ಸಂಗ್ರಹ ಚಿತ್ರ 
ದೇಶ

ದಾದ್ರಿ ಪ್ರಕರಣ: ಓರ್ವ ಆರೋಪಿಗೆ ಜಾಮೀನು ಮಂಜೂರು, ಬಿಡುಗಡೆ

ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಉತ್ತರಪ್ರದೇಶ ದಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಬಿಡುಗಡೆಗೊಂಡಿದ್ದಾನೆ...

ಗ್ರೇಟರ್ ನೊಯ್ಡಾ: ದೇಶದಾದ್ಯಂತ ಭಾರೀ ಸುದ್ದಿಗೆ ಗ್ರಾಸವಾಗಿದ್ದ ಉತ್ತರಪ್ರದೇಶ ದಾದ್ರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ನಿಂದ ಜಾಮೀನು ಮಂಜೂರು ಮಾಡಿದ್ದು, ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. 
ಪುನೀತ್ ಎಂಬ ಆರೋಪಿಗೆ ಅಲಹಾಬಾದ್ ಹೈಕೋರ್ಟ್ ಜಾಮೀನು ಮಂಜೂರು ಮಾಡಿದ್ದು, ನಿನ್ನೆ ಸಂಜೆ ಜೈಲಿನಿಂದ ಬಿಡುಗಡೆಗೊಂಡಿದ್ದಾನೆಂದು ತಿಳಿದುಬಂದಿದೆ. 
ದಾದ್ರಿ ಪ್ರಕರಣ ಸಂಬಂಧ ಬಂಧಿತನಾಗಿದ್ದ ಪುನಿತ್ ಗ್ರೇಟರ್ ನೊಯ್ಡಾ ಜೈಲಿನಲ್ಲಿ ಸೆರೆವಾಸ ಅನುಭವಿಸುತ್ತಿದ್ದ. ಏಪ್ರಿಲ್ 6 ರಂದು ಹೈಕೋರ್ಟ್ ಪೂನೀತ್ ಹಾಗೂ ಅರುಣ್'ಗೆ ಜಾಮೀನು ಮಂಜೂರು ಮಾಡಿತ್ತು. ಇದರಂತೆ ನಿನ್ನೆ ಪುನೀತ್ ಜೈಲಿನಿಂದ ಬಿಡುಗಡೆಗೊಂಡಿದ್ದಾನೆ. 
ಮತ್ತೊಬ್ಬ ಆರೋಪಿ ಅರ್ಜುನ್ ಕುರಿತಂತೆ ದಾಖಲೆಗಳು ಅಧಿಕಾರಿಗಳಿಗೆ ಇನ್ನು ಕೆಲವೇ ದಿನಗಳಲ್ಲಿ ತಲುಪಸಿದ್ದು, ಎರಡು ದಿನಗಳಲ್ಲಿ ಆತ ಕೂಡ ಬಿಡುಗಡೆಗೊಳ್ಳಲಿದ್ದಾನೆ. ದಾಖಲೆ ಅಧಿಕಾರಿಗಳಿಗೆ ತಲುವವರೆಗೂ ಅರ್ಜುನ್ ಜೈಲಿನಲ್ಲಿಯೇ ಇರಬೇಕಾಗಿದೆ ಎಂದು ವರದಿಗಳು ತಿಳಿಸಿವೆ. 
ಉತ್ತರಪ್ರದೇಶದ ದಾದ್ರಿಯಲ್ಲಿ ಗೋಮಾಂಸ ಸಂಗ್ರಹಣೆಯಲ್ಲಿ ತೊಡಗಿದ್ದಾನೆಂದು ಅನುಮಾನಿಸಿ 10 ಜನರ ಗುಂಪೊಂದು 2015ರ ಸೆಪ್ಟೆಂಬರ್ 28ರಂದು 50 ವರ್ಷದ ಮೊಹಮ್ಮದ್ ಇಖ್ಲಾಕ್ ಎಂಬುವವರ ಮನೆ ಮೇಲೆ ದಾಳಿ ಮಾಡಿದ ಇಖ್ಲಾಕ್ ನನ್ನು ಹತ್ಯೆ ಮಾಡಿತ್ತು. ಈ ಪ್ರಕರಣ ದೇಶದಾದ್ಯಂತ ತೀವ್ರ ಚರ್ಚೆಗೆ ಎಡೆಮಾಡಿಕೊಟ್ಟಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT