ಪ್ರತಿಭಟನಾ ಸ್ಥಳಗಲ್ಲಿ ರೈತರ ಮನವೊಲಿಸುತ್ತಿರುವ ಸಿಎಂ ಪಳನಿಸ್ವಾಮಿ 
ದೇಶ

ಪಳನಿಸ್ವಾಮಿ ಭರವಸೆಗೆ ಮಣಿದ ತಮಿಳುನಾಡು ರೈತರು: 1 ತಿಂಗಳ ಮಟ್ಟಿಗೆ ಪ್ರತಿಭಟನೆ ಸ್ಥಗಿತ

ಬರ ಪರಿಹಾರಕ್ಕೆ ಆಗ್ರಹಿಸಿ ಕಳೆದ 41 ದಿನಗಳಿಂದ ಮೃತ ರೈತರ ತಲೆಬುರಡೆ ಉಟ್ಟುಕೊಂಡು ಹೋರಾಟ ನಡೆಸಿ ಇಡೀ ದೇಶದ ಜನರ ಗಮನ ಸೆಳೆದಿದ್ದ ತಮಿಳುನಾಡು ರೈತರ ಪ್ರತಿಭಟನೆ ಒಂದು ತಿಂಗಳ ಮಟ್ಟಿಗೆ ಸ್ಥಗಿತಗೊಳ್ಳಲಿದೆ...

ನವದೆಹಲಿ: ಬರ ಪರಿಹಾರಕ್ಕೆ ಆಗ್ರಹಿಸಿ ಕಳೆದ 41 ದಿನಗಳಿಂದ ಮೃತ ರೈತರ ತಲೆಬುರಡೆ ಉಟ್ಟುಕೊಂಡು ಹೋರಾಟ ನಡೆಸಿ ಇಡೀ ದೇಶದ ಜನರ ಗಮನ ಸೆಳೆದಿದ್ದ ತಮಿಳುನಾಡು ರೈತರ ಪ್ರತಿಭಟನೆ ಒಂದು ತಿಂಗಳ ಮಟ್ಟಿಗೆ ಸ್ಥಗಿತಗೊಳ್ಳಲಿದೆ. 
ರೂ.40 ಸಾವಿರ ಕೋಟಿ ಬರ ಪರಿಹಾರ, ರೈತರ ಸಾಲ ಮನ್ನಾ, ಕಾವೇರಿ ನದಿ ನಿರ್ವಹಣಾ ಮಂಡಳಿ ರಚನೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಇಟ್ಟುಕೊಂಡು ವಿಶಿಷ್ಟ ಹೋರಾಟ ನಡೆಸಿದ್ದ ರೈತರು ಕೊನೆಗೂ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿಯವರ ಭರವಸೆಗೆ ಮಣಿದಿದ್ದು, ಮೇ.25 ರವರೆಗೆ ಹೋರಾಟ ಸ್ಥಗಿತಗೊಳಿಸಲು ನಿರ್ಧರಿಸಿದ್ದಾರೆ. 
ತಮಿಳುನಾಡು ಸಿಎಂ ಕೆ. ಪಳನಿಸ್ವಾಮಿಯವರು ನಿನ್ನೆ ಬೆಳಿಗ್ಗೆ ಜಂತರ್ ಮಂತರ್ ನಲ್ಲಿ ಪ್ರತಿಭಠನೆ ನಡೆಸುತ್ತಿದ್ದ ರೈತರನ್ನು ಭೇಟಿ ಮಾಡಿ ಪ್ರಧಾನಿ ಮೋದಿಯವರ ಜೊತೆ ಈ ಬಗ್ಗೆ ಮಾತನಾಡುವ ಭರವಸೆ ನೀಡಿದರು ಹಾಗೂ ಹೋರಾಟ ಹಿಂತೆಗೆದುಕೊಳ್ಳುವಂತೆ ಮನವಿ ಮಾಡಿದ್ದರು. ಈ ಹಿನ್ನಲೆಯಲ್ಲಿ ರೈತ ಮುಖಂಡ ಅಯ್ಯಕ್ಕಣ್ಣು ಸಂಜೆ ಸುದ್ದಿಗೋಷ್ಠಿಯಲ್ಲಿ ಹೋರಾಟ ಅಮಾನತುಗೊಳಿಸುವ ಘೋಷಣೆ ಮಾಡಿದರು. 
ಮುಖ್ಯಮಂತ್ರಿ ಪಳನಿಸ್ವಾಮಿ ನೀಡಿದ ಭರವಸೆಯನ್ವಯ 1 ತಿಂಗಳ ಮಟ್ಟಿಗೆ ಹೋರಾಟವನ್ನು ನಿಲ್ಲಿಸಲಿದ್ದೇವೆ, ಸರ್ಕಾರಕ್ಕೆ ಇದು ಕೊನೆ ಅವಕಾಶ. ಒಂದು ವೇಳೆ ಬೇಡಿಕೆಗಳು ಈಡೇರದೇ ಹೋದರೆ ಮೇ.25 ರಿಂದ ಮತ್ತೆ ಇದೇ ಸ್ಥಳದಲ್ಲಿ ಪ್ರತಿಭಟನೆ ಆರಂಭಿಸುತ್ತೇವೆಂದು ಎಚ್ಚರಿಸಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

19 ವರ್ಷಗಳ ಹಳೆಯ ದಾಖಲೆ ಉಡೀಸ್: ಅಭಿಷೇಕ್, ಪಾಂಡೆ ಅಬ್ಬರ; ಜಿಂಬಾಬ್ವೆಗೆ 257 ರನ್‌ಗಳ ಬೃಹತ್ ಮೊತ್ತದ ಗುರಿ ನೀಡಿದ ಭಾರತ!

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

SCROLL FOR NEXT