ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್ ನಲ್ಲಿ ನಕ್ಸಲರಿಂದ ತಂದೆ, ಮಗನ ಹತ್ಯೆ

ಮಾವೋವಾದಿಗಳು ಜಾರ್ಖಂಡ್ ನ ಪಲಮು ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಸೋಮವಾರ ತಡರಾತ್ರಿ 50 ವರ್ಷದ ವ್ಯಕ್ತಿ ಹಾಗೂ....

ಮೇದಿನಿನಗರ: ಮಾವೋವಾದಿಗಳು ಜಾರ್ಖಂಡ್ ನ ಪಲಮು ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಸೋಮವಾರ ತಡರಾತ್ರಿ 50 ವರ್ಷದ ವ್ಯಕ್ತಿ ಹಾಗೂ ಆತನ ಮಗನನ್ನು ಹತ್ಯೆ ಮಾಡಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಬಿಹಾರದ ಔರಂಗಬಾದ್ ಜಿಲ್ಲೆಯಿಂದ ಆಗಮಿಸಿದ್ದ ಸುಮಾರು 20 ನಕ್ಸಲರ ತಂಡವೊಂದು, ಜಾರ್ಖಂಡ್ ನ ಕೌಲುವಾ ಗ್ರಾಮದ ನಿವಾಸಿ ಶಿವನಾಥ್ ಯಾದವ್ ಹಾಗೂ ಅವರ ಪುತ್ರ ಗುಡ್ಡು ಯಾದವ್ ಅವರನ್ನು ಮನೆಯಿಂದ ಹೊರಗೆ ಎಳೆದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಅವರು ಹೇಳಿದ್ದಾರೆ.
ಗ್ರಾಮದ ಜನರಲ್ಲಿ ಭಯ ಹುಟ್ಟಿಸುವುದಕ್ಕಾಗಿ ನಕ್ಸಲರು ಈ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ. 
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಂದ್ರಜೀತ್ ಮಹತಾ ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ನಕ್ಸಲರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT