ದಿಗ್ವಿಜಯ್ ಸಿಂಗ್ 
ದೇಶ

ಗೋವುಗಳಿಗೆ ವಿಶಿಷ್ಠ ಗುರುತು ಸಂಖ್ಯೆ: ಮೋದಿಯವರನ್ನು ಟೀಕಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

ಭಾರತ-ಬಾಂಗ್ಲಾ ಮೂಲಕ ಗೋವುಗಳನ್ನು ಕಳ್ಳಸಾಗಣೆ ಮಾಡುವುದನ್ನು ತಡೆಗಟ್ಟಲು ಮತ್ತು...

ನವದೆಹಲಿ: ಭಾರತ-ಬಾಂಗ್ಲಾ ಮೂಲಕ ಗೋವುಗಳನ್ನು  ಕಳ್ಳಸಾಗಣೆ ಮಾಡುವುದನ್ನು ತಡೆಗಟ್ಟಲು ಮತ್ತು ರಕ್ಷಣೆಗೆ ಕೇಂದ್ರ ಸರ್ಕಾರ ದನ-ಕರುಗಳಿಗೆ ಆಧಾರ್ ನಂತರ ವಿಶಿಷ್ಟ ಗುರುತು ಸಂಖ್ಯೆ ನೀಡುವ ಯೋಜನೆಯನ್ನು ಟೀಕಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್,  ಕಾರ್ಯವಿಧಾನದ ಬಗ್ಗೆ ಸಂಬಂಧಪಟ್ಟ ಪ್ರಶ್ನೆಗಳನ್ನು ಕೇಳಿದ್ದಾರೆ.
ಈ ಕಾರ್ಯಯೋಜನೆಯ ವೆಚ್ಚವನ್ನು ಭರಿಸುವವರು ಯಾರು ಮತ್ತು ಈ ನಿಯಮ ಜಾರಿಗೆ ಬಂದರೆ ಮುಸಲ್ಮಾನರು ಸಾಕುವ ಹಸು ಕರುಗಳಿಗೆ ಸಹ ರಕ್ಷಣೆಯಿದೆಯೇ ಎಂದು ಕೇಳಿದರು.
ತಮ್ಮ ಆಕ್ರೋಶವನ್ನು ಸರಣಿ ಟ್ವೀಟ್ ಮೂಲಕ ಟ್ವಿಟ್ಟರ್ ನಲ್ಲಿ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್, ಮೋದಿಯವರಿಗೆ ಏನಾಗಿದೆ? ಆಧಾರ್ ಕಾರ್ಡನ್ನು ಇದೀಗ ಹಸು ಕರುಗಳಿಗೂ ಕಡ್ಡಾಯ ಮಾಡಲು ಹೊರಟಿದ್ದಾರೆ. ಇದಕ್ಕೆಲ್ಲಾ ಎಷ್ಟು ವೆಚ್ಚ ತಗಲಬಹುದು? ಈ ವೆಚ್ಚವನ್ನು ಯಾರು ಭರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.
ಈ ನಿಯಮ ಜಾರಿಗೆ ಬಂದರೆ ಗೋ ರಕ್ಷಕರಿಂದ ಮುಸಲ್ಮಾನ ಪ್ರಾಣಿಗಳ ಪಾಲಕರಿಗೆ ಸುರಕ್ಷತೆಯ ಖಾತರಿಯಿದೆಯೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕಿ ಬಿಡುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ Indian Army ಎಚ್ಚರಿಕೆ!

Operation Sindoor: ಪಾಕಿಸ್ತಾನದ ಐದು ಹೈಟೆಕ್ ಫೈಟರ್‌, ಎಫ್-16, ಜೆಎಫ್-17, ಅನೇಕ ಜೆಟ್‌ಗಳು ನಾಶ- IAF ಮುಖ್ಯಸ್ಥ; Video

1st Test, Day 2: ಒಂದೇ ದಿನ 3 ಶತಕ, ಟೀಂ ಇಂಡಿಯಾ ಭರ್ಜರಿ ಬ್ಯಾಟಿಂಗ್, ವಿಂಡೀಸ್ ವಿರುದ್ಧ 286 ರನ್ ಮುನ್ನಡೆ!

"ಹೊಸ ಮನೆ ಗೃಹಪ್ರವೇಶಕ್ಕೆ ಯಾರಿಗೂ ಆಹ್ವಾನವಿಲ್ಲ; ನನ್ನ ಅದೃಷ್ಟದ ಮನೆ ಬೇರೆಯದ್ದೇ ಇದೆ.., 2 ಬಾರಿ ಸಿಎಂ ಆಗಲು ಅದೇ ಕಾರಣ": Siddaramaiah

1st test: ಕೊನೆಗೂ ನೀಗಿದ ಬರ, 9 ವರ್ಷಗಳ ಬಳಿಕ ತವರಿನಲ್ಲಿ ಕನ್ನಡಿಗ KL Rahul ಶತಕ!

SCROLL FOR NEXT