ಮತಯಂತ್ರ 
ದೇಶ

ರಸೀದಿ ಸಹಿತ ಮತಯಂತ್ರ: ಆಯೋಗದ ಯೋಜನೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ

ರಸೀದಿ ಸಹಿತ ಮತಯಂತ್ರದ ಬಳಕೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.

ನವದೆಹಲಿ: ರಸೀದಿ ಸಹಿತ ಮತಯಂತ್ರದ ಬಳಕೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ.   
ಇತ್ತೀಚೆಗಷ್ಟೇ ನಡೆದ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯ ಪೈಕಿ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಯಲ್ಲಿ ಮತಯಂತ್ರಗಳನ್ನು ದುರ್ಬಳಕೆ ಮಾಡಲಾಗಿದೆ ಎಂದು ವಿರೋಧ ಪಕ್ಷಗಳು ಆರೋಪಿಸಿದ್ದವು. ಈ ಹಿನ್ನೆಲೆಯಲ್ಲಿ ಮತದಾರರು ಯಾವ ಪಕ್ಷಕ್ಕೆ ಮತ ಹಾಕಿದ್ದಾರೆ ಎಂಬ ಬಗ್ಗೆ ವಿವರಣೆ ಇರುವ ರಸೀದಿ ಸಹಿತ ಮತಯಂತ್ರಗಳ ಬಳಕೆಗೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ. 
ಕೇಂದ್ರ ಸಚಿವ ಸಂಪುಟ ಸಭೆ ಒಪ್ಪಿಗೆಯ ಹಿನ್ನೆಲೆಯಲ್ಲಿ ವೆರಿಫೈಡ್‌ ಪೇಪರ್‌ ಆಡಿಟ್‌ ಟ್ರೈಯಲ್‌ (ವಿವಿಪಿಎಟಿ) ಅಳವಡಿಕೆ ಮಾಡಿದ ಮತಯಂತ್ರಗಳನ್ನು ಬಳಕೆ ಮಾಡಲಾಗುತ್ತದೆ. ರಸೀದಿ ನೀಡುವ 16 ಲಕ್ಷ ಮತಯಂತ್ರಗಳ ಖರೀದಿಗೆ ಕೇಂದ್ರ ಚುನಾವಣಾ ಆಯೋಗ 3,174 ಕೋಟಿ ಅನುದಾನ ಕೇಳಿತ್ತು. 
ಚುನಾವಣಾ ಆಯೋಗದ ಮನವಿಗೆ ಸ್ಪಂದಿಸಿದ್ದ ಕೇಂದ್ರ ಸರ್ಕಾರ ಈ ವರೆಗೂ 9,200 ಕೋಟಿ ರೂಗಳನ್ನು ನೀಡಿದೆ. ವಿವಿಪಿಎಟಿ ಅಳವಡಿಕೆ ಮಾಡಿದ ನಂತರ ಮತದಾರರು ಯಾವ ಪಕ್ಷಕ್ಕೆ ಮತ ಹಾಕಿದ್ದಾರೆ ಎಂಬ ಬಗ್ಗೆ ವಿವರಣೆ ಇರುವ ರಸೀದಿ ಲಭ್ಯವಿರುತ್ತದೆ. ಅದನ್ನು ಮತದಾರಿಗೆ ಕೊಡಲಾಗುವುದಿಲ್ಲ. ಆದರೆ ತಾವು ಯಾರಿಗೆ ಮತಚಲಾವಣೆ ಮಾಡಿದ್ದೇವೆ ಎಂಬ ಬಗ್ಗೆ ಮತದಾರರು ರಸೀದಿಯನ್ನು ವೀಕ್ಷಿಸಬಹುದಾಗಿದೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT