ಬಾಬ್ರಿ ಮಸೀದಿ ಪ್ರಕರಣ: ಅಡ್ವಾಣಿ, ಜೋಷಿ ವಿರುದ್ಧದ ಆರೋಪ ಸಾಬೀತಾದರೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ಸಾಧ್ಯತೆ
ನವದೆಹಲಿ: ಬಾಬ್ರಿ ಮಸೀದಿ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಭೀಷ್ಮ ಅಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ ಸೇರಿ ಬಿಜೆಪಿ ನಾಯಕರ ವಿರುದ್ಧದ ಆರೋಪಗಳ ಬಗ್ಗೆ ವಿಚಾರಣೆ ನಡೆಸಲು ಈಗಾಗಲೇ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದೆ. 2 ವರ್ಷಗಳಲ್ಲಿ ಪ್ರಕರಣದ ವಿಚಾರಣೆ ಮುಕ್ತಾಯಗೊಂಡು ತೀರ್ಪು ಹೊರಬರಲಿದ್ದು, ಒಂದು ವೇಳೆ ಆರೋಪ ಸಾಬೀತಾದರೆ ಆರೋಪ ಎದುರಿಸುತ್ತಿರುವ ನಾಯಕರಿಗೆ ಗರಿಷ್ಠ 5 ವರ್ಷ ಜೈಲು ಶಿಕ್ಷೆ ವಿಧಿಸುವ ಸಾಧ್ಯತೆ ಇದೆ.
ಬಿಜೆಪಿ ನಾಯಕರ ವಿರುದ್ಧ ಐಪಿಸಿ ಸೆಕ್ಷನ್ ಅಡಿಯಲ್ಲಿ ಧಾರ್ಮಿಕ ಗುಂಪುಗಳ ನಡುವೆ ವೈಷಮ್ಯ ಮೂಡಿಸಿರುವ, ಸಂಚು ರೂಪಿಸಿರುವ, ಉದ್ದೇಶಪೂರ್ವಕವಾಗಿ ಎರಡು ಕೋಮುಗಳ ನಡುವೆ ವೈಷಮ್ಯ ಮೂಡಿಸಲು ಯತ್ನಿಸಿರುವ ಆರೋಪ ಹೊರಿಸಲಾಗಿದ್ದು, ಈ ಆರೋಪಗಳು ಒಂದು ವೇಳೆ ಸಾಬೀತಾದರೆ ಅಪರಾಧಿಗಳಿಗೆ 2-5 ವರ್ಷ ಜೈಲು ಶಿಕ್ಷೆ ವಿಧಿಸಲಾಗುತ್ತದೆ.
ಇನ್ನು ಕರಸೇವಕರ ವಿರುದ್ಧವೂ ಪ್ರಕರಣ ದಾಖಲಾಗಿದ್ದು, ಡಕಾಯತಿ ಆರೋಪ ಹೊರಿಸಲಾಗಿದ್ದು, 10 ವರ್ಷಗಳವರೆಗೆ ಜೈಲು ಶಿಕ್ಷೆ ವಿಧಿಸಬಹುದಾಗಿದೆ.
Follow KannadaPrabha channel on WhatsApp
Download the KannadaPrabha News app to follow the latest news updates
Subscribe and Receive exclusive content and updates on your favorite topics
Subscribe to KannadaPrabha YouTube Channel and watch Videos