ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

'ಸೂಕ್ತ ಪ್ರಾತಿನಿಧ್ಯ' ಹೇಳಿಕೆ: ರವಿಶಂಕರ್ ಪ್ರಸಾದ್ ಬೆನ್ನಿಗೆ ನಿಂತ ಸುಬ್ರಮಣಿಯನ್ ಸ್ವಾಮಿ

ಮುಸ್ಲಿಮರು ಬಿಜೆಪಿಗೆ ಮತ ಹಾಕದಿದ್ದರೂ ಕೇಂದ್ರ ಸರ್ಕಾರ ಅವರಿಗೆ 'ಸೂಕ್ತ ಪ್ರಾತಿನಿಧ್ಯ' ನೀಡಿದೆ ಎಂಬ ಹೇಳಿಕೆ ನೀಡಿ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರ ಬೆನ್ನಿಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ...

ನವದೆಹಲಿ: ಮುಸ್ಲಿಮರು ಬಿಜೆಪಿಗೆ ಮತ ಹಾಕದಿದ್ದರೂ ಕೇಂದ್ರ ಸರ್ಕಾರ ಅವರಿಗೆ 'ಸೂಕ್ತ ಪ್ರಾತಿನಿಧ್ಯ' ನೀಡಿದೆ ಎಂಬ ಹೇಳಿಕೆ ನೀಡಿ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರ ಬೆನ್ನಿಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ನಿಂತಿದ್ದಾರೆ. 
ರವಿ ಶಂಕರ್ ಪ್ರಸಾದ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ರವಿ ಶಂಕರ್ ಪ್ರಸಾದ್ ಅವರು ನೀಡಿರುವ ಹೇಳಿಕೆ ಸಾಂವಿಧಾನಿಕ ಪ್ರಕ್ರಿಯೆಯಂತೆ ಸರಿಯಾಗಿದೆ. ಒಮ್ಮೆ ಚುನಾವಣೆ ಮುಕ್ತಾಯಗೊಂಡ ಬಳಿಕ, ಜನಾದೇಶ ಸಿಗುತ್ತದೆ. ಮುಸ್ಲಿಮರಿಗೂ ಸೇರಿದಂತೆ ನಮ್ಮ ಸರ್ಕಾರ ಶೇ.100ರಷ್ಟು ಜನರಿಗಾಗಿ ಕೆಲಸ ಮಾಡುತ್ತದೆ. ಚುನಾವಣೆ ಬಳಿಕ ಯಾರು...ಯಾರಿಗೆ ಮತ ಹಾಕಿದರು...ಯಾರು ಮತ ಹಾಕಿಲ್ಲ ಎಂಬುದನ್ನು ನಾವು ನೋಡುವುದಿಲ್ಲ. ಹೀಗಾಗಿ ರವಿ ಶಂಕರ್ ಪ್ರಸಾದ್ ಅವರು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಹೇಳಿದ್ದಾರೆ. 
ಮೈಂಡ್ ಮೈನ್ ಶೃಂಗದಲ್ಲಿ ಮಾತನಾಡಿದ್ದ ರವಿ ಶಂಕರ್ ಪ್ರಸಾದ್ ಅವರು, ಮುಸ್ಲಿಂ ಸಮುದಾಯದವರು ನಮಗೆ ಮತ ಹಾಕುವುದಿಲ್ಲ. ಆದರೂ ನಾವು ಅವರಿಗೆ ಸರಿಯಾದ ಪ್ರಾತಿನಿಧ್ಯ ನೀಡಿದ್ದೇವೆಯೇ ಅಥವಾ ಇಲ್ಲವೇ? ರಾಷ್ಟ್ರದಲ್ಲಿ ನಮ್ಮ ಪಕ್ಷದ 13 ಮುಖ್ಯಮಂತ್ರಿಗಳಿದ್ದಾರೆ. ಕೈಗಾರಿಕೆ ಅಥವಾ ಸೇವಾ ವಲಯದಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ನಾವು ಸಂತ್ರಸ್ತರನ್ನಾಗಿ ಮಾಡಿದ್ದೇವೆಯೇ? ನಾವು ಅವರನ್ನು ಅಮಾನತು ಮಾಡಿದ್ದೇವೆಯೇ? ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