿದೆ. ಪ್ರಯಾಣಿಕರ ಅಶಿಸ್ತಿನ ವರ್ತನೆಯನ್ನು ವರದಿ ಮಾಡುವುದಕ್ಕೆ ಹಾಗೂ ದುರ್ವರ್ತನೆ ತೋರುವ ಪ್ರಯಾಣಿಕರಿಂದ ಹಣಕಾಸು ಪರಿಹಾರವನ್ನು ಪಡೆಯುವುದನ್ನೂ ಕಠಿಣ ನಿಯಮಗಳ ವ್ಯಾಪ್ತಿಗೆ ತರಲು ಚಿಂತನೆ ನಡೆಸಲಾಗಿದೆ ಎಂದು ಏರ್ ಇಂಡಿಯಾದ ಅಧಿಕಾರಿಯೊಬ್ಬರು ಹೇಳಿದ್ದಾರೆ. 
ಹೊಸ ಮಾರ್ಗಸೂಚಿಗಳ ನಿಯಮಗಳನ್ನು ಏರ್ ಇಂಡಿಯಾದ ಕಾನೂನು ವಿಭಾಗದ ಸಲಹೆ ಪಡೆದು ರೂಪಿಸಲಾಗಿದ್ದು, ಸಿಎಂಡಿ ಅಶ್ವಿನಿ ಲೋಹನಿ ಅವರಿಗೆ ಕಳಿಸಿಕೊಡಲಾಗಿದೆ ಏರ್ ಇಂಡಿಯಾದ ಸಿಎಂಡಿ ಅನುಮೋದನೆ ನೀಡಿದ ಬಳಿಕ ಸಾರ್ವಜನಿಕಗೊಳಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. 
ಹೊಸ ನಿಯಮಗಳ ಪ್ರಕಾರ ದುರ್ವರ್ತನೆ ತೋರುವ ಯಾವುದೇ ಪ್ರಯಾಣಿಕನ ವಿರುದ್ಧ ಕ್ರಮ ಕೈಗೊಳ್ಳಲು ಮ್ಯಾನೇಜರ್ ಗಳು ಚೇರ್ ಮನ್ ಹಾಗೂ ಎಂಡಿಯ ಅನುಮತಿ ಪಡೆಯಬೇಕಿಲ್ಲ. ಬದಲಾಗಿ ನೇರವಾಗಿ ಕ್ರಮ ಕೈಗೊಳ್ಳಬಹುದೆಂಬ ಅಂಶವನ್ನು ಅಳವಡಿಸಲಾಗಿದೆ. ಅಷ್ಟೇ ಅಲ್ಲದೇ ದುರ್ವರ್ತನೆಯಿಂದಾಗಿ ವಿಮಾನಗಳು ಟೇಕ್ ಆಫ್ ಆಗುವುದು ವಿಳಂಬವಾದರೆ ಅದರಿಂದ ಉಂಟಾಗುವ ನಷ್ಟವನ್ನೂ ಆ ಪ್ರಯಾಣಿಕನೇ ಭರಿಸಬೇಕಾಗುತ್ತದೆ ಎಂಬ ಹತ್ತು ಹಲವು ಕಠಿಣ ನಿಯಮಗಳನ್ನು ಜಾರಿಗೆ ತರಲು ಉದ್ದೇಶಿಸಲಾಗಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ- ಭಗವಂತನ ಸಂಬಂಧ ಇದೆ, RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿಕೆ ಶಿವಕುಮಾರ್

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

SCROLL FOR NEXT