ರಾಷ್ಟ್ರಪತಿ 
ದೇಶ

ಇನ್ನು ಮುಂದೆ ಹಿಂದಿಯಲ್ಲಿ ರಾಷ್ಟ್ರಪತಿ, ಪ್ರಧಾನಿ, ಮಂತ್ರಿಗಳ ಭಾಷಣ?

ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇನ್ನು ಮುಂದಿನ ದಿನಗಳಲ್ಲಿ ಹಿಂದಿಯಲ್ಲಿಯೇ ಸಾಧ್ಯವಾದಷ್ಟು ಭಾಷಣ ಮಾಡಬೇಕೆಂಬ ಸಂಸದೀಯ ಸಮಿತಿಯೊಂದರ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ.

ನವದೆಹಲಿ: ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಇನ್ನು ಮುಂದಿನ ದಿನಗಳಲ್ಲಿ ಹಿಂದಿಯಲ್ಲಿಯೇ ಸಾಧ್ಯವಾದಷ್ಟು ಭಾಷಣ ಮಾಡಬೇಕೆಂಬ ಸಂಸದೀಯ ಸಮಿತಿಯೊಂದರ ಶಿಫಾರಸ್ಸಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಒಪ್ಪಿಗೆ ಸೂಚಿಸಿದ್ದಾರೆ. ಸಂಸದೀಯ ಸಮಿತಿಯ ಶಿಫಾರಸುಗಳು ಜಾರಿಗೊಂಡಲ್ಲಿ ಇನ್ನು ಮುಂದೆ ರಾಷ್ಟ್ರಪತಿ, ಪ್ರಧಾನ ಮಂತ್ರಿಗಳು ಸೇರಿದಂತೆ ಗಣ್ಯರು ಹಿಂದಿಯಲ್ಲೇ ಭಾಷಣ ಮಾಡಬೇಕಾಗುತ್ತದೆ. 
ಅಧಿಕೃತ ಭಾಷೆಗೆ ಸಂಬಂಧಿಸಿದ ಸಂಸದೀಯ ಸಮಿತಿ ಈ ಶಿಫಾರಸು ನೀಡಿದ್ದು, ಶಿಫಾರಸ್ಸಿನಲ್ಲಿರುವ ಹಲವು ಅಂಶಗಳಿಗೆ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಕಿತ ಹಾಕಿದ್ದಾರೆ. ಭಾರತೀಯ ವಿಮಾನಗಳಲ್ಲಿನ ಪ್ರಕಟಣೆಗಳು ಹಿಂದಿಯಲ್ಲಿರಬೇಕು, ಓದುವ ಪತ್ರಿಕೆಗಳ ಪೈಕಿ ಅರ್ಧದಷ್ಟು ಪತ್ರಿಕೆಗಳು ಹಿಂದಿ ಪತ್ರಿಕೆ, ಮ್ಯಾಗಜೀನ್ ಗಳಾಗಿರಬೇಕು ಎಂಬುದು ಶಿಫಾರಸ್ಸಿನ ಭಾಗಗಳಾಗಿವೆ. 
ನಾಗರಿಕ ವಿಮಾನಯಾನ ಸಚಿವಾಲಯ ಸಂಸದೀಯ ಸಮಿತಿಗೆ ಶಿಫಾರಸ್ಸುಗಳನ್ನು ಜಾರಿಗೆ ತರುವಂತೆ ಸೂಚನೆ ನೀಡಲಾಗಿದ್ದು, ಏರ್ ಇಂಡಿಯಾ ಪವನ್ ಹಂಸ್ ವಿಮಾನಗಳಲ್ಲಿ ಹಿಂದಿ ಭಾಷೆಯಲ್ಲಿ ಟಿಕೆಟ್ ಗಳನ್ನು ಮುದ್ರಿಸಬೇಕು ಎಂಬ ಸೂಚನೆಯನ್ನೂ ನೀಡಲಾಗಿದೆ. 
ಇನ್ನು ನಾಗರಿಕ ಸೇವೆಗಳಿಗೆ ಅಭ್ಯರ್ಥಿಗಳನ್ನು ತಯಾರಿಸುವ ಲಾಲ್ ಬಹದ್ದೂರ್ ಶಾಸ್ತ್ರಿ ರಾಷ್ಟ್ರೀಯ ಆಡಳಿತ ಅಕಾಡೆಮಿಯಲ್ಲಿ ಅಧ್ಯಯನ ಸಾಮಗ್ರಿಗಳು ಸಹ ಶೇ.100 ಹಿಂದಿ ಭಾಷೆಯಲ್ಲಿ ಲಭ್ಯವಿರಬೇಕು, ಪಠ್ಯಕ್ರಮದಲ್ಲಿ ಹಿಂದಿ ಭಾಷೆಯನ್ನು ಕಡ್ಡಾಯಗೊಳಿಸುವುದು, ಸಿಬಿಎಸ್ಇ, ಕೇಂದ್ರೀಯ ವಿದ್ಯಾಲಯ ಸಂಘಟನೆಗಳ ಶಾಲೆಗಳಲ್ಲಿ 10 ನೇ ತರಗತಿ ವರೆಗೂ ಹಿಂದಿ ಕಡ್ಡಾಯಗೊಳಿಸುವುದು ಸೇರಿದಂತೆ ಹಲವು ಶಿಫಾರಸ್ಸನ್ನೂ ಸಹ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅಂಗೀಕರಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಮಹಿಳಾ ಟೆಕ್ಕಿ ಸಾವಿನ ಕೇಸ್ ಗೆ ಬಿಗ್ ಟ್ವಿಸ್ಟ್: ಹತ್ಯೆಗೂ ಮುನ್ನ PU ವಿದ್ಯಾರ್ಥಿಯಿಂದ ರೇಪ್; ಸಾಕ್ಷಿ ನಾಶಕ್ಕೆ ಬೆಂಕಿ ಹಚ್ಚಿದ ಕರ್ನಲ್ ಕುರೈ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

SCROLL FOR NEXT