ಮುಕ್ತಾರ್ ಅಬ್ಬಾಸ್ ನಖ್ವಿ 
ದೇಶ

ಅಲ್ಪಸಂಖ್ಯಾತರೂ ಸೇರಿ ಎಲ್ಲಾ ವರ್ಗದವರಿಗೂ ಎನ್ ಡಿಎ ಕೆಲಸ ಮಾಡಿದೆ: ಸಚಿವ ನಖ್ವಿ

ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಕಾರಿಯಾಗುವಂತಹ ಕೆಲಸ ಮಾಡಿದೆ ಎಂದು ಹೇಳಿದ್ದಾರೆ.

ಗಾಜಿಯಾಬಾದ್: ಮೇ. ತಿಂಗಳಿಗೆ ಕೇಂದ್ರ ಸರ್ಕಾರ ಅಸ್ತಿತ್ವಕ್ಕೆ ಬಂದು ಮೂರು ವರ್ಷಗಳು ಪೂರ್ಣಗೊಳ್ಳಲಿದೆ, ಈ ಬಗ್ಗೆ ಮಾತನಾಡಿರುವ ಕೇಂದ್ರ ಸಚಿವ ಮುಕ್ತಾರ್ ಅಬ್ಬಾಸ್ ನಖ್ವಿ ಎನ್ ಡಿಎ ಸರ್ಕಾರ ಅಲ್ಪಸಂಖ್ಯಾತರೂ ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಕಾರಿಯಾಗುವಂತಹ ಕೆಲಸ ಮಾಡಿದೆ ಎಂದು ಹೇಳಿದ್ದಾರೆ. 
ಅಲ್ಪಸಂಖ್ಯಾತ ಇಲಾಖೆಯ ರಾಜ್ಯ ಸಚಿವರಾಗಿರುವ ಮುಕ್ತಾರ್ ಅಬ್ಬಾಸ್ ನಖ್ವಿ, ಸಮಗ್ರ ಅಭಿವೃದ್ಧಿಯ ಸಿದ್ಧಾಂತದ ಬದ್ಧತೆಯನ್ನು ಮರೆಸಿ, ಅರಾಜಕತೆಯತ್ತ ಕೊಂಡೊಯ್ಯುವ ಯಾವುದೇ ಷಡ್ಯಂತ್ರಗಳಿಗೂ ಕೇಂದ್ರ ಹಾಗು ಉತ್ತರ ಪ್ರದೇಶ ಸರ್ಕಾರಗಳು ಅವಕಾಶ ಕೊಡುವುದಿಲ್ಲ ಎಂದು ತಿಳಿಸಿದ್ದಾರೆ. 
ಅಂತ್ಯೋದಯ ಕಾರ್ಯಕ್ರಮದ ಮೂಲಕ ದೇಶದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಯೋಜನೆಗಳ ಲಾಭ ದೊರೆಯುವಂತೆ ಕಳೆದ ಮೂರು ವರ್ಷಗಳಲ್ಲಿ ಮಾಡಿದ್ದೇವೆ. ಇದರಿಂದಾಗಿ ಅಲ್ಪಸಂಖ್ಯಾತರು ಸೇರಿದಂತೆ ಎಲ್ಲಾ ವರ್ಗದವರಿಗೂ ಸಹಾಯ ಆಗಿದೆ ಎಂದು ಮುಕ್ತಾರ್ ಅಬ್ಬಾಸ್ ನಖ್ವಿ ಹೇಳಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

INDIA ಸಭೆಯಲ್ಲಿ ಭಾಗವಹಿಸಿರುವ ಮಮತಾಗೆ ಬಿಗ್ ಶಾಕ್; NDAಗೆ ಬೆಂಬಲ ನೀಡಿದ 20 TMC ಸಂಸದರು!

ಸುಕನ್ಯಾ ಅಕ್ರಮ ಸಂಬಂಧ ವೀರಪ್ಪನ್ ಹೇಳಿಕೆ: ನಟಿಗೆ 10 ಲಕ್ಷ ಪರಿಹಾರ ನೀಡುವಂತೆ Sun Tvಗೆ ಹೈಕೋರ್ಟ್ ನಿರ್ದೇಶನ!

ಪರಮೇಶ್ವರಗೆ ಮುಖ್ಯಮಂತ್ರಿ ಸ್ಥಾನ ಸಿಗಬೇಕಿತ್ತಾ?: 3 ಬಾರಿ ಸಿಎಂ ಸ್ಥಾನ ಕೈತಪ್ಪಿದ್ದಕ್ಕೆ ಕಣ್ಣೀರಿಟ್ಟ DCM! Video

ಮೋದಿ ಸರ್ಕಾರದ ವಿರುದ್ಧ ಮಹಾಸಮರಕ್ಕೆ INDIA ಮೈತ್ರಿಕೂಟ ಸಜ್ಜು: ಭಿನ್ನಾಭಿಪ್ರಾಯಗಳ ನಡುವೆಯೂ ಬಲ ತುಂಬುವ ಯತ್ನ, ‘ಒಗ್ಗಟ್ಟೇ ನಮ್ಮ ಶಕ್ತಿ’ ಎಂದ ಮಲ್ಲಿಕಾರ್ಜುನ ಖರ್ಗೆ..!

ಆರ್. ಮಾಧವನ್‌ ಹಿರಿಮೆಗೆ ಮತ್ತೊಂದು ಗರಿ: ಬಹುಮುಖ ಪ್ರತಿಭೆ ನಟ, ಚಿತ್ರಕಥೆಗಾರ, ನಿರ್ದೇಶಕನಿಗೆ Padma Shri ಪ್ರಶಸ್ತಿ

SCROLL FOR NEXT