ಸಾಂದರ್ಭಿಕ ಚಿತ್ರ 
ದೇಶ

ಜಾರ್ಖಂಡ್ ನಲ್ಲಿ ನಕ್ಸಲರಿಂದ ತಂದೆ, ಮಗನ ಹತ್ಯೆ

ಮಾವೋವಾದಿಗಳು ಜಾರ್ಖಂಡ್ ನ ಪಲಮು ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಸೋಮವಾರ ತಡರಾತ್ರಿ 50 ವರ್ಷದ ವ್ಯಕ್ತಿ ಹಾಗೂ....

ಮೇದಿನಿನಗರ: ಮಾವೋವಾದಿಗಳು ಜಾರ್ಖಂಡ್ ನ ಪಲಮು ಜಿಲ್ಲೆಯಲ್ಲಿ ಗ್ರಾಮವೊಂದರಲ್ಲಿ ಸೋಮವಾರ ತಡರಾತ್ರಿ 50 ವರ್ಷದ ವ್ಯಕ್ತಿ ಹಾಗೂ ಆತನ ಮಗನನ್ನು ಹತ್ಯೆ ಮಾಡಿದ್ದಾರೆ ಎಂದು ಮಂಗಳವಾರ ಪೊಲೀಸರು ತಿಳಿಸಿದ್ದಾರೆ.
ಬಿಹಾರದ ಔರಂಗಬಾದ್ ಜಿಲ್ಲೆಯಿಂದ ಆಗಮಿಸಿದ್ದ ಸುಮಾರು 20 ನಕ್ಸಲರ ತಂಡವೊಂದು, ಜಾರ್ಖಂಡ್ ನ ಕೌಲುವಾ ಗ್ರಾಮದ ನಿವಾಸಿ ಶಿವನಾಥ್ ಯಾದವ್ ಹಾಗೂ ಅವರ ಪುತ್ರ ಗುಡ್ಡು ಯಾದವ್ ಅವರನ್ನು ಮನೆಯಿಂದ ಹೊರಗೆ ಎಳೆದು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ ಎಂದು ಉಪ ವಿಭಾಗೀಯ ಪೊಲೀಸ್ ಅಧಿಕಾರಿ ಸಂಜಯ್ ಕುಮಾರ್ ಅವರು ಹೇಳಿದ್ದಾರೆ.
ಗ್ರಾಮದ ಜನರಲ್ಲಿ ಭಯ ಹುಟ್ಟಿಸುವುದಕ್ಕಾಗಿ ನಕ್ಸಲರು ಈ ಹತ್ಯೆ ಮಾಡಿರುವ ಸಾಧ್ಯತೆ ಇದೆ ಎಂದು ಸಂಜಯ್ ಕುಮಾರ್ ತಿಳಿಸಿದ್ದಾರೆ. 
ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಇಂದ್ರಜೀತ್ ಮಹತಾ ಹಾಗೂ ಇತರೆ ಹಿರಿಯ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿದ್ದು, ನಕ್ಸಲರಿಗಾಗಿ ತೀವ್ರ ಶೋಧ ಕಾರ್ಯಾಚರಣೆ ನಡೆಯುತ್ತಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT