ಉತ್ತರಪ್ರದೇಶದ ನೂತನ ಡಿಜಿಪಿ ಸುಲ್ಖಾನ್ ಸಿಂಗ್ 
ದೇಶ

ಗೂಂಡಾಗಿರಿ ಮಾಡಿದ್ರೆ ವಿಐಪಿಯನ್ನೂ ಬಿಡಲ್ಲ: ಉತ್ತರಪ್ರದೇಶ ನೂತನ ಡಿಜಿಪಿ

ಗೂಂಡಾಗಿರಿ ಮಾಡಿದವರನ್ನಾರನ್ನೂ ಸುಮ್ಮನೇ ಬಿಡುವುದಿಲ್ಲ. ವಿವಿಐಪಿಗಳೂ ಇಂತ ಕೃತ್ಯದಲ್ಲಿ ತೊಡಗಿದರೆ ಅವರನ್ನೂ ಬಿಡುವುದಿಲ್ಲ ಎಂದು ಉತ್ತರಪ್ರದೇಶದ ನೂತನ ಡಿಜಿಪಿ ಸುಲ್ಖಾನ್ ಸಿಂಗ್...

ಲಖನೌ: ಗೂಂಡಾಗಿರಿ ಮಾಡಿದವರನ್ನಾರನ್ನೂ ಸುಮ್ಮನೇ ಬಿಡುವುದಿಲ್ಲ. ವಿವಿಐಪಿಗಳೂ ಇಂತ ಕೃತ್ಯದಲ್ಲಿ ತೊಡಗಿದರೆ ಅವರನ್ನೂ ಬಿಡುವುದಿಲ್ಲ ಎಂದು ಉತ್ತರಪ್ರದೇಶದ ನೂತನ ಡಿಜಿಪಿ ಸುಲ್ಖಾನ್ ಸಿಂಗ್ ಅವರು ಎಚ್ಚರಿಸಿದ್ದಾರೆ. 
ಶನಿವಾರ ಅಧಿಕಾರ ಸ್ವೀಕರಿಸಿದ ಬಳಿಕ ಮಾತನಾಡಿರುವ ಅವರು, ನಿಷ್ಪಕ್ಷ ಪೊಲೀಸೀಂಗ್ ಗೆ ನನ್ನ ಆದ್ಯತೆ. ಗೂಂಡಾಗಾರ್ದಿ ಹಾಗೂ ಕ್ರಿಮಿನಲ್ ಚಟುವಟಿಕೆಗಳಿನ್ನು ದಯೆ ಇಲ್ಲದೆಯೇ ನಿಭಾಯಿಸುತ್ತೇನೆ. ವಿವಿಐಪಿಗಳನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ಸಾರ್ವಜನಿಕ ಪ್ರದೇಶಗಳಲ್ಲಿ ಮಹಿಳೆಯರಿಗೆ ಕಿರುಕುಳ ನೀಡುವುದು ಗೋರಕ್ಷಕ ಹೆಸರಿನಲ್ಲಿ ಮಧ್ಯೆ ಪ್ರವೇಶ ಮಾಡುವುದನ್ನು ಸಹಿಸುವುದಿಲ್ಲ. ಯಾರಾದರೂ ಈ ರೀತಿಯ ಮಾಡಿದ್ದೇ ಆದರೆ, ಅವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುತ್ತದೆ. ಇಂತರ ಘಟನೆಗಳು ನಡೆದಿದ್ದೇ ಆದರೆ, ಸಾರ್ವಜನಿಕರು ನಮಗೆ ಮಾಹಿತಿಯನ್ನು ನೀಡಬೇಕು. ಮಾಹಿತಿ ನೀಡುವ ಜನರ ಹೆಸರು, ವಿಳಾಸವನ್ನು ನಾವು ಕೇಳುವುದಿಲ್ಲ. ಅವರ ಮಾಹಿತಿಯನ್ನೂ ಬಹಿರಂಗ ಪಡಿಸುವುದಿಲ್ಲ ಸಮಾಜಕ್ಕೆ ಕೆಟ್ಟದಾಗುವ ನಡವಳಿಕೆಗಳನ್ನು ನಾವು ಸಹಿಸುವುದಿಲ್ಲ ಎಂದು ತಿಳಿಸಿದ್ದಾರೆ. 
ಇದೇ ವೇಳೆ ಆ್ಯಂಟಿ ರೋಮಿಯೋ ಕಾರ್ಯಾಚರಣೆ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಇದು ಕೇವಲ ದಾಳಿಯಲ್ಲ. ಪೊಲೀಸರು ಈ ಕೆಲಸವನ್ನು ಪ್ರತೀನಿತ್ಯ ನಡೆಸುತ್ತಿರುತ್ತಾರೆ. ಎಸ್ ಪಿಗಳ ನಿರ್ದೇಶನದಂತೆಯೇ ಪೊಲೀಸರು ಕಾರ್ಯನಿರ್ವಹಿಸುತ್ತಾರೆ. ಸಾರ್ವಜನಿಕರ ಶಾಂತಿಕೆ ಭಂಗ ತರುವವರ ವಿರುದ್ಧ ಕ್ರಮ ಕೈಗೊಳ್ಳಲಿದ್ದಾರೆ. ವಿಚಾರಣೆ ಹಾಗೂ ತನಿಖೆ ನಡೆಸುವ ಪ್ರಕ್ರಿಯೆಗಳು ಇದರಲ್ಲಿರುವುದಿಲ್ಲ. ಆರೋಪಿಗಳ ವಿರುದ್ಧ ಹೇಗೆ ಕ್ರಮಕೈಗೊಳ್ಳಬೇಕೆಂಬುದನ್ನು ನೇರವಾಗಿ ಸಿಬ್ಬಂದಿಗಳಿಗೆ ತಿಳಿಸಲಾಗಿರುತ್ತದೆ. ಭದ್ರತೆ ವಿಚಾರದಲ್ಲಿ ರಾಜಿಯಾಗಿರುವ ಮಾತಿಲ್ಲ. ತಪ್ಪು ಯಾರೇ ಮಾಡಿದ್ದರೂ ಕ್ರಮ ಕೈಗೊಳ್ಳುತ್ತೇವೆಂದು ಹೇಳಿದ್ದಾರೆ. 
ಪೊಲೀಸರು ಪಕ್ಷಪಾತವಿಲ್ಲ ಕಾರ್ಯನಿರ್ವಹಿಸುವಂತೆ ಮುಖ್ಯಮಂತ್ರಿಗಳು ನಿರ್ದೇಶನ ನೀಡಿದ್ದಾರೆ. ಹೀಗಾಗಿ ಆಡಳಿತಾರೂಢ ಪಕ್ಷವೇ ಆಗಲೀ ಯಾರೇ ಆದರು ಅವರ ವಿರುದ್ಧ ಕ್ರಮಕೈಗೊಳ್ಳುತ್ತೇವೆ. ಗೂಂಡಾಗಿರಿ ಮಾಡುವುದು, ಅಪರಾಧ ಕೃತ್ಯಗಳಲ್ಲಿ ಭಾಗಿಯಾದವರಿಗೆ ಕಾನೂನಿಡ ಅಡಿಯಲ್ಲಿ ಕ್ರಮ ಕೈಗೊಳ್ಳುತ್ತೇವೆಂದು ತಿಳಿಸಿದ್ದಾರೆ. 
ಇದೇ ವೇಳೆ ಉಗ್ರರ ಶಂಕಿತ ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಆಂತರಿಕವಾಗಿ ಈ ಬಗ್ಗೆ ಯಾವುದೇ ಮಾಹಿತಿಗಳು ಲಭ್ಯವಾಗಿಲ್ಲ. ಆದರೆ, ಗುಪ್ತಚರ ಇಲಾಖೆ, ಎಸ್'ಟಿಎಫ್, ಎಟಿಎಸ್ ಯಾವಾಗಲೂ ಕಾರ್ಯಪ್ರವೃತ್ತರಾಗಿರಲಿದ್ದಾರೆಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: ತವರಿನಲ್ಲಿ ಮುಂಬೈ ಗೆ ಮುಖಭಂಗ; RCB ಗೆ 18 ರನ್ ಭರ್ಜರಿ ಗೆಲುವು!

