ನವದೆಹಲಿ: ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿದ್ದ ಗಡಿ ರಕ್ಷಣಾ ಪಡೆ(ಬಿಎಸ್ಎಫ್)ಯ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಬಂಧಿಸಲಾಗಿದೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ.
ಕಳಪೆ ಗುಣಮಟ್ಟದ ಆಹಾರದ ಬಗ್ಗೆ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ತೇಜ್ ಬಹದ್ದೂರ್ ಯಾದವ್ ವಿರುದ್ಧ ತನಿಖೆಯ ನಂತರ ಸೇವೆಯಿಂದ ವಜಾಗೊಳಿಸಲಾಗಿದೆ.
ಸಿಬ್ಬಂದಿ ಕೋರ್ಟ್ ತನಿಖಾ ವರದಿಯನ್ನು ಆಧರಿಸಿ ಯಾದವ್ ಅವರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ತೇಜ್ ಬಹದ್ದೂರ್ ಯಾದವ್ ಅವರು ಸೇನೆ ವಿರುದ್ಧ ಸುಳ್ಳು ಆರೋಪ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ತೇಜ್ ಬಹದ್ದೂರ್ ಯಾದವ್ ವಿಡಿಯೋ ಒಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಸೈನಿಕರಿಗೆ ಪೂರೈಸಲಾಗುತ್ತಿರುವ ಆಹಾರದ ಬಗ್ಗೆ ತೇಜ್ ಬಹದ್ದೂರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತು ತನ್ನನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿಗೂ ಮನವಿಯನ್ನು ಸಲ್ಲಿಸಿದ್ದರು.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos