ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿ 
ದೇಶ

ರಾಷ್ಟ್ರಪತಿ ಸ್ಥಾನಕ್ಕೆ ಆನಂದಿಬೆನ್ ಪಟೇಲ್ ಅತ್ಯುತ್ತಮ ಅಭ್ಯರ್ಥಿ: ಸುಬ್ರಮಣಿಯನ್ ಸ್ವಾಮಿ

ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದು, ಎಲ್ಲರ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿಯಲು ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿ ಸ್ಥಾನಕ್ಕೆ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಅತ್ಯುತ್ತಮ ಅಭ್ಯರ್ಥಿಯೆಂದು...

ನವದೆಹಲಿ: ರಾಷ್ಟ್ರಪತಿ ಚುನಾವಣೆ ಹತ್ತಿರಬರುತ್ತಿದ್ದು, ಎಲ್ಲರ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿಯಲು ಆರಂಭವಾಗುತ್ತಿದೆ. ಇದರ ಬೆನ್ನಲ್ಲೇ, ರಾಷ್ಟ್ರಪತಿ ಸ್ಥಾನಕ್ಕೆ ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು ಅತ್ಯುತ್ತಮ ಅಭ್ಯರ್ಥಿಯೆಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಹೇಳಿದ್ದಾರೆ. 
ಈ ಕುರಿತಂತೆ ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಹೇಳಿಕೊಂಡಿರುವ ಸುಬ್ರಮಣಿಯನ್ ಸ್ವಾಮಿಯವರು, ರಾಷ್ಟ್ರಪತಿ ಸ್ಥಾನಕ್ಕೆ ಅತ್ಯುತ್ತಮವಾದ ಅಭ್ಯರ್ಥಿಯೆಂದರೆ ಅದು ಗುಜರಾತ್ ಮಾಜಿ ಮುಖ್ಯಮಂತ್ರಿ ಆನಂದಿಬೆನ್ ಪಟೇಲ್ ಅವರು. ಆನಂದಿಬೆನ್ ಪಟೇಲ್ ಅವರು ಗುಜರಾತಿ ಆದರೇನು? ನಾನೂ ಕೂಡ ಗುಜರಾತ್ ರಾಜ್ಯದ ಅಳಿಯ ಎಂದು ಹೇಳಿಕೊಂಡಿದ್ದಾರೆ. 
ಮುಂಬರುವ ಜುಲೈ ತಿಂಗಳ ಅಂತ್ಯದಲ್ಲಿ ರಾಷ್ಟ್ರಪತಿ ಚುನಾವಣೆ ನಡೆಯುವ ಸಾಧ್ಯತೆಗಳಿವೆ. ಹೀಗಾಗಿ, ಬಿಜೆಪಿ ಸೇರಿದಂತೆ ಇತರೆ ಪಕ್ಷಗಳ ಚಿತ್ತ ಇದೀಗ ರಾಷ್ಟ್ರಪತಿ ಭವನದತ್ತ ಹರಿದಿದೆ. ಗುಜರಾತ್ ನ ಬಿಜೆಪಿ ಕಾರ್ಯಕರ್ತರು ರಾಷ್ಟ್ರಪತಿ ಸ್ಥಾನಕ್ಕೆ ಪಟೇಲ್ ಅವರು ನಿಂತರೆ ಹೇಗೆ ಎಂಬುದರ ಬಗ್ಗೆ ಚಿಂತನೆ ನಡೆಸುತ್ತಿದ್ದಾರೆ. ಇದಕ್ಕೆ ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು ಬೆಂಬಲ ಸೂಚಿಸಿದ್ದಾರೆ. ಆದರೆ, ಉಳಿದ ಇನ್ನಾವುದೇ ಬಿಜೆಪಿ ನಾಯಕರು ಈ ಬಗ್ಗೆ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿಲ್ಲ. ಈ ಬಗ್ಗೆ ಆನಂದಿಬೆನ್ ಪಟೇಲ್ ಅವರೂ ಕೂಡ ಪ್ರತಿಕ್ರಿಯೆ ನೀಡಲು ನಿರಾಕರಿಸಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT