ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಸಚಿವ ಗೋಪಾಲ್ ರಾಯ್ 
ದೇಶ

ಎಂಸಿಡಿ ಫಲಿತಾಂಶ: ಇದು ಮೋದಿ ಅಲೆ ಅಲ್ಲ, ಇವಿಎಂ ಅಲೆ- ಮತ್ತೆ ಆಪ್ ಕ್ಯಾತೆ

ಆಮ್ ಆದ್ಮಿ ಪಕ್ಷಕ್ಕೆ ಪ್ರತಿಷ್ಟೆಯ ಚುನಾವಣೆಯಾಗಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಬೀತು ಪಡಿಸಿದ್ದು, ಇದೀಗ ಇವಿಎಂ (ವಿದ್ಯುನ್ಮಾನ ಮತಯಂತ್ರ) ಕುರಿತಂತೆ ಆಮ್ ಆದ್ಮಿ ಪಕ್ಷ ಮತ್ತೆ ಕ್ಯಾತೆ...

ನವದೆಹಲಿ: ಆಮ್ ಆದ್ಮಿ ಪಕ್ಷಕ್ಕೆ ಪ್ರತಿಷ್ಟೆಯ ಚುನಾವಣೆಯಾಗಿದ್ದ ದೆಹಲಿ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಸ್ಪಷ್ಟ ಬಹುಮತ ಸಾಬೀತು ಪಡಿಸಿದ್ದು, ಇದೀಗ ಇವಿಎಂ (ವಿದ್ಯುನ್ಮಾನ ಮತಯಂತ್ರ) ಕುರಿತಂತೆ ಆಮ್ ಆದ್ಮಿ ಪಕ್ಷ ಮತ್ತೆ ಕ್ಯಾತೆ ತೆಗೆದಿದೆ. 
ಮೋದಿ ಅಲೆ ನಡುವೆಯೂ ಪಾಲಿಕೆ ಚುನಾವಣೆಯಲ್ಲಿ ಬಹುಮತ ಸಾಬೀತುಪಡಿಸುತ್ತೇವೆಂದು ಹೇಳಿದ್ದ ಆದ್ಮಿ ಪಕ್ಷಕ್ಕೆ ಇಂದಿನ ಫಲಿತಾಂಶ ತೀವ್ರ ಮುಖಭಂಗವಾಗುವಂತೆ ಮಾಡಿದೆ. ಈ ಹಿನ್ನಲೆಯಲ್ಲಿ ಮತ್ತೆ ಖ್ಯಾತೆ ತೆಗೆದಿರುವ ಆಮ್ ಆದ್ಮಿ ಪಕ್ಷ, ಇದು ಮೋದಿ ಅಲೆಯಲ್ಲ... ಕೇವಲ ಇವಿಎಂ ಅಲೆಯಷ್ಟೇ ಎಂದು ಆರೋಪಿಸಿದೆ. 
ಪಾಲಿಕೆ ಚುನಾವಣಾ ಫಲಿತಾಂಶದ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಆಮ್ ಆದ್ಮಿ ಪಕ್ಷದ ನಾಯಕ ಹಾಗೂ ದೆಹಲಿ ಸಚಿವ ಗೋಪಾಲ್ ರಾಯ್ ಅವರು, ಪಾಲಿಕೆ ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುತ್ತಿರುವುದು ದೊಡ್ಡ ಪವಾಡವೇನಲ್ಲ. ಇವಿಎಂ ಗೋಲ್ ಮಾಲ್ ನಿಂದಾಗಿ ಬಿಜೆಪಿ ಗೆಲವು ಸಾಧಿಸಿದೆ ಎಂದು ಹೇಳಿದ್ದಾರೆ. 
ಬಿಜೆಪಿಯ ಈ ಮ್ಯಾಜಿಕ್ ಗೆಲುವಿಗೆ ಕಾರಣ ಇವಿಎಂ ಅಲೆಯೇ ಹೊರತು, ಮೋದಿ ಅಲೆಯಲ್ಲ. ಹಾಗಾಗಿ ಇವಿಎಂ ಅಲೆ ಮುಕ್ತ ಮಾಡುವ ಬಗ್ಗೆ ಇಡೀ ದೇಶದ ಜನತೆ ಚಿಂತನೆ ನಡೆಸಬೇಕಾದ ಸಮಯ ಎದುರಾಗಿದೆ. 
ಕಳೆದ 6 ವರ್ಷಗಳಿಂದಲೂ ದೆಹಲಿ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರ ನಡೆಸುತ್ತಿದೆ. ಆದರೆ, ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಹಾಗಿದ್ದರೂ, ಚುನಾವಣೆಯಲ್ಲಿ ಬಿಜೆಪಿ ಗೆಲವು ಸಾಧಿಸುತ್ತಿದೆ ಎಂದರೆ, ಅದೇನೂ ಪವಾಡವಲ್ಲ. ಮೋದಿ ಅಲೆಯಿಂದ ಈ ಫಲಿತಾಂಶ ಬಂದಿಲ್ಲ. ಇವಿಎಂ ಅಲೆಯಿಂದ ಬಂದಿದೆ. 
ಈ ರೀತಿಯ ಬೆಳವಣಿಗೆಗಳು ಪ್ರಜಾಪ್ರಭುತ್ವವನ್ನು ಅಪಾಯಕ್ಕೆ ಸಿಲುಕಿಸಲಿದೆ. ಅಂತಿನ ಫಲಿತಾಂಶದ ಹೊರಬಿದ್ದ ಬಳಿಕ ಆಪ್ ಮುಂದಿನ ನಿರ್ಧಾರಗಳನ್ನು ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ನಮ್ಮ ಪಾತ್ರವಿಲ್ಲ': ಆಫ್ಘನ್ ಸಚಿವರ ಸುದ್ದಿಗೋಷ್ಠಿ ವೇಳೆ ಮಹಿಳಾ ಪತ್ರಕರ್ತೆಯರಿಗೆ ನಿರ್ಬಂಧ ಕುರಿತು 'ಕೇಂದ್ರ' ಸ್ಪಷ್ಟನೆ

'ನಂಗೇ ಕೊಡಿ ಎಂದು ನಾನೇನು ಕೇಳಿಲ್ಲ..': ನೊಬೆಲ್ ಶಾಂತಿ ಪ್ರಶಸ್ತಿ ಕುರಿತು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮಾತು!

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

2nd test, Day 2: 518 ರನ್ ಗಳಿಗೆ ಭಾರತ ಇನ್ನಿಂಗ್ಸ್ ಡಿಕ್ಲೇರ್!

CM ಆಗುವ ಕಾಲ ಹತ್ತಿರ ಬಂದಿದೆ ಎಂದು ನಾನು ಹೇಳಿಲ್ಲ: ಸುದ್ದಿ ತಿರುಚಿ ಪ್ರಸಾರ ಮಾಡಿದರೆ ಮಾನನಷ್ಟ ಮೊಕದ್ದಮೆ ಅನಿವಾರ್ಯ; ಡಿ ಕೆ ಶಿವಕುಮಾರ್

SCROLL FOR NEXT