ಬಾಬ್ರಿ ಮಸೀದಿ 
ದೇಶ

ಬಾಬ್ರಿ ಮಸೀದಿ ಪ್ರಕರಣ 'ಸುಪ್ರೀಂ' ತೀರ್ಪಿಗೆ ಕಾಂಗ್ರೆಸ್ ಸ್ವಾಗತ

ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಂಬಂಧ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮತ್ತು ಬಿಜೆಪಿ ನಾಯಕರ ವಿರುದ್ಧ ವಿಚಾರಣೆಗೆ ಸುಪ್ರೀಂಕೋರ್ಟ್...

ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣದ ಸಂಬಂಧ ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್ಎಸ್ಎಸ್) ಮತ್ತು ಬಿಜೆಪಿ ನಾಯಕರ ವಿರುದ್ಧ ವಿಚಾರಣೆಗೆ ಸುಪ್ರೀಂಕೋರ್ಟ್ ಗ್ರೀಸ್ ಸಿಗ್ನಲ್ ನೀಡಿರುವುದಕ್ಕೆ ಕಾಂಗ್ರೆಸ್ ಸ್ವಾಗತಿಸಿದೆ. 
ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ವಿರುದ್ಧ ಕ್ರಮಕೈಗೊಳ್ಳಬೇಕು. ಆಗ ಮಾತ್ರ ಜನರು ಸುಪ್ರೀಂಕೋರ್ಟ್ ಮೇಲೆ ನಂಬಿಕೆ ಕಳೆದುಕೊಳ್ಳುವುದಿಲ್ಲ ಎಂದು ಕಾಂಗ್ರೆಸ್ ಮುಖಂಡ ನಸೀಮ್ ಖಾನ್ ಹೇಳಿದ್ದಾರೆ. 
ಎಲ್.ಕೆ ಅಡ್ವಾಣಿ, ಮುರುಳಿ ಮನೋಹರ್ ಜೋಷಿ ಮತ್ತು ಉಮಾ ಭಾರತಿ ಸೇರಿದಂತೆ ಬಿಜೆಪಿ ನಾಯಕರ ವಿರುದ್ಧ ದಾಖಲಾಗಿದ್ದ ಕ್ರಿಮಿನಲ್ ಕೇಸ್ ವಿಚಾರಣೆಗೆ ಸುಪ್ರೀಂ ಅಸ್ತು ಎಂದಿದೆ. ಅಲ್ಲದೆ ಲಖನೌ ಹಾಗೂ ರಾಯ್ ಬರೇಲಿಯ ನ್ಯಾಯಾಲಯಗಳಲ್ಲಿ ಪ್ರತ್ಯೇಕ ವಿಚಾರಣೆ ನಡೆಯಬೇಕು, 4 ವಾರಗಳಲ್ಲಿ ವಿಚಾರಣೆ ಪ್ರಾರಂಭವಾಗಿ 2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಳ್ಳಬೇಕು ಎಂದು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.
ಸುಪ್ರಿಂ ಕೋರ್ಟ್ ನಲ್ಲಿ ಇಂದು ನಡೆದ ವಿಚಾರಣೆಯಲ್ಲಿ ಬಿಜೆಪಿ ಹಿರಿಯ ಮುಖಂಡ ಎಲ್ ಕೆ ಅಡ್ವಾಣಿ ಹಾಗೂ ಜೋಶಿ ಸೇರಿದಂತೆ ಇತರೆ 10 ಮಂದಿ ನಾಯಕರ ವಿರುದ್ಧದ ಕ್ರಿಮಿನಲ್ ಆರೋಪದ ವಿಚಾರಣೆ ನಡೆಸಲು ಸುಪ್ರೀಂ  ಕೋರ್ಟ್ ಅನುಮತಿ ನೀಡಿದೆ. ಕರಸೇವಕರೊಂದಿಗೆ 13 ಮಂದಿ ಬಿಜೆಪಿ ನಾಯಕರ ವಿಚಾರಣೆ ನಡೆಸಲು ಸುಪ್ರೀಂ ಕೋರ್ಟ್ ಸೂಚನೆ ನೀಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

ಪಾಕಿಸ್ತಾನ-ಅಫ್ಘಾನಿಸ್ತಾನ ಯುದ್ಧ: 58 ಪಾಕ್ ಸೈನಿಕರು ಹತ, ತಾಲಿಬಾನ್ ಸರ್ಕಾರದ 'ದೊಡ್ಡ' ಹೇಳಿಕೆ

ಭಾರತ- ಬಾಂಗ್ಲಾದೇಶ ಗಡಿ: ರೂ. 2.82 ಕೋಟಿ ಮೌಲ್ಯದ 'ಚಿನ್ನದ ಬಿಸ್ಕತ್ತು' ಜೊತೆಗೆ ಕಳ್ಳಸಾಗಣೆದಾರನನ್ನು ಬಂಧಿಸಿದ BSF!

ದೇಶದ ಮುಸ್ಲಿಂರನ್ನು ಗುರಿಯಾಗಿಸಿಕೊಳ್ಳುವ ಬಿಜೆಪಿ ಅಫ್ಘಾನಿಸ್ತಾನದ ಜೊತೆ ಸಂಬಂಧ ಬೆಳೆಸುವುದು 'ಬೂಟಾಟಿಕೆ': ಮೆಹಬೂಬಾ ಮುಫ್ತಿ

'ಬ್ಲೂ ಸ್ಟಾರ್ ಆಪರೇಷನ್' ಕಾರ್ಯಾಚರಣೆ ತಪ್ಪಿಗೆ ಇಂದಿರಾ ಗಾಂಧಿ ಪ್ರಾಣ ತೆತ್ತರು: ಪಿ ಚಿದಂಬರಂ

SCROLL FOR NEXT