ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ 
ದೇಶ

ವಾಜಪೇಯಿ ಸರಿಯಿದ್ದರು, ಮೋದಿ ಸರಿಯಿಲ್ಲ ಎಂದು ಮುಫ್ತಿ ಒಪ್ಪಿಕೊಂಡಿದ್ದಾರೆ: ಕಾಂಗ್ರೆಸ್

ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಸರಿಯಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಯುತ್ತಿರುವ ಹಾದಿ ಸರಿಯಿಲ್ಲ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ಒಪ್ಪಿಕೊಂಡಿದ್ದಾರೆಂದು...

ಲಖನೌ: ಮಾಜಿ ಪ್ರಧಾನಮಂತ್ರಿ ಅಟಲ್ ಬಿಹಾರಿ ವಾಜಪೇಯಿಯವರು ಸರಿಯಿದ್ದರು. ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಡೆಯುತ್ತಿರುವ ಹಾದಿ ಸರಿಯಿಲ್ಲ ಎಂದು ಸ್ವತಃ ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿಯವರೇ ಒಪ್ಪಿಕೊಂಡಿದ್ದಾರೆಂದು ಕಾಂಗ್ರೆಸ್ ಮಂಗಳವಾರ ಹೇಳಿದೆ. 
ನಿನ್ನೆಯಷ್ಟೇ ಕಾಶ್ಮೀರ ಪರಿಸ್ಥಿತಿ ನಿಭಾಯಿಸಲು ಸಮಸ್ಯೆ ಬಗೆಹರಿಸಲು ವಾಜಪೇಯಿಯವರ ನೀತಿಯನ್ನು ಅನುಸರಿಸುವ ಕುರಿತಂತೆ ಮುಫ್ತಿ ನೀಡಿದ್ದ ಹೇಳಿಕೆ ಸಂಬಂಧ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ನಾಯಕ ಪ್ರಮೋದ್ ತಿವಾರಿಯವರು, ವಾಜುಪೇಯಿಯವರು ಸರಿಯಿದ್ದರು, ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಹಾದಿ ತಪ್ಪು ಎಂದು ಮುಫ್ತಿಯವರೇ ಒಪ್ಪಿಕೊಂಡಿದ್ದಾರೆ. ಮೋದಿ ತಪ್ಪು ಹಾದಿಯಲ್ಲಿ ನಡೆಯುತ್ತಿದ್ದಾರೆಂದು ಅನಿಸುತ್ತಿದೆ ಎಂದಾದರೆ, ಅವರೊಂದಿಗಿನ ಮೈತ್ರಿಯನ್ನು ಏಕೆ ಮುಂದುವರೆಸುತ್ತಿದ್ದಾರೆ. ಇಂದಿರಾಗಾಂಧಿ, ರಾಜೀವ್ ಗಾಂಧಿಯವರು ಜನರನ್ನು ವಿಶ್ವಾಸದತ್ತ ಕರೆದುಕೊಂಡು ಹೋಗುತ್ತಿದ್ದ ಹಾದಿ ಸರಿಯಾಗಿತ್ತು. ಆದರೆ, ಪ್ರಸ್ತುತ ಅಧಿಕಾರದಲ್ಲಿರುವ ಸರ್ಕಾರ ತಪ್ಪು ಹಾದಿಯಲ್ಲಿ ನಡೆಯುತ್ತಿದೆ ಎಂದು ಹೇಳಿದ್ದಾರೆ. 
ಕಾಶ್ಮೀರದಲ್ಲಿ ಪ್ರಸ್ತುತ ಪರಿಸ್ಥಿತಿ ತೀವ್ರವಾಗಿ ಹದಗೆಟ್ಟಿದೆ. ಪ್ರಸ್ತುತ ಅಲ್ಲಿನ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತರಲಾಗದಷ್ಟು ಹಾಳಾಗಿದೆ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಈ ಮಟ್ಟಕ್ಕೆ ಹಾಳಾಗಲು ಪಿಡಿಪಿ ಮತ್ತು ಬಿಜೆಪಿ ನಡುವಿನ ಮೈತ್ರಿಯೇ ಕಾರಣ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

PSLV-C62 ಮಿಷನ್ ವಿಫಲ: ಕೊನೆಯ ಹಂತದಲ್ಲಿ ಎದುರಾದ ಸಮಸ್ಯೆ, ISROಗೆ ಹಿನ್ನಡೆ

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

Positive Vibes ಗಾಗಿ ಮನೆಯಲ್ಲಿ ಯಾವ ಗಿಡ ಬೆಳಸಬೇಕು: ಮುಳ್ಳಿನ ಗಿಡಗಳಲ್ಲಿದೆಯೇ ನಕರಾತ್ಮಕ ಶಕ್ತಿ; ಮಲ್ಲಿಗೆ ಮತ್ತು ತುಳಸಿಗೆ ಸೂಕ್ತ ಸ್ಥಳ ಯಾವುದು?

ಬೆಂಗಳೂರು: 6 ವರ್ಷದ ಬಾಲಕಿ ಅಪಹರಿಸಿ ಹತ್ಯೆ ; ಕೊಲೆಗೂ ಮುನ್ನ ಲೈಂಗಿಕ ದೌರ್ಜನ್ಯ - ಶವ ಪರೀಕ್ಷೆ ವೇಳೆ ಸತ್ಯ ಬಹಿರಂಗ!

SCROLL FOR NEXT