ಸಂಗ್ರಹ ಚಿತ್ರ 
ದೇಶ

ಶಶಿಕಲಾ ತಂಡದ ಉಚ್ಛಾಟನೆ ನಮ್ಮ ಹೋರಾಟಕ್ಕೆ ಸಿಕ್ಕ ಮೊದಲ ಜಯ: ಪನ್ನೀರ್ ಸೆಲ್ವಂ

ಶಶಿಕಲಾ ಮತ್ತು ಅವರ ತಂಡವನ್ನು ಎಐಎಡಿಎಂಕೆಯಿಂದ ಉಚ್ಛಾಟನೆ ಮಾಡಲು ನಿರ್ಧರಿಸಿರುವುದು ನಮ್ಮ ಹೋರಾಟಕ್ಕೆ ಸಂದ ಮೊದಲ ಜಯ ಎಂದು ತಮಿಳುನಾಡು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬುಧವಾರ ಹೇಳಿದ್ದಾರೆ.

ಚೆನ್ನೈ: ಶಶಿಕಲಾ ಮತ್ತು ಅವರ ತಂಡವನ್ನು ಎಐಎಡಿಎಂಕೆಯಿಂದ ಉಚ್ಛಾಟನೆ ಮಾಡಲು ನಿರ್ಧರಿಸಿರುವುದು ನಮ್ಮ ಹೋರಾಟಕ್ಕೆ ಸಂದ ಮೊದಲ ಜಯ ಎಂದು ತಮಿಳುನಾಡು ಮಾಜಿ ಸಿಎಂ ಒ ಪನ್ನೀರ್ ಸೆಲ್ವಂ ಬುಧವಾರ ಹೇಳಿದ್ದಾರೆ.

ಕಳೆದೆರಡು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಹೈಡ್ರಾಮಾಕ್ಕೆ ಬುಧವಾರ ತೆರೆ ಬೀಳುವ ಸಾಧ್ಯತೆ ಇದ್ದು, ಶಶಿಕಲಾ ಮತ್ತು ಅವರ ತಂಡವನ್ನು ಉಚ್ಛಾಟನೆ ಮಾಡಲು ಎಐಎಡಿಎಂಕೆ ನಿರ್ಧರಿಸಿದೆ. ಈ ನಿರ್ಧಾರ ಹೊರ ಬಿದ್ದ  ಬೆನ್ನಲ್ಲೇ ಮಾಧ್ಯಮಗಳೊಂದಿಗೆ ಮಾತನಾಡಿದ ಬಂಡಾಯ ಬಣದ ನಾಯಕ ಒ ಪನ್ನೀರ್ ಸೆಲ್ವಂ ಅವರು ತಮ್ಮ ಹೋರಾಟಕ್ಕೆ ಜಯ ಸಂದಿದ್ದು, ಶಶಿಕಲಾ ಮತ್ತು ಅವರ ತಂಡವನ್ನು ಉಚ್ಛಾಟನೆ ಮಾಡಲಾಗುತ್ತಿದೆ. ಇದೀಗ ನಾವು  ಪರಸ್ಪರರು ಒಟ್ಟಿಗೆ ಕುಳಿತು ಚರ್ಚಿಸಿ ನಮ್ಮಲ್ಲಿನ ಭಿನ್ನಮತಗಳನ್ನು ಬಗೆಹರಿಸಿಕೊಳ್ಳುತ್ತೇವ ಎಂದು ಹೇಳಿದ್ದಾರೆ.

ಮುಂದಿನ ದಿನಗಳಲ್ಲಿ ನಾವೆಲ್ಲರೂ ಒಟ್ಟಿಗೆ ಪಕ್ಷವನ್ನು ಕಟ್ಟುತ್ತೇವೆ ಮತ್ತು ಜನರ ಮುಂದೆ ಒಟ್ಟಿಗೆ ಹೋಗಿ ಮತ ಕೇಳುಕ್ಕೇವೆ ಎಂದು ಪನ್ನೀರ್ ಸೆಲ್ವಂ ಹೇಳಿದ್ದಾರೆ.

ನಿನ್ನೆ ತಮಿಳುನಾಡು ಸಿಎಂ ಎಡಪ್ಪಾಡಿ ಪಳನಿ ಸ್ವಾಮಿ ಅವರು ತಮ್ಮ ಪಕ್ಷದ 9 ಮಂದಿ ಹಿರಿಯ ಮುಖಂಡರನ್ನು ಕಳುಹಿಸಿ ಸಂಧಾನ ಮಾತುಕತೆಗೆ ಬರುವಂತೆ ಆಹ್ವಾನಿಸಿದ್ದರು. ಆದರೆ ಇದಕ್ಕೊಪ್ಪದ ಪನ್ನೀರ್ ಸೆಲ್ವಂ ತಾವು  ಸಂಧಾನ ಸಭೆ ಬರಲು ಮೊದಲು ಶಶಿಕಲಾ ಮತ್ತು ತಂಡವನ್ನು ಉಚ್ಛಾಟಿಸಬೇಕು ಎಂಬ ಷರತ್ತು ಒಡ್ಡಿದ್ದರು, ಇದೀಗ ಆ ಷರತ್ತಿಗೆ ಪಳನಿಸ್ವಾಮಿ ಒಪ್ಪಿಗೆ ನೀಡಿದ್ದು, ಇದೇ ಕಾರಣಕ್ಕೆ ಪನ್ನೀರ್ ಸೆಲ್ವಂ ಸಂಧಾನ ಮಾತುಕತೆಗೆ ತೆರಳಲು  ನಿರ್ಧರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಲ್ಲಿ ಭೀಕರ ಮಳೆಯಿಂದ ಭಾರೀ ಅನಾಹುತ ಸೃಷ್ಟಿ: ವೈಷ್ಣೋದೇವಿ ಮಾರ್ಗದಲ್ಲಿ ಭೂಕುಸಿತ, ಕನಿಷ್ಠ 13 ಮಂದಿ ಸಾವು

ದೇಶಾದ್ಯಂತ ಗಣೇಶ ಚತುರ್ಥಿ ಸಂಭ್ರಮ: ದೇವಾಲಯಗಳಲ್ಲಿ ವಿಶೇಷ ಪೂಜೆ, ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿಗಳಿಂದ ಶುಭಾಶಯ

ಧರ್ಮಸ್ಥಳ ಕೇಸ್: ತನಿಖೆ ಶೀಘ್ರಗತಿ ಪೂರ್ಣಗೊಳಿಸಲು SIT ಪ್ರಯತ್ನ; ಗೃಹ ಸಚಿವ ಡಾ.ಜಿ.ಪರಮೇಶ್ವರ್

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

SCROLL FOR NEXT