ಯೋಗಿ ಆದಿತ್ಯನಾಥ್ 
ದೇಶ

ಉತ್ತರ ಪ್ರದೇಶ: ಸ್ವಾಮಿಗಳ ವೇಷದಲ್ಲಿ ದಾಳಿಗೆ ಉಗ್ರರ ಸಂಚು, ಯೋಗಿ ಆದಿತ್ಯನಾಥ್ ಭದ್ರತೆ ಹೆಚ್ಚಳ

ಉಗ್ರರು ಸ್ವಾಮಿಜಿಗಳ ವೇಷದಲ್ಲಿ ಉತ್ತರ ಪ್ರದೇಶದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ....

ಲಖನೌ: ಉಗ್ರರು ಸ್ವಾಮಿಜಿಗಳ ವೇಷದಲ್ಲಿ ಉತ್ತರ ಪ್ರದೇಶದಲ್ಲಿ ದಾಳಿ ನಡೆಸುವ ಸಾಧ್ಯತೆ ಇದೆ ಎಂದು ಗುಪ್ತಚರ ಇಲಾಖೆ ಎಚ್ಚರಿಕೆ ನೀಡಿದ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಭದ್ರತೆಯನ್ನು ಮತ್ತಷ್ಚು ಹೆಚ್ಚಿಸಲಾಗಿದೆ.
ಮಧ್ಯಪ್ರದೇಶ ಗುಪ್ತಚರ ವರದಿಯ ಪ್ರಕಾರ, ಉಗ್ರರು ಪೊಲೀಸ್‌ ತಪಾಸಣೆಯಿಂದ ತಪ್ಪಿಸಿಕೊಳ್ಳುವ ಕಾರಣಕ್ಕಾಗಿ ಸ್ವಾಮಿಜಿಗಳು, ಸಾಧು ಸಂತರ ವೇಷದಲ್ಲಿ ಬರುವ ಬಗ್ಗೆ ಸುಳಿವು ಲಭ್ಯವಾಗಿದೆ.
ಸುಮಾರು 18 ವರ್ಷದ 25 ಉಗ್ರರು ನೇಪಾಳದಿಂದ ಭಾರತಕ್ಕೆ ನುಸುಳಿದ್ದು, ಉತ್ತರ ಪ್ರದೇಶದಲ್ಲಿ ದಾಳಿಗೆ ಸಂಚು ರೂಪಿಸಿದ್ದಾರೆ ಎಂದು ಗುಪ್ತಚರ ವರದಿ ತಿಳಿಸಿದೆ. ಹೀಗಾಗಿ ಭಾರತ-ನೇಪಾಳ ಗಡಿಯಲ್ಲೂ ಭದ್ರತೆಯನ್ನು ಹೆಚ್ಚಿಸಲಾಗಿದೆ. ಅಲ್ಲದೆ ಉತ್ತರ ಪ್ರದೇಶದ ಎಲ್ಲಾ ಆಯಕಟ್ಟಿನ ಮತ್ತು ಪ್ರಮುಖ ದೇವಾಲಯಗಳಲ್ಲಿ ಹೈ ಅಲರ್ಟ್‌ ಘೋಷಿಸಲಾಗಿದೆ. 
ಯೋಗಿ ಆದಿತ್ಯನಾತ್‌ ಅವರು ಜಾವೇದ್‌ ಅಹಮದ್‌ ಅವರನ್ನು ಉತ್ತರ ಪ್ರದೇಶ ಪೊಲೀಸ್‌ ಮಹಾನಿರ್ದೇಶಕ ಹುದ್ದೆಯಿಂದ ಬದಲಾವಣೆ ಮಾಡಿ ಸುಲ್‌ಖಾನ್‌ ಸಿಂಗ್‌ ಅವರಿಗೆ ಹುದ್ದೆ ನೀಡಿದ ಕೆಲ ಹೊತ್ತಲ್ಲೇ ಎಚ್ಚರಿಕೆ ಹೊರ ಬಿದ್ದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮಾತು ಜಗತ್ತಿಗೆ ಉತ್ತಮವಾಗದ ಹೊರತು ಅದು ಶಕ್ತಿಯಲ್ಲ; ಡಿಕೆಶಿ ಪೋಸ್ಟ್​​ಗೆ CM ಸಿದ್ದರಾಮಯ್ಯ ಕೌಂಟರ್

ಸಿದ್ದರಾಮಯ್ಯ ಹೈಕಮಾಂಡ್ ಗೆ ಕೊಟ್ಟ ಮಾತನ್ನು ಉಳಿಸಿಕೊಳ್ಳುತ್ತಾರೆ: CM ಪುತ್ರ ಯತೀಂದ್ರ ಸ್ಫೋಟಕ ಹೇಳಿಕೆ; Video

Hong Kong ಅಗ್ನಿ ಪ್ರಮಾದ: ಮೂವರ ಬಂಧನ; 55 ಮಂದಿಯ ಜೀವ ತೆಗೆಯಿತಾ ಸಿಗರೇಟ್ ಕಿಡಿ? ವೈರಲ್ ಆಗಿರುವ ವಿಡಿಯೋದಲ್ಲೇನಿದೆ?

ರಾಜ್ಯದ ಮಹಿಳಾ ಕ್ರೀಡಾಪಟುಗಳನ್ನು ಸನ್ಮಾನಿಸಿ, ತಲಾ 5 ಲಕ್ಷ ರೂ. ಬಹುಮಾನ ಘೋಷಿಸಿದ ಸಿಎಂ

LPG ಆಮದು: ಭಾರತ-ಅಮೆರಿಕ ಒಪ್ಪಂದ ತೈಲ ಸಂಸ್ಥೆಗಳಿಗೆ ದುಬಾರಿ; ಗ್ರಾಹಕರ ಮೇಲೆ ಪರಿಣಾಮ? ತಜ್ಞರು ಹೇಳಿದ್ದೇನು?

SCROLL FOR NEXT