ತೇಜ್ ಬಹದ್ದೂರ್ ಯಾದವ್ 
ದೇಶ

ಕಳಪೆ ಆಹಾರ ಪ್ರಶ್ನಿಸಿದ್ದ ಬಿಎಸ್ಎಫ್ ಯೋಧ ತೇಜ್ ಬಹದ್ದೂರ್ ಯಾದವ್ ವಜಾ

ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿದ್ದ ಗಡಿ ರಕ್ಷಣಾ ಪಡೆ(ಬಿಎಸ್​ಎಫ್)ಯ ಯೋಧ ತೇಜ್ ಬಹದ್ದೂರ್...

ನವದೆಹಲಿ: ಸೈನಿಕರಿಗೆ ಕಳಪೆ ಗುಣಮಟ್ಟದ ಆಹಾರ ನೀಡಲಾಗುತ್ತಿದೆ ಎಂದು ಆರೋಪಿಸಿದ್ದ ಗಡಿ ರಕ್ಷಣಾ ಪಡೆ(ಬಿಎಸ್​ಎಫ್)ಯ ಯೋಧ ತೇಜ್ ಬಹದ್ದೂರ್ ಯಾದವ್ ಅವರನ್ನು ಕೆಲಸದಿಂದ ವಜಾಗೊಳಿಸಲಾಗಿದೆ. ಬಂಧಿಸಲಾಗಿದೆ ಎಂದು ಅವರ ಪತ್ನಿ ಆರೋಪಿಸಿದ್ದಾರೆ.
ಕಳಪೆ ಗುಣಮಟ್ಟದ ಆಹಾರದ ಬಗ್ಗೆ ವಿಡಿಯೋ ಮಾಡಿ ಅದನ್ನು ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ತೇಜ್ ಬಹದ್ದೂರ್ ಯಾದವ್ ವಿರುದ್ಧ ತನಿಖೆಯ ನಂತರ ಸೇವೆಯಿಂದ ವಜಾಗೊಳಿಸಲಾಗಿದೆ.
ಸಿಬ್ಬಂದಿ ಕೋರ್ಟ್ ತನಿಖಾ ವರದಿಯನ್ನು ಆಧರಿಸಿ ಯಾದವ್ ಅವರನ್ನು ಕೆಲಸದಿಂದ ತೆಗೆಯಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲದೆ ತೇಜ್ ಬಹದ್ದೂರ್ ಯಾದವ್ ಅವರು ಸೇನೆ ವಿರುದ್ಧ ಸುಳ್ಳು ಆರೋಪ ಮಾಡಿರುವುದು ತನಿಖೆಯ ವೇಳೆ ಪತ್ತೆಯಾಗಿದೆ ಎಂದು ಅವರು ಹೇಳಿದ್ದಾರೆ.
ಕೆಲವು ತಿಂಗಳುಗಳ ಹಿಂದೆ ತೇಜ್ ಬಹದ್ದೂರ್ ಯಾದವ್ ವಿಡಿಯೋ ಒಂದನ್ನು ಮಾಡಿ ಸಾಮಾಜಿಕ ಜಾಲತಾಣಗಳಿಗೆ ಪೋಸ್ಟ್ ಮಾಡಿದ್ದರು. ಈ ವಿಡಿಯೋದಲ್ಲಿ ಸೈನಿಕರಿಗೆ ಪೂರೈಸಲಾಗುತ್ತಿರುವ ಆಹಾರದ ಬಗ್ಗೆ ತೇಜ್ ಬಹದ್ದೂರ್ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ಕುರಿತು ತನ್ನನ್ನು ಬೆಂಬಲಿಸುವಂತೆ ಪ್ರಧಾನಿ ನರೇಂದ್ರ ಮೋದಿಗೂ ಮನವಿಯನ್ನು ಸಲ್ಲಿಸಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕಟ್ಟಡ ಕುಸಿತಕ್ಕೂ ಕೆಲವೇ ಕ್ಷಣಗಳ ಮುನ್ನ 22 CRPF ಸೈನಿಕರ ರಕ್ಷಣೆ, Indian Army ಹೆಲಿಕಾಪ್ಟರ್ ರಣರೋಚಕ ಕಾರ್ಯಾಚರಣೆ! video

'ದೊಡ್ಡ ಆಘಾತ': ಅಮೆರಿಕದಲ್ಲಿ ಶೇ.50 ಸುಂಕ ಜಾರಿ, 48.2 ಬಿಲಿಯನ್ ಡಾಲರ್ ಮೌಲ್ಯದ ಭಾರತದ ರಫ್ತಿಗೆ ಹೊಡೆತ

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 32 ಮಂದಿ ಸಾವು

Shocking: ಆಸಿಸ್ ಕ್ರಿಕೆಟ್ ದಿಗ್ಗಜ Michael Clarkeಗೆ 'ಚರ್ಮದ ಕ್ಯಾನ್ಸರ್'!

'ಮದುವೆಗೆ ಮುನ್ನ ಪೋಷಕರ ಒಪ್ಪಿಗೆ ಕಡ್ಡಾಯಗೊಳಿಸಿ': ಹರಿಯಾಣ BJP ಶಾಸಕ

SCROLL FOR NEXT