ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

'ಸೂಕ್ತ ಪ್ರಾತಿನಿಧ್ಯ' ಹೇಳಿಕೆ: ರವಿಶಂಕರ್ ಪ್ರಸಾದ್ ಬೆನ್ನಿಗೆ ನಿಂತ ಸುಬ್ರಮಣಿಯನ್ ಸ್ವಾಮಿ

ಮುಸ್ಲಿಮರು ಬಿಜೆಪಿಗೆ ಮತ ಹಾಕದಿದ್ದರೂ ಕೇಂದ್ರ ಸರ್ಕಾರ ಅವರಿಗೆ 'ಸೂಕ್ತ ಪ್ರಾತಿನಿಧ್ಯ' ನೀಡಿದೆ ಎಂಬ ಹೇಳಿಕೆ ನೀಡಿ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರ ಬೆನ್ನಿಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ...

ನವದೆಹಲಿ: ಮುಸ್ಲಿಮರು ಬಿಜೆಪಿಗೆ ಮತ ಹಾಕದಿದ್ದರೂ ಕೇಂದ್ರ ಸರ್ಕಾರ ಅವರಿಗೆ 'ಸೂಕ್ತ ಪ್ರಾತಿನಿಧ್ಯ' ನೀಡಿದೆ ಎಂಬ ಹೇಳಿಕೆ ನೀಡಿ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರ ಬೆನ್ನಿಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ನಿಂತಿದ್ದಾರೆ. 
ರವಿ ಶಂಕರ್ ಪ್ರಸಾದ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ರವಿ ಶಂಕರ್ ಪ್ರಸಾದ್ ಅವರು ನೀಡಿರುವ ಹೇಳಿಕೆ ಸಾಂವಿಧಾನಿಕ ಪ್ರಕ್ರಿಯೆಯಂತೆ ಸರಿಯಾಗಿದೆ. ಒಮ್ಮೆ ಚುನಾವಣೆ ಮುಕ್ತಾಯಗೊಂಡ ಬಳಿಕ, ಜನಾದೇಶ ಸಿಗುತ್ತದೆ. ಮುಸ್ಲಿಮರಿಗೂ ಸೇರಿದಂತೆ ನಮ್ಮ ಸರ್ಕಾರ ಶೇ.100ರಷ್ಟು ಜನರಿಗಾಗಿ ಕೆಲಸ ಮಾಡುತ್ತದೆ. ಚುನಾವಣೆ ಬಳಿಕ ಯಾರು...ಯಾರಿಗೆ ಮತ ಹಾಕಿದರು...ಯಾರು ಮತ ಹಾಕಿಲ್ಲ ಎಂಬುದನ್ನು ನಾವು ನೋಡುವುದಿಲ್ಲ. ಹೀಗಾಗಿ ರವಿ ಶಂಕರ್ ಪ್ರಸಾದ್ ಅವರು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಹೇಳಿದ್ದಾರೆ. 
ಮೈಂಡ್ ಮೈನ್ ಶೃಂಗದಲ್ಲಿ ಮಾತನಾಡಿದ್ದ ರವಿ ಶಂಕರ್ ಪ್ರಸಾದ್ ಅವರು, ಮುಸ್ಲಿಂ ಸಮುದಾಯದವರು ನಮಗೆ ಮತ ಹಾಕುವುದಿಲ್ಲ. ಆದರೂ ನಾವು ಅವರಿಗೆ ಸರಿಯಾದ ಪ್ರಾತಿನಿಧ್ಯ ನೀಡಿದ್ದೇವೆಯೇ ಅಥವಾ ಇಲ್ಲವೇ? ರಾಷ್ಟ್ರದಲ್ಲಿ ನಮ್ಮ ಪಕ್ಷದ 13 ಮುಖ್ಯಮಂತ್ರಿಗಳಿದ್ದಾರೆ. ಕೈಗಾರಿಕೆ ಅಥವಾ ಸೇವಾ ವಲಯದಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ನಾವು ಸಂತ್ರಸ್ತರನ್ನಾಗಿ ಮಾಡಿದ್ದೇವೆಯೇ? ನಾವು ಅವರನ್ನು ಅಮಾನತು ಮಾಡಿದ್ದೇವೆಯೇ? ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಸಿದ್ದರಾಮಯ್ಯ ಬ್ರೇಕ್ ಫಾಸ್ಟ್ ಮೀಟಿಂಗ್; ದಿಢೀರ್ ಮುಂಬೈಗೆ ತೆರಳಿದ ರಾಜ್ಯಪಾಲ ಗೆಹ್ಲೋಟ್, ಇಂದು ರಾಜೀನಾಮೆ ಅನುಮಾನ..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿಎಂ ಕುರ್ಚಿ ಕದನ: ಸಿದ್ದರಾಮಯ್ಯ ಮನೆ ಮುಂದೆ ಬೆಂಬಲಿಗರ ಶಕ್ತಿ ಪ್ರದರ್ಶನ, ರಾಜೀನಾಮೆ ನೀಡದಂತೆ ಆಗ್ರಹ..!

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

SCROLL FOR NEXT