ಸಂಗ್ರಹ ಚಿತ್ರ 
ದೇಶ

ಚುನಾವಣೋತ್ತರ ಸಮೀಕ್ಷೆಯಂತೆ ಬಿಜೆಪಿ ಗೆಲುವು ಸಾಧಿಸಿದರೆ, ಚಳವಳಿ ಆರಂಭಿಸುತ್ತೇನೆ: ಸಿಎಂ ಕೇಜ್ರಿವಾಲ್ ಎಚ್ಚರಿಕೆ

ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೋತ್ತರ ಸಮೀಕ್ಷೆಗಳಂತೆ ಬಿಜೆಪಿ ಗೆಲುವು ಸಾಧಿಸಿದ್ದೇ ಆದರೆ ತಾವು ಮತ್ತೆ ಚಳವಳಿ ಕೂರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ನವದೆಹಲಿ: ದೆಹಲಿ ಮಹಾನಗರ ಪಾಲಿಕೆಗಳ ಚುನಾವಣೋತ್ತರ ಸಮೀಕ್ಷೆಗಳಂತೆ ಬಿಜೆಪಿ ಗೆಲುವು ಸಾಧಿಸಿದ್ದೇ ಆದರೆ ತಾವು ಮತ್ತೆ ಚಳವಳಿ ಕೂರುವುದಾಗಿ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಎಚ್ಚರಿಕೆ ನೀಡಿದ್ದಾರೆ.

ಈ ಹಿಂದೆ ಅಧಿಕಾರಿಗಳ ವರ್ಗಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಲೆಫ್ಟಿನೆಂಟ್ ಗವರ್ನರ್ ನಜೀಬ್ ಜಂಗ್ ವಿರುದ್ಧ ಸತ್ಯಾಗ್ರಹ ಆರಂಭಿಸಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಇದೀಗ ಮತ್ತೆ ಅಂತಹುದೇ  ಕಾರ್ಯಕ್ಕೆ ಮುಂದಾಗಿದ್ದಾರೆ. ಕಳೆದ ಭಾನುವಾರ ಮುಕ್ತಾಯಗೊಂಡ ಎಂಸಿಡಿ ಚುನಾವಣೆಗಳಲ್ಲಿ ಬಿಜೆಪಿ ಪಕ್ಷ ಗೆಲುವು ಸಾಧಿಸಿದ್ದೇ ಆದರೆ ತಾವು ಅಕ್ರಮ ಚುನಾವಣೆ ವಿರುದ್ಧ ಚಳವಳಿ ಅರಂಭಿಸುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಎಂಸಿಡಿ ಚುನಾವಣೆಗೂ ಮೊದಲೇ ಮತಯಂತ್ರಗಳಲ್ಲಿ ದೋಷವಿದೆ ಎಂದು ಆರೋಪಿಸಿದ್ದ ಸಿಎಂ ಕೇಜ್ರಿವಾಲ್ ಇದೀಗ ಚುನಾವಣೆಯಲ್ಲಿ ಬಿಜೆಪಿ ಗಲುವು ಸಾಧಿಸಿದರೆ ಮತ್ತೆ ಸತ್ಯಾಗ್ರಹ ಕೂರುವುದಾಗಿ ಹೇಳಿದ್ದಾರೆ.

ಈ ಬಗ್ಗೆ ದೆಹಲಿಯಲ್ಲಿ ಮಾತನಾಡಿದ ಕೇಜ್ರಿವಾಲ್, "ಮತ್ತೆ ಚಳವಳಿ ನಡೆಸಲು ಆಪ್ ಪಕ್ಷಕ್ಕೆ ಯಾವುದೇ ರೀತಿಯ ಮುಜುಗರವಿಲ್ಲ. ಏಕೆಂದರೆ ಚಳವಳಿಯಿಂದಾಗಿ ಆಮ್ ಆದ್ಮಿ ಪಕ್ಷ ಜನಿಸಿದ್ದು. ಉತ್ತರ ಪ್ರದೇಶ, ಪಂಜಾಬ್  ವಿಧಾನಸಭೆ ಹಾಗೂ ಮುಂಬೈ ಮತ್ತು ಪುಣೆ ಮಹಾನಗರ ಪಾಲಿಕೆಗಳಲ್ಲಿ ನಡೆದಂತೆ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲೂ ಫಲಿತಾಂಶ ಪ್ರಕಟವಾದರೆ ಖಂಡಿತಾ ಮತ್ತೆ ಚಳವಳಿಗೆ ಮರಳಲು ಆಪ್ ಪಕ್ಷ  ಹಿಂಜರಿಯುವುದಿಲ್ಲ. ಚುನಾವಣಾ ಸೋಲು-ಗೆಲುವು ಸಾಮಾನ್ಯವೇ ಆದರೂ ಮತಯಂತ್ರಗಳನ್ನು ದುರ್ಬಳಕೆ ಮಾಡಿಕೊಳ್ಳುವ ಮೂಲಕ ಬಿಜೆಪಿ ಪ್ರಜಾತಂತ್ರ ವ್ಯವಸ್ಥೆಗೆ ವ್ಯತಿರಿಕ್ತವಾಗಿ ವರ್ತಿಸುತ್ತಿದೆ ಎಂದು ಗಂಭೀರ ಆರೋಪ  ಮಾಡಿದರು.

ಅಂತೆಯೇ ಆಪ್ ಪಕ್ಷ ಎಂದಿಗೂ ಅಧಿಕಾರಿಕ್ಕೆ ಅಂಟಿಕೊಂಡಿಲ್ಲ. ಈಗಲೂ ಅಧಿಕಾರ ತ್ಯಜಿಸಿ ಚಳವಳಿ ನಡೆಸಲು ಪಕ್ಷ ಸಿದ್ಧವಾಗಿದೆ ಎಂದೂ ಹೇಳಿದರು.

ಇತ್ತೀಚೆಗೆ ಬಿಡುಗಡೆಯಾದ ಎರಡು ಚುನಾವಣೋತ್ತರ ಮತದಾನ ಸಮೀಕ್ಷೆಯಲ್ಲಿ ಬಿಜೆಪಿಗೆ ಗೆಲುವು ದೊರೆಯಲಿದೆ ಎಂದು ಹೇಳಲಾಗಿತ್ತು. ಒಟ್ಟು 270 ಸದಸ್ಯ ಬಲದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಪಕ್ಷ  200ಸದಸ್ಯ ಸ್ಥಾನ ಗೆಲ್ಲಲಿದೆ ಎಂದು ಹೇಳಲಾಗಿತ್ತು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT