ಸುರೇಶ್ ಪ್ರಭು 
ದೇಶ

ರೈಲು ವಿಳಂಬ ತಪ್ಪಿಸಿ ಇಲ್ಲಾ ಕ್ರಮ ಎದುರಿಸಿ: ಅಧಿಕಾರಿಗಳಿಗೆ ಸುರೇಶ್ ಪ್ರಭು ಎಚ್ಚರಿಕೆ

ರೈಲುಗಳು ತಡವಾಗಿ ಸಂಚರಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರು....

ನವದೆಹಲಿ: ರೈಲುಗಳು ತಡವಾಗಿ ಸಂಚರಿಸುತ್ತಿರುವ ಬಗ್ಗೆ ವ್ಯಾಪಕ ದೂರುಗಳು ಬಂದ ಹಿನ್ನೆಲೆಯಲ್ಲಿ ರೈಲ್ವೆ ಸಚಿವ ಸುರೇಶ್ ಪ್ರಭು ಅವರು ರೈಲುಗಳ ವಿಳಂಬ ತಪ್ಪಿಸಿ ಇಲ್ಲಾ ಕ್ರಮ ಎದುರಿಸಿ ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ್ದಾರೆ.
ರೈಲುಗಳ ಸಂಚಾರದಲ್ಲಿ ಸಮಯ ಪಾಲನೆಯಾಗದಿದ್ದರೆ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸುರೇಶ್‌ ಪ್ರಭು ಅವರು ಹೇಳಿದ್ದಾರೆ.
ಸಮಯ ಪಾಲನೆಯನ್ನು ಕಟ್ಟು ನಿಟ್ಟಾಗಿ ಜಾರಿಗೊಳಿಸಲು ರಾತ್ರಿ 10 ಗಂಟೆಯಿಂದ ಬೆಳಗ್ಗೆ ಗಂಟೆಯವರೆಗೆ ರಾತ್ರಿ ಪಾಳಿಯಲ್ಲಿ ಹಿರಿಯ ಶ್ರೇಣಿಯ ಅಧಿಕಾರಿಗಳನ್ನು ನಿಯೋಜಿಸುವಂತೆ ವಲಯಗಳ ಮುಖ್ಯಸ್ಥರಿಗೆ ಸಚಿವರು ಸೂಚನೆ ನೀಡಿದ್ದಾರೆ. ಅಲ್ಲದೆ ಭಾರತೀಯ ರೈಲ್ವೆ ವೆಬ್ ಸೈಟ್ ರಾಷ್ಟ್ರೀಯ ರೈಲ್ವೆ ವಿಚಾರಣೆ ವ್ಯವಸ್ಥೆ(ಎನ್ ಟಿಇಎಸ್ )ಯಲ್ಲಿ ಲಭ್ಯವಿರುವ ರೈಲುಗಳ ವೇಳಾಪಟ್ಟಿಯ ಮಾಹಿತಿ ದೋಷಗಳನ್ನು ಸರಿಪಡಿಸುವಂತೆ ಸೂಚಿಸಿದ್ದಾರೆ.
ಕಳೆದ ಏಪ್ರಿಲ್ 1ರಿಂದ 16ರವರೆಗಿನ ಅವಧಿಯಲ್ಲಿ ರೈಲ್ವೆ ಸಮಯಪಾಲನೆ ಮಟ್ಟ ಶೇ.79ಕ್ಕೆ ಕುಸಿದಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಈ ಮಟ್ಟ ಶೇ.84ರಷ್ಟಿತ್ತು. ಈ ಹಿನ್ನೆಲೆಯಲ್ಲಿ ಸುರೇಶ್ ಪ್ರಭು ಅವರು ಅಧಿಕಾರಿಗಳಿಗೆ ಕಠಿಣ ಎಚ್ಚರಿಕೆ ನೀಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

2030 Commonwealth Games: ಭಾರತದ ಬಿಡ್‌ಗೆ ಕ್ಯಾಬಿನೆಟ್ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

Theaterisation: 'ಥಿಯೇಟರ್ ಕಮಾಂಡ್‌' ರಚನೆ: ಪ್ರಯತ್ನದಲ್ಲಿ ಪ್ರಗತಿ ಸಾಧಿಸಲಾಗುತ್ತಿದೆಯೇ? ಆಡ್ಮಿರಲ್ ಡಿಕೆ ತ್ರಿಪಾಠಿ ಹೇಳಿದ್ದು ಹೀಗೆ...

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

'ಪಾಕಿಸ್ತಾನದೊಂದಿಗೆ ಯುದ್ಧ ನಿಲ್ಲಿಸಲು ಟ್ರಂಪ್ 24 ಗಂಟೆ ಕಾಲಾವಕಾಶ ನೀಡಿದ್ದರು, ಮೋದಿ ಕೇವಲ 5 ಗಂಟೆಗಳಲ್ಲಿ ಪಾಲಿಸಿದರು': ರಾಹುಲ್ ಗಾಂಧಿ

'ಧಮ್ ಇದ್ರೆ.. ಸನಾತನಧರ್ಮ, ಬಿಹಾರಿಗಳ ಕುರಿತ ಹೇಳಿಕೆ ಮತ್ತೆ ಹೇಳ್ತೀರಾ?': MK Stalin ಗೆ ಬಿಜೆಪಿ-ಜೆಡಿಯು ಸವಾಲು!

SCROLL FOR NEXT