ನರೇಂದ್ರ ಮೋದಿ 
ದೇಶ

ಸರ್ಕಾರ ಶಕ್ತಗೊಳಿಸಬೇಕೇ ಹೊರತು ನಿಯಂತ್ರಕನಾಗಬಾರದು: ಮೋದಿ

ಸ್ಪರ್ಧಾತ್ಮಕ ಸನ್ನಿವೇಶಗಳಿಗೆ ತಕ್ಕಂತೆ ಸರ್ಕಾರ ತನ್ನ ಪಾತ್ರವನ್ನೂ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದು, ನಿಯಂತ್ರಕನಿಂದ ಶಕ್ತಗೊಳಿಸುವನಾಗಬೇಕು ಎಂದು ಮೋದಿ ಹೇಳಿದ್ದಾರೆ.

ನವದೆಹಲಿ: ಸ್ಪರ್ಧಾತ್ಮಕ ಸನ್ನಿವೇಶಗಳಿಗೆ ತಕ್ಕಂತೆ ಸರ್ಕಾರ ತನ್ನ ಪಾತ್ರವನ್ನೂ ಬದಲಾವಣೆ ಮಾಡಿಕೊಳ್ಳುವ ಅಗತ್ಯವಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅಭಿಪ್ರಾಯಪಟ್ಟಿದ್ದು, ನಿಯಂತ್ರಕನಿಂದ ಶಕ್ತಗೊಳಿಸುವನಾಗಬೇಕು ಎಂದು ಮೋದಿ ಹೇಳಿದ್ದಾರೆ.  
ನಾಗರಿಕ ಸೇವಾ ದಿನಾಚರಣೆಯ ಅಂಗವಾಗಿ ಏ.21 ರಂದು ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಜನರನ್ನು ಶಕ್ತಗೊಳಿಸಬೇಕೇ ಹೊರತು ನಿಯಂತ್ರಕನಾಗಬಾರದು. ಕಳೆದ 15-20 ವರ್ಷಗಳಲ್ಲಿ ಜಗತ್ತು ಅಗಾಧ ಬದಲಾವಣೆ ಕಂಡಿದೆ. ಜನ ಸಾಮಾನ್ಯರು ಅವರ ಅಗತ್ಯತೆಗಳಿಗಾಗಿ ಸರ್ಕಾರದ ಮೇಲೆ ಅವಲಂಬಿತರಾಗಿರುತ್ತಿದ್ದರು. ಆದರೆ ಈಗ ಅವರಿಗೆ ಪರ್ಯಾಯವಾದ ವ್ಯವಸ್ಥೆಗಳಿವೆ ಎಂದಿದ್ದಾರೆ. 
ಖಾಸಗಿ ಆಸ್ಪತ್ರೆ ಹಾಗೂ ವಿಮಾನಗಳ ಉದಾಹರಣೆ ನೀಡಿರುವ ಪ್ರಧಾನಿ ನರೇಂದ್ರ ಮೋದಿ ಸಾರ್ವಜನಿಕ ಸೇವೆಗಳ ಬಗ್ಗೆ ಜನರು ಟೀಕೆ ಮಾಡುತ್ತಾರೆ. ಖಾಸಗಿ ಸೇವೆಗಳಿಂದ ಸಂತುಷ್ಟರಾಗಿದ್ದಾರೆ. ಸರ್ಕಾರವೇ ಸರ್ವಸ್ವವೂ ಆಗಿದ್ದ ಕಾಲವಿತ್ತು. ಆದರೆ ಈಗ ಅದು ಬದಲಾಗಿ ಸ್ಪರ್ಧಾತ್ಮಕ ಸನ್ನಿವೇಶ ಎದುರಾಗಿದೆ. 
ಪರ್ಯಾಯ ವ್ಯವಸ್ಥೆಗಳು ಹೆಚ್ಚುತ್ತಿವೆ. ಸರ್ಕಾರದ ಜವಾಬ್ದಾರಿಗಳು, ಸರ್ಕಾರದ ಮುಂದಿರುವ ಸವಾಲುಗಳು ಹೆಚ್ಚಿದ್ದು, ಕಾರ್ಯನಿರ್ವಹಣೆಯ ಶೈಲಿಯನ್ನು ಬದಲಿಸಿಕೊಳ್ಳಬೇಕಿದೆ ಎಂದು ಮೋದಿ ಅಭಿಪ್ರಾಯಪಟ್ಟಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT