ದಿಗ್ವಿಜಯ್ ಸಿಂಗ್ 
ದೇಶ

ಗೋವುಗಳಿಗೆ ವಿಶಿಷ್ಠ ಗುರುತು ಸಂಖ್ಯೆ: ಮೋದಿಯವರನ್ನು ಟೀಕಿಸಿದ ಕಾಂಗ್ರೆಸ್ ನಾಯಕ ದಿಗ್ವಿಜಯ್ ಸಿಂಗ್

ಭಾರತ-ಬಾಂಗ್ಲಾ ಮೂಲಕ ಗೋವುಗಳನ್ನು ಕಳ್ಳಸಾಗಣೆ ಮಾಡುವುದನ್ನು ತಡೆಗಟ್ಟಲು ಮತ್ತು...

ನವದೆಹಲಿ: ಭಾರತ-ಬಾಂಗ್ಲಾ ಮೂಲಕ ಗೋವುಗಳನ್ನು  ಕಳ್ಳಸಾಗಣೆ ಮಾಡುವುದನ್ನು ತಡೆಗಟ್ಟಲು ಮತ್ತು ರಕ್ಷಣೆಗೆ ಕೇಂದ್ರ ಸರ್ಕಾರ ದನ-ಕರುಗಳಿಗೆ ಆಧಾರ್ ನಂತರ ವಿಶಿಷ್ಟ ಗುರುತು ಸಂಖ್ಯೆ ನೀಡುವ ಯೋಜನೆಯನ್ನು ಟೀಕಿಸಿರುವ ಕಾಂಗ್ರೆಸ್ ಹಿರಿಯ ನಾಯಕ ದಿಗ್ವಿಜಯ್ ಸಿಂಗ್,  ಕಾರ್ಯವಿಧಾನದ ಬಗ್ಗೆ ಸಂಬಂಧಪಟ್ಟ ಪ್ರಶ್ನೆಗಳನ್ನು ಕೇಳಿದ್ದಾರೆ.
ಈ ಕಾರ್ಯಯೋಜನೆಯ ವೆಚ್ಚವನ್ನು ಭರಿಸುವವರು ಯಾರು ಮತ್ತು ಈ ನಿಯಮ ಜಾರಿಗೆ ಬಂದರೆ ಮುಸಲ್ಮಾನರು ಸಾಕುವ ಹಸು ಕರುಗಳಿಗೆ ಸಹ ರಕ್ಷಣೆಯಿದೆಯೇ ಎಂದು ಕೇಳಿದರು.
ತಮ್ಮ ಆಕ್ರೋಶವನ್ನು ಸರಣಿ ಟ್ವೀಟ್ ಮೂಲಕ ಟ್ವಿಟ್ಟರ್ ನಲ್ಲಿ ವ್ಯಕ್ತಪಡಿಸಿದ ದಿಗ್ವಿಜಯ್ ಸಿಂಗ್, ಮೋದಿಯವರಿಗೆ ಏನಾಗಿದೆ? ಆಧಾರ್ ಕಾರ್ಡನ್ನು ಇದೀಗ ಹಸು ಕರುಗಳಿಗೂ ಕಡ್ಡಾಯ ಮಾಡಲು ಹೊರಟಿದ್ದಾರೆ. ಇದಕ್ಕೆಲ್ಲಾ ಎಷ್ಟು ವೆಚ್ಚ ತಗಲಬಹುದು? ಈ ವೆಚ್ಚವನ್ನು ಯಾರು ಭರಿಸುತ್ತಾರೆ ಎಂದು ಟ್ವೀಟ್ ಮಾಡಿದ್ದಾರೆ.
ಈ ನಿಯಮ ಜಾರಿಗೆ ಬಂದರೆ ಗೋ ರಕ್ಷಕರಿಂದ ಮುಸಲ್ಮಾನ ಪ್ರಾಣಿಗಳ ಪಾಲಕರಿಗೆ ಸುರಕ್ಷತೆಯ ಖಾತರಿಯಿದೆಯೇ ಎಂದು ಪ್ರಶ್ನಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಪ್ರತಿಯೊಬ್ಬರಿಗೂ ಕಾರು, ತಿಂಗಳಿಗೆ ₹1 ಲಕ್ಷ ಭತ್ಯೆ': ರಾಜ್ಯದ 234 ಶಾಸಕರಿಗೆ ಭರ್ಜರಿ ಕೊಡುಗೆ ಘೋಷಿಸಿದ ತಮಿಳುನಾಡು CM ವಿಜಯ್!

Ind Vs SL: ಮಾನವ್ ಸುತಾರ್ ದಾಖಲೆ; 600ನೇ ಟೆಸ್ಟ್ ಪಂದ್ಯದ ಗೆದ್ದು ಸಂಭ್ರಮಿಸಿದ ಟೀಂ ಇಂಡಿಯಾ!

'BJPಯವನಾದ ಮಾತ್ರಕ್ಕೆ ಮಾಲೀಕರು ಉಚಿತವಾಗಿ ಮನೆ ನೀಡಲಾರರು'; ನಾನು 'leta' or 'beta' ವರ್ಗಕ್ಕೆ ಸೇರಿದವನಲ್ಲ: ಶೆಹಜಾದ್ ಪೂನಾವಾಲಾ

'ರಾಹುಲ್ ಗಾಂಧಿ' ಕಾರಣಕ್ಕೆ ₹40 ಲಕ್ಷ ಪ್ಯಾಕೇಜ್, ಹ್ಯಾಂಡ್‌ಸಮ್ ಹುಡುಗನನ್ನೇ ರಿಜೆಕ್ಟ್ ಮಾಡಿದ ಹುಡುಗಿ!

ಬಿಡದಿ ಬಳಿಯ ಫಾರ್ಮ್‌ಹೌಸ್‌ನಲ್ಲಿ ಅಕ್ರಮ ಪತ್ತೆ; ₹4.91 ಕೋಟಿ ಮೌಲ್ಯದ ನಕಲಿ ಔಷಧಗಳನ್ನು ವಶಪಡಿಸಿಕೊಂಡ FDA!