7 ತಿಂಗಳ ಮಗುವಿಗಾಗಿ ಕೆಲಸದ ಸಮಯದ ಹೊಂದಾಣಿಕೆ ಕೋರಿದ ಭಾರತೀಯ ಉದ್ಯೋಗಿ; US ಮ್ಯಾನೇಜರ್ ಪ್ರತಿಕ್ರಿಯೆ ಬಗ್ಗೆ ಜಾಲತಾಣಗಳಲ್ಲಿ ಭಾರಿ ಚರ್ಚೆ!

ಗುರಿ ಇಟ್ಟಿದ್ದು ಜಿಹಾದಿ ಬಂಡುಕೋರರಿಗೆ, ಗುರಿಯಾಗಿದ್ದು ಸ್ಥಳೀಯ ಮಾರ್ಕೆಟ್; 100 ಕ್ಕೂ ಹೆಚ್ಚು ನಾಗರಿಕರ ಮಾರಣಹೋಮ!

IPL 2026: ಮುಂಬೈ ವಿರುದ್ದ ಭರ್ಜರಿ ಬ್ಯಾಟಿಂಗ್; ಬಾಬರ್ ಆಜಂ, ಕ್ರಿಸ್ ಗೇಯ್ಲ್ ದಾಖಲೆ ಮುರಿದ Virat Kohli!

SCROLL FOR NEXT