ಸಾಂದರ್ಭಿಕ ಚಿತ್ರ 
ದೇಶ

ಮೇ1 ರಿಂದ ವಿಐಪಿ ವಾಹನಗಳ ಮೇಲಿನ ಕೆಂಪು ದೀಪ ಬಂದ್; ಕೇಂದ್ರ ಸಂಪುಟದ ಮಹತ್ವದ ನಿರ್ಧಾರ

ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ಗಣ್ಯರು, ಸಚಿವರು ಮತ್ತು ಶಾಸಕರ ಕಾರಿನ ಮೇಲೆ ಕೆಂಪು ದೀಪ ಹಾಕಿಕೊಳ್ಳುವುದನ್ನು...

ನವದೆಹಲಿ: ವಿಐಪಿ ಸಂಸ್ಕೃತಿಗೆ ಕಡಿವಾಣ ಹಾಕಲು ಮುಂದಾಗಿರುವ ಕೇಂದ್ರ ಸರ್ಕಾರ ಗಣ್ಯರು, ಸಚಿವರು ಮತ್ತು ಶಾಸಕರು ಕಾರಿನ ಮೇಲೆ ಕೆಂಪು ದೀಪ ಹಾಕಿಕೊಳ್ಳುವುದನ್ನು ನಿಷೇಧಿಸಿದೆ. ಮೇ 1 ರಿಂದ ಯಾವುದೇ ವಿಐಪಿಗಳು ತಮ್ಮ ಕಾರಿನ ಮೇಲೆ ಕೆಂಪು ದೀಪ ಅಳವಡಿಸಿಕೊಳ್ಳದಂತೆ ಆದೇಶ ಹೊರಡಿಸಿದೆ.
ರಾಷ್ಟ್ರಪತಿ, ಉಪರಾಷ್ಟ್ರಪತಿ, ಪ್ರಧಾನ ಮಂತ್ರಿ ಹಾಗೂ ಸುಪ್ರೀಂಕೋರ್ಟ್ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆ ಸ್ಪೀಕರ್ ಮಾತ್ರ ಕೆಂಪು ದೀಪ ಅಳವಡಿಸಿಕೊಳ್ಳಬಹುದಾಗಿದೆ.
ನಿಯಮದ ಪ್ರಕಾರ ಕ್ಯಾಬಿನೆಟ್ ದರ್ಜೆಯ 32 ಸಚಿವರಿಗೆ ಮತ್ತಿತರಿಗೆ ತಮ್ಮ ಕಾರುಗಳಲ್ಲಿ ಕೆಂಪು ದೀಪ ಹಾಕಿಕೊಳ್ಳಬಹುದಾಗಿತ್ತು, ಆದರೆ ಕೆಂಪು ದೀಪ ಹಾಕಿಸಿಕೊಳ್ಳುವ ವಾಹನಗಳ ಸಂಖ್ಯೆ ಹೆಚ್ಚಾಗಿತ್ತು.
ಕಳೆದ ವಾರ ಪ್ರಧಾನ ಮಂತ್ರಿಗಳ ಕಾರ್ಯಾಲಯ ಸಭೆ ಕರೆದು ಈ ವಿಷಯವಾಗಿ ಸಭೆ ನಡೆಸಿತು. ರಸ್ತೆ ಸಾರಿಗೆ ಸಂಸ್ಥೆ ಮೂರು ಆಯ್ಕೆಗಳನ್ನಿಟ್ಟಿತ್ತು, ಇದಕ್ಕಾಗಿ ಪ್ರಧಾನ ಮಂತ್ರಿಗಳು ಹಿರಿಯ ನಾಯಕರು ಮತ್ತು ಸಂಪುಟ ಸಚಿವರೊಂದಿಗೆ ಸಭೆ ನಡೆಸಿ ಕೆಂಪು ದೀಪ ಬಳಸುವ ಸಂಸ್ಕತಿಗೆ ಅಂತ್ಯ ಹಾಡಿದೆ. ಈ ಪ್ರಸ್ತಾವನೆಯನ್ನು ಒಂದೂವರೆ ವರ್ಷದ ಹಿಂದೆಯೇ ಕಳುಹಿಸಲಾಗಿತ್ತಂತೆ. 
ದೆಹಲಿಯಲ್ಲಿ ಆಮ್ ಆದ್ಮಿ ಪಕ್ಷದ ಎಲ್ಲಾ ಸಚಿವರು  ಕೆಂಪು ದೀಪದ ಕಾರು ಬಳಕೆಯನ್ನು ನಿಲ್ಲಿಸಿದ್ದರು. ಇತ್ತೀಚೆಗೆ ಪಂಜಾಬ್ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ವಿಐಪಿ ಸಂಸ್ಕೃತಿಯಿಂದ ದೂರ ಉಳಿಯುವಂತೆ ಸಹೋದ್ಯೋಗಿಗಳಿಗೆ ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನಾವು ಏಕೆ ತಡೆಯಲಿ... ತಾಂತ್ರಿಕ ಸಮಸ್ಯೆ ಹೊರತು ಉದ್ದೇಶಪೂರ್ವಕವಲ್ಲ: ಮಹಿಳಾ ಪತ್ರಕರ್ತರನ್ನು ದೂರವಿಟ್ಟ ಬಗ್ಗೆ ಮುತ್ತಕಿ ಸ್ಪಷ್ಟನೆ

'ಆಕೆ ಮಧ್ಯರಾತ್ರಿ 12.30ಕ್ಕೆ ಹೇಗೆ ಹೊರಬಂದಳು?': ಗ್ಯಾಂಗ್ ರೇಪ್ ಕುರಿತು ಮಮತಾ ಬ್ಯಾನರ್ಜಿ ಹೇಳಿಕೆ

ಹಾಸನಾಂಬ ದರ್ಶನಕ್ಕೆ ಭಕ್ತರ ಸಂಖ್ಯೆ ಹೆಚ್ಚಳ: ಎರಡೇ ದಿನಗಳಲ್ಲಿ ರೂ. 2.24 ಕೋಟಿ ಆದಾಯ, ಆರು ಸಿಬ್ಬಂದಿ ಅಮಾನತು!

ಸರ್ಕಾರಿ ಸಂಸ್ಥೆಗಳು, ಸಾರ್ವಜನಿಕ ಸ್ಥಳಗಳಲ್ಲಿ RSS ಚಟುವಟಿಕೆಗಳನ್ನು ನಿಷೇಧಿಸಿ: ಮುಖ್ಯಮಂತ್ರಿಗೆ ಪ್ರಿಯಾಂಕ್ ಖರ್ಗೆ ಪತ್ರ

RSS ನಿಷೇಧಕ್ಕೆ ಕರೆ: ಸಚಿವ ಪ್ರಿಯಾಂಕ್ ಖರ್ಗೆ ಬೌದ್ಧಿಕ ದಾರಿದ್ರ್ಯತನ ತೋರಿಸುತ್ತದೆ, ಯತ್ನಾಳ್ ಕಿಡಿ!

SCROLL FOR NEXT