ಸಂಗ್ರಹ ಚಿತ್ರ 
ದೇಶ

ಬೆಂಗಳೂರಿನಲ್ಲಿ ತುಂತುರು ಮಳೆ: ಮಳೆಯಿಂದಾಗಿ ತಂಪಾದ ನಗರ

ಬಿರು ಬಿಸಿಲಿನಿಂದಾಗಿ ಬೆಂದಿದ್ದ ನಗರದಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಮಳೆ ತಂಪೆರೆಯಿತು. ಬಿಸಿಲಿನಿಂದಾಗಿ ಕಾದಿದ್ದ ಬೆಂಗಳೂರು ನಗರ ಮಳೆಯಿಂದಾಗಿ ಸ್ವಲ್ಪ ತಂಪಾಯಿತು...

ಬೆಂಗಳೂರು: ಬಿರು ಬಿಸಿಲಿನಿಂದಾಗಿ ಬೆಂದಿದ್ದ ನಗರದಲ್ಲಿ ಭಾನುವಾರ ಮಧ್ಯಾಹ್ನ ಸುರಿದ ಮಳೆ ತಂಪೆರೆಯಿತು. ಬಿಸಿಲಿನಿಂದಾಗಿ ಕಾದಿದ್ದ ಬೆಂಗಳೂರು ನಗರ ಮಳೆಯಿಂದಾಗಿ ಸ್ವಲ್ಪ ತಂಪಾಯಿತು. 
ನಿನ್ನೆ ಮಧ್ಯಾಹ್ನದಿಂದಲ್ ನಗರದಲ್ಲಿ ಮೋದ ಕವಿದ ವಾತಾವರಣ ಸೃಷ್ಟಿಯಾಗಿತ್ತು. 4 ಗಂಟೆ ಸುಮಾರಿಗೆ ದಿಢೀರ್ ಅರಂಭವಾದ ಮಳೆ, ನಗರದ ವಿವಿಧ ಭಾಗಗಳಲ್ಲಿ ಸುರಿಯಿತು. ಕೇವಲ 20 ನಿಮಿಷ ಸುರಿದ ಮಳೆಯಿಂದಾಗಿ ಮೆಜೆಸ್ಟಿಕ್. ಕೆ.ಆರ್. ಮಾರುಕಟ್ಟೆ ಸೇರಿದಂತೆ ನಗರದ ವಿವಿಧ ಭಾಗಗಳಲ್ಲಿ ವಾಹನ ದಟ್ಟಣೆ ಉಂಟಾಗಿತ್ತು. ಇದರಿಂದಾಗಿ ಕೆಲ ಕಾಲ ವಾಹನ ಸಂಚಾರ ಅಸ್ತವ್ಯಸ್ತಗೊಂಡು ದ್ವಿಚಕ್ರವಾಹನ ಸವಾರರು ಪರದಾಡುವಂತಾಯಿತು. 
ವಿಧಾನಸೌಧ, ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಮತ್ತು ಹೆಚ್ಎಎಲ್ ವಿಮಾನ ನಿಲ್ದಾಣ ಸೇರಿದಂತ ವಿವಿಧ ಭಾಗಗಳಲ್ಲಿ ನಿನ್ನೆ ಮಳೆಯಾಗಿದ್ದು, 9 ಮಿ.ಮೀ  ನಿಂದ 0.5 ಮಿ.ಮೀ.ನಷ್ಟು ಮಳೆಯಾಗಿದೆ. 
ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ತಾಪಮಾನ ಮತ್ತಷ್ಟು ಏರಿಕೆಯಾಗಲಿದ್ದು, ಮುಂದಿನ ದಿನಗಳಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಗೆ ಏರಿಕೆಯಾಗಿದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣದ ವಿಜ್ಞಾನಿ ಎಸ್ಎಸ್ಎಂ ಗವಾಸ್ಕರ್ ಅವರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT