ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ 
ದೇಶ

ಸುಕ್ಮಾ ದಾಳಿಯನ್ನು ಸವಾಲಾಗಿ ತೆಗೆದುಕೊಂಡಿದ್ದೇವೆ, ಯಾರೊಬ್ಬರನ್ನೂ ಬಿಡುವುದಿಲ್ಲ: ರಾಜನಾಥ್ ಸಿಂಗ್

ಸುಕ್ಮಾ ನಕ್ಸಲರ ದಾಳಿಯನ್ನು ಸವಾಲಾಗಿ ತೆಗೆದುಕೊಳ್ಳಲಾಗಿದ್ದು, ದಾಳಿಯಲ್ಲಿ ಭಾಗಿಯಾದ ಯಾರೊಬ್ಬರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್...

ನವದೆಹಲಿ: ಸುಕ್ಮಾ ನಕ್ಸಲರ ದಾಳಿಯನ್ನು ಸವಾಲಾಗಿ ತೆಗೆದುಕೊಳ್ಳಲಾಗಿದ್ದು, ದಾಳಿಯಲ್ಲಿ ಭಾಗಿಯಾದ ಯಾರೊಬ್ಬರನ್ನೂ ಸುಮ್ಮನೆ ಬಿಡುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ರಾಜನಾಥ ಸಿಂಗ್ ಅವರು ಮಂಗಳವಾರ ಹೇಳಿದ್ದಾರೆ.
ದಾಳಿ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ದಾಳಿ ನಿಜಕ್ಕೂ ದೃಷ್ಟಕರ. ಘಟನೆಯಿಂದ ಸಾಕಷ್ಟು ನೋವಾಗಿದೆ. ಈ ದಾಳಿಯನ್ನು ನಾವು ಸವಾಲಾಗಿ ತೆಗೆದುಕೊಳ್ಳುತ್ತಿದ್ದು, ದಾಳಿಯಲ್ಲಿ ಭಾಗಿಯಾದ ಒಬ್ಬರನ್ನೂ ನಾವು ಸುಮ್ಮನೆ ಬಿಡುವುದಿಲ್ಲ ಎಂದು ಹೇಳಿದ್ದಾರೆ. 
ದಾಳಿಯಾದ ಬಳಿಕ ಟ್ವಿಟರ್ ನಲ್ಲಿಯೂ ಪ್ರತಿಕ್ರಿಯೆ ನೀಡಿದ್ದ ಗೃಹ ಸಚಿವ. ಸಿಆರ್ ಪಿಎಫ್ ಯೋಧರ ಮೇಲಿನ ದಾಳಿಯಿಂದ ಸಾಕಷ್ಟು ನೋವಾಗಿದೆ. ಹುತಾತ್ಮ ಯೋಧರಿಗೆ ಈ ಮೂಲಕ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ಕುಟುಂಬಸ್ಥರಿಗೆ ಸಂತಾಪವನ್ನು ಸೂಚಿಸುತ್ತೇನೆಂದು ಹೇಳಿದ್ದರು. 
ಛತ್ತೀಸ್ಗಢ ರಾಜ್ಯದ ಸುಕ್ಮಾದ ರಸ್ತೆಯೊಂದರಲ್ಲಿ ಕಾರ್ಮಿಕರು ಕಾಮಗಾರಿ ಕಾರ್ಯವನ್ನು ಮಾಡುತ್ತಿದ್ದರು ಈ ವೇಳೆ 150ಕ್ಕೂ ಹೆಚ್ಚು ಸಿಆರ್ ಪಿಎಫ್ ಯೋಧರು ಕಾರ್ಮಿಕರಿಗೆ ಭದ್ರತೆಯನ್ನು ಒದಗಿಸುತ್ತಿದ್ದರೆ. ಈ ವೇಳೆ ಸ್ಥಳಕ್ಕೆ ಬಂದ 300ಕ್ಕೂ ಹೆಚ್ಚು ನಕ್ಸಲರು ಏಕಾಏಕಿ ಯೋಧರ ಮೇಲೆ ಗುಂಡಿನ ದಾಳಿ ನಡೆಸಿದ್ದರು. ಪರಿಣಾಮ 25 ಸಿಆರ್ ಪಿಎಫ್ ಯೋಧರು ಹುತಾತ್ಮರಾಗಿದ್ದರು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Bihar election 2025: ಎನ್ ಡಿಎ ಸೀಟು ಹಂಚಿಕೆ ಅಂತಿಮ, ಬಿಜೆಪಿ, ಜೆಡಿಯು ತಲಾ 101 ಸ್ಥಾನಗಳಲ್ಲಿ ಸ್ಪರ್ಧೆ! ಚಿರಾಗ್ ಗೆ ದಕ್ಕಿದ್ದೆಷ್ಟು?

BJP ಶಾಸಕ ಮುನಿರತ್ನ ಧರಿಸಿದ್ದ RSS ಟೋಪಿ ಕಿತ್ತೆಸೆದ Congress ಮುಖಂಡ: Video Viral!

ವಿಶ್ವದಾಖಲೆ ಬರೆದ ಸ್ಮೃತಿ ಮಂದಾನ: ಕ್ಯಾಲೆಂಡರ್ ವರ್ಷದಲ್ಲಿ ODI ಕ್ರಿಕೆಟ್ ನಲ್ಲಿ 1,000 ರನ್ ಪೂರೈಸಿದ ಜಗತ್ತಿನ ಮೊದಲ ಬ್ಯಾಟರ್!

ನಿಮ್ಮ ಮೇಲೆ ಕ್ರಿಮಿನಲ್ ಕೇಸ್ ಗಳಿವೆ; ಯಾರ ಒತ್ತಡಕ್ಕೆ ಒಳಗಾಗಿ Congress ಮರ್ಯಾದೆ ತೆಗೆಯುತ್ತಿದ್ದೀರಾ? ಚಿದಂಬರಂ ವಿರುದ್ಧ ಹೈಕಮಾಂಡ್ ಗರಂ!

Afghan-Pak War: 'ಅಲ್ಲಾ ಕಾಪಾಡು' ಅಫ್ಘಾನ್ ಪ್ರತೀಕಾರದ ದಾಳಿ; ಆಗಸದೆತ್ತರಕ್ಕೆ ಚಿಮ್ಮಿದ ಪಾಕ್ ಸೈನಿಕರ ಶವಗಳು, ಗಡಿಯಿಂದ ಕಾಲ್ಕಿತ್ತ ಸೇನೆ, Video

SCROLL FOR NEXT