ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ 
ದೇಶ

ತ್ರಿವಳಿ ತಲಾಖ್ ನಿಷೇಧಿಸುವುದಾದರೆ, ಸತಿಸಹಗಮನ ಪದ್ಧತಿ ಆಚರಣೆ ಪ್ರಾರಂಭಿಸಿ: ಅಜಂ ಖಾನ್

ತ್ರಿವಳಿ ತಲಾಖ್, ನಿಖಾ ಹಲಾಲ್ ಮತ್ತು ಬಹುಪತ್ನಿತ್ವ ಸಂಪ್ರದಾಯದಾಯವನ್ನು ನಿಷೇಧಿಸುವುದಾದರೆ, ಸತಿಸಹಗಮನ ಪದ್ಧತಿಯನ್ನು ಪುನಃ ಸೇರ್ಪಡೆಗೊಳಿಸಿ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಬುಧವಾರ ಹೇಳಿದ್ದಾರೆ...

ರಾಮ್ಪುರ: ತ್ರಿವಳಿ ತಲಾಖ್, ನಿಖಾ ಹಲಾಲ್ ಮತ್ತು ಬಹುಪತ್ನಿತ್ವ ಸಂಪ್ರದಾಯದಾಯವನ್ನು ನಿಷೇಧಿಸುವುದಾದರೆ, ಸತಿಸಹಗಮನ ಪದ್ಧತಿಯನ್ನು ಪುನಃ ಸೇರ್ಪಡೆಗೊಳಿಸಿ ಎಂದು ಸಮಾಜವಾದಿ ಪಕ್ಷದ ನಾಯಕ ಅಜಂಖಾನ್ ಅವರು ಬುಧವಾರ ಹೇಳಿದ್ದಾರೆ. 
ತ್ರಿವಳಿ ತಲಾಖ್ ಸಂಬಂಧ ದೇಶದಾದ್ಯಂತ ಎದ್ದಿರುವ ವಿವಾದ ಸಂಬಂಧ ಪ್ರತಿಕ್ರಿಯೆ ನೀಡಿರುವ ಅವರು, ಸತಿಸಹಗಮನ ಪದ್ಧತಿ ಹಿಂದುಗಳ ಸಂಪ್ರದಾಯವಾಗಿದೆ. ಪತಿ ಮೃತಪಟ್ಟ ನಂತರ ಪತ್ನಿ ಕೂಡ ಚಿತೆಗೆ ಹಾರುವುದು ಹಿಂದೂಗಳ ಸಂಪ್ರದಾಯವಾಗಿತ್ತು. ತ್ರಿವಳಿ ತಲಾಖಅ ನ್ನು ನಿಷೇಧಿಸಲು ಮುಂದಾಗುತ್ತಿರುವ ಸರ್ಕಾರ ಮೊದಲು ಸತಿಸಹಗಮನ ಪದ್ಧತಿಯನ್ನು ಮರುಸೇರ್ಪಡೆಗೊಳಿಸಲಿ ಎಂದು ಹೇಳಿದ್ದಾರೆ. 
ತ್ರಿವಳಿ ತಲಾಖ್ ಕುರಿತಂತೆ ಕಾನೂನು ರಚಿನೆ ಮಾಡುದಂತೆ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಯಾರು ತಡೆಯುತ್ತಿದ್ದಾರೆ?...ಕಾನೂನು ರಚನೆ ಮಾಡುವುದಕ್ಕೂ ಮುನ್ನ ಸತಿಸಹಗಮನ ಪದ್ಧತಿಯನ್ನು ಯಾವ ಮುಸ್ಲಿಮರು ವಿರೋಧಿಸಿದ್ದರು ಎಂಬ ಪ್ರಶ್ನೆಗೆ ಮೊದಲು ಉತ್ತರ ಹೇಳಿ...ಸತಿಸಹಗಮನ ಪದ್ಧತಿ ಹಿಂದೂ ಸಂಪ್ರದಾಯದ ಭಾಗವಾಗಿತ್ತು. ಮೊದಲು ಆ ಸಂಪ್ರದಾಯವನ್ನು ಮರುಸೇರ್ಪಡೆಗೊಳಿಸಿ ಎಂದು ತಿಳಿಸಿದ್ದಾರೆ. 
ತ್ರಿವಳಿ ತಲಾಖ್ ಕುರಿತಂತೆ ಕೆಲ ದಿನಗಳ ಹಿಂದಷ್ಟೇ ಪ್ರತಿಕ್ರಿಯೆ ನೀಡಿದ್ದ ಯೋಗಿ ಆದಿತ್ಯನಾಥ್ ಅವರು, ತ್ರಿವಳಿ ತಲಾಖ್  ಅನ್ನು ಹಿಂದೂಗಳ ಪುರಾಣ ಗ್ರಂಥ ಮಹಾಭಾರತದಲ್ಲಿ ದ್ರೌಪದಿಯ ವಸ್ತ್ರಾಪಹರಣಕ್ಕೆ ಹೋಲಿಕೆ ಮಾಡಿದ್ದರು. ಜ್ವಲಂತ ಸಮಸ್ಯೆಯಾಗಿರುವ ತ್ರಿವಳಿ ತಲಾಖ್ ಬಗ್ಗೆ ಮೌನ ವಹಿಸುವುದು ದ್ರೌಪದಿಯ ವಸ್ತ್ರಾಪಹರಣದಷ್ಟೇ ಸಮಾನ ತಪ್ಪು. ಚಂದ್ರಶೇಖರ್ ಕೂಡ ಸಮಾನ ನಾಗರಿಕ ಸಂಹಿತೆಯ ಪರವಾಗಿದ್ದರು. ಎಲ್ಲಾ ಮುಸ್ಲಿಂ ಸಹೋದರಿಯರಿಗೆ ನ್ಯಾಯ ಸಿಗಬೇಕು ಎಂದು ಹೇಳಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

Eiffel Tower ಇನ್ನು ನೆನಪು ಮಾತ್ರ?: ಪ್ರಸಿದ್ಧ ಸ್ಮಾರಕ ಕೆಡವುತ್ತಿರುವ ಬಗ್ಗೆ ಟ್ಯಾಪಿಯೋಕಾ ಟೈಮ್ಸ್ ಹೇಳಿದ್ದೇನು?

SCROLL FOR NEXT