ಸಂಗ್ರಹ ಚಿತ್ರ 
ದೇಶ

ಹಿಂಸಾಚಾರದ ವೇಳೆ ಪ್ಲಾಸ್ಟಿಕ್ ಬುಲ್ಲೆಟ್ ಬಳಕೆ; ಅನಿವಾರ್ಯವಾದರೆ ಮಾತ್ರ ಪೆಲ್ಲೆಟ್ ಗನ್!

ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗುವ ಹಿಂಸಾಚಾರದ ವೇಳೆ ಪ್ಲಾಸ್ಟಿಕ್ ಬುಲ್ಲೆಟ್ ಗಳನ್ನು ಬಳಕೆ ಮಾಡುವಂತೆ ಕೇಂದ್ರ ಗೃಹ ಇಲಾಖೆ ಭದ್ರತಾ ಪಡೆಗಳಿಗೆ ಸಲಹೆ ನೀಡಿದೆ. ಅಂತೆಯೇ ತೀರಾ ಅನಿವಾರ್ಯವಾದರೆ ಮಾತ್ರ ಪೆಲ್ಲೆಟ್ ಗನ್ ಗಳನ್ನು ಬಳಕೆ ಮಾಡುವಂತೆ ಸೂಚನೆ ನೀಡಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದಲ್ಲಿ ಉಂಟಾಗುವ ಹಿಂಸಾಚಾರದ ವೇಳೆ ಪ್ಲಾಸ್ಟಿಕ್ ಬುಲ್ಲೆಟ್ ಗಳನ್ನು ಬಳಕೆ ಮಾಡುವಂತೆ ಕೇಂದ್ರ ಗೃಹ ಇಲಾಖೆ ಭದ್ರತಾ ಪಡೆಗಳಿಗೆ ಸಲಹೆ ನೀಡಿದೆ. ಅಂತೆಯೇ ತೀರಾ ಅನಿವಾರ್ಯವಾದರೆ  ಮಾತ್ರ ಪೆಲ್ಲೆಟ್ ಗನ್ ಗಳನ್ನು ಬಳಕೆ ಮಾಡುವಂತೆ ಸೂಚನೆ ನೀಡಿದೆ.

ಕಣಿವೆ ರಾಜ್ಯದಲ್ಲಿ ಪೆಲ್ಲೆಟ್ ಗನ್ ಗಳ ಬಳಕೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದ್ದು, ಹಿಂಸಾಚಾರ ನಿಯಂತ್ರಣ ಮಾಡಲು ಭದ್ರತಾ ಸಿಬ್ಬಂದಿಗಳು ಬಳಕೆ ಮಾಡುವ ಪೆಲ್ಲೆಟ್ ಗನ್ ಗಳಿಂದಾಗಿ ಸ್ಥಳೀಯ ನಾಗರಿಕರಿಗೆ ಮಾರಣಾಂತಿಕ  ಪೆಟ್ಟುಗಳಾಗುತ್ತಿವೆ. ಹಲವರು ಪೆಲ್ಲೆಟ್ ಗನ್ ಏಟಿಂನಿದಾಗಿ ಅಂಧರಾಗಿದ್ದು, ದಶಕಗಳ ಹಿಂದೆ ಬಿದ್ದ ಪೆಲ್ಲೆಟ್ ಗನ್ ಬುಲ್ಲೆಟ್ ಗಳಿಂದಾಗಿ ಇಂದಿಗೂ ಜನ ನೋವು ಅನುಭವಿಸುತ್ತಿದ್ದಾರೆ ಎಂದು ಆರೋಪಿಸಲಾಗಿತ್ತು. ಅಲ್ಲದೆ ಭದ್ರತಾ  ಸಿಬ್ಬಂದಿಗಳು ಪೆಲ್ಲೆಟ್ ಗನ್ ಬಳಕೆ ಮಾಡದಂತೆ ನಿಷೇಧ ಹೇರಬೇಕು ಎಂದು ಕಣಿವೆ ರಾಜ್ಯದಾದ್ಯಂತ ಹಲವು ಪ್ರತಿಭಟನೆಗಳು ನಡೆದಿದ್ದವು.

ಇದೀಗ ಪ್ರತಿಭಟನಾಕಾರರ ಒತ್ತಾಯಕ್ಕೆ ಕೇಂದ್ರ ಸರ್ಕಾರ ಮಣಿದಿಲ್ಲವಾದರೂ ಪ್ಲಾಸ್ಟಿಕ್ ಬುಲ್ಲೆಟ್ ಗಳಿಗೆ ಮೊದಲ ಆಧ್ಯತೆ ನೀಡುವಂತೆಯೂ ತೀರಾ ಅನಿವಾರ್ಯವಾದರೆ ಮಾತ್ರ ಪೆಲ್ಲೆಟ್ ಗನ್ ಬಳಕೆ ಮಾಡುವಂತೆ ನಿರ್ದೇಶನ  ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT