ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

'ಸೂಕ್ತ ಪ್ರಾತಿನಿಧ್ಯ' ಹೇಳಿಕೆ: ರವಿಶಂಕರ್ ಪ್ರಸಾದ್ ಬೆನ್ನಿಗೆ ನಿಂತ ಸುಬ್ರಮಣಿಯನ್ ಸ್ವಾಮಿ

ಮುಸ್ಲಿಮರು ಬಿಜೆಪಿಗೆ ಮತ ಹಾಕದಿದ್ದರೂ ಕೇಂದ್ರ ಸರ್ಕಾರ ಅವರಿಗೆ 'ಸೂಕ್ತ ಪ್ರಾತಿನಿಧ್ಯ' ನೀಡಿದೆ ಎಂಬ ಹೇಳಿಕೆ ನೀಡಿ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರ ಬೆನ್ನಿಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ...

ನವದೆಹಲಿ: ಮುಸ್ಲಿಮರು ಬಿಜೆಪಿಗೆ ಮತ ಹಾಕದಿದ್ದರೂ ಕೇಂದ್ರ ಸರ್ಕಾರ ಅವರಿಗೆ 'ಸೂಕ್ತ ಪ್ರಾತಿನಿಧ್ಯ' ನೀಡಿದೆ ಎಂಬ ಹೇಳಿಕೆ ನೀಡಿ ವಿರೋಧ ಪಕ್ಷಗಳ ಟೀಕೆಗಳಿಗೆ ಗುರಿಯಾಗಿರುವ ಕೇಂದ್ರ ಸಚಿವ ರವಿ ಶಂಕರ್ ಪ್ರಸಾದ್ ಅವರ ಬೆನ್ನಿಗೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ ಅವರು ನಿಂತಿದ್ದಾರೆ. 
ರವಿ ಶಂಕರ್ ಪ್ರಸಾದ್ ಅವರ ಹೇಳಿಕೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ರವಿ ಶಂಕರ್ ಪ್ರಸಾದ್ ಅವರು ನೀಡಿರುವ ಹೇಳಿಕೆ ಸಾಂವಿಧಾನಿಕ ಪ್ರಕ್ರಿಯೆಯಂತೆ ಸರಿಯಾಗಿದೆ. ಒಮ್ಮೆ ಚುನಾವಣೆ ಮುಕ್ತಾಯಗೊಂಡ ಬಳಿಕ, ಜನಾದೇಶ ಸಿಗುತ್ತದೆ. ಮುಸ್ಲಿಮರಿಗೂ ಸೇರಿದಂತೆ ನಮ್ಮ ಸರ್ಕಾರ ಶೇ.100ರಷ್ಟು ಜನರಿಗಾಗಿ ಕೆಲಸ ಮಾಡುತ್ತದೆ. ಚುನಾವಣೆ ಬಳಿಕ ಯಾರು...ಯಾರಿಗೆ ಮತ ಹಾಕಿದರು...ಯಾರು ಮತ ಹಾಕಿಲ್ಲ ಎಂಬುದನ್ನು ನಾವು ನೋಡುವುದಿಲ್ಲ. ಹೀಗಾಗಿ ರವಿ ಶಂಕರ್ ಪ್ರಸಾದ್ ಅವರು ನೀಡಿರುವ ಹೇಳಿಕೆ ಸರಿಯಾಗಿದೆ ಎಂದು ಹೇಳಿದ್ದಾರೆ. 
ಮೈಂಡ್ ಮೈನ್ ಶೃಂಗದಲ್ಲಿ ಮಾತನಾಡಿದ್ದ ರವಿ ಶಂಕರ್ ಪ್ರಸಾದ್ ಅವರು, ಮುಸ್ಲಿಂ ಸಮುದಾಯದವರು ನಮಗೆ ಮತ ಹಾಕುವುದಿಲ್ಲ. ಆದರೂ ನಾವು ಅವರಿಗೆ ಸರಿಯಾದ ಪ್ರಾತಿನಿಧ್ಯ ನೀಡಿದ್ದೇವೆಯೇ ಅಥವಾ ಇಲ್ಲವೇ? ರಾಷ್ಟ್ರದಲ್ಲಿ ನಮ್ಮ ಪಕ್ಷದ 13 ಮುಖ್ಯಮಂತ್ರಿಗಳಿದ್ದಾರೆ. ಕೈಗಾರಿಕೆ ಅಥವಾ ಸೇವಾ ವಲಯದಲ್ಲಿ ಕೆಲಸ ಮಾಡುತ್ತಿರುವ ಮುಸ್ಲಿಂ ಸಮುದಾಯದ ವ್ಯಕ್ತಿಗಳನ್ನು ನಾವು ಸಂತ್ರಸ್ತರನ್ನಾಗಿ ಮಾಡಿದ್ದೇವೆಯೇ? ನಾವು ಅವರನ್ನು ಅಮಾನತು ಮಾಡಿದ್ದೇವೆಯೇ? ಎಂದು ಪ್ರಶ್ನಿಸಿದ್ದರು. ಈ ಹೇಳಿಕೆಗೆ ವಿರೋಧ ಪಕ್ಷಗಳು ಸಾಕಷ್ಟು ಟೀಕೆಗಳನ್ನು ವ್ಯಕ್ತಪಡಿಸುತ್ತಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಉಕ್ರೇನ್ ವಿರುದ್ಧ ರಷ್ಯಾದ ದೀರ್ಘ ಸಂಘರ್ಷಕ್ಕೆ ಭಾರತವೇ ಕಾರಣ, ಇದು 'ಮೋದಿ ಯುದ್ಧ': White House ವ್ಯಾಪಾರ ಸಲಹೆಗಾರ ಪೀಟರ್ ನವರೊ

Minneapolis Shooter: 'Trump ಸಾವು.. ಭಾರತ ಸರ್ವನಾಶ': ಅಮೆರಿಕ ದಾಳಿಕೋರನ ಬಂದೂಕಿನ ಮೇಲೆ ಶಾಕಿಂಗ್ ಬರಹ!

ಅಮೆರಿಕದ ಸುಂಕ: ಜವಳಿ ವಲಯದ ಒತ್ತಡ ಕಡಿಮೆ ಮಾಡಲು 40 ಪ್ರಮುಖ ಆಮದು ದೇಶ ಗುರುತು

ಭೀಕರ ಮಳೆಗೆ ಜಮ್ಮು-ಕಾಶ್ಮೀರ ತತ್ತರ: ಸಾವಿನ ಸಂಖ್ಯೆ 41ಕ್ಕೆ ಏರಿಕೆ; ಕೇಂದ್ರದಿಂದ ನೆರವಿನ ಭರವಸೆ; ಮುಂದುವರೆದ ರಕ್ಷಣಾ ಕಾರ್ಯಾಚರಣೆ

ಭಾರತದ ಮೇಲೆ ಅಮೆರಿಕಾ ಸುಂಕಾಸ್ತ್ರ: ದೇಶ ರಕ್ಷಿಸುವಲ್ಲಿ ಪ್ರಧಾನಿ ಮೋದಿ ವಿಫಲ; AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ

SCROLL FOR NEXT